![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 13, 2021, 12:52 PM IST
ಅಫಜಲಪುರ: ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿ, ಅಪ್ರತಿಮ ದೇಶಭಕ್ತ ಹಾಗೂ ಬ್ರಿಟಿಷರ ವಿರುದ್ಧ ಹೋರಾಡುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ವೀರಯೋಧ ಟಿಪ್ಪು ಸುಲ್ತಾನ್ ವ್ಯಕ್ತಿತ್ವ ಎಲ್ಲ ಜನಾಂಗದವರಿಗೆ ಮಾದರಿ ಎಂದು ಯುವ ಮುಖಂಡ ಸಮ್ಸುದ್ದಿನ್ ಹೇಳಕಾರ್ ಹೇಳಿದರು.
ತಾಲೂಕಿನ ಕರಜಗಿ ಗ್ರಾಮದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ವತಿಯಿಂದ 271ನೇ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಧ್ವನಿ ಎತ್ತಿದ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಟಿಪ್ಪು ಕೂಡಾ ಒಬ್ಬರು. ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ ತಂದವರು. ಮೈಸೂರು ರಾಜ್ಯಕ್ಕೆ ರೇಷ್ಮೆ ಪರಿಚಯಿಸಿದವರು. ಇಂತಹ ಉದಾತ್ತ ವ್ಯಕ್ತಿತ್ವದ ಟಿಪ್ಪು ಜಯಂತಿ ಆಚರಿಸುವುದನ್ನು ವಿರೋಧಿಸುವುದು ರಾಜಕೀಯ ಪ್ರೇರಿತವಾಗಿದೆ ಎಂದರು.
ನಿಜವಾದ ದೇಶಭಕ್ತನ ಕುರಿತ ಮಾಹಿತಿಯನ್ನು ಪಠ್ಯದಿಂದ ಕೈ ಬಿಟ್ಟಿದ್ದು ದುರದೃಷ್ಟಕರ. ರಾಷ್ಟ್ರನಾಯಕರನ್ನು ಒಂದು ಕೋಮಿಗೆ ಸೀಮಿತಗೊಳಿಸಿದ್ದು ಸರಿಯಲ್ಲ ಎಂದರು.
ಗ್ರಾಪಂ ಅಧ್ಯಕ್ಷ ವಿಠೊಬಾ ಹಿರೇಕುರಬರ, ಸದಸ್ಯರಾದ ಇರ್ಫಾನ ಜಮಾದಾರ, ಪೀರಪ್ಪ ನಾಯ್ಕೋಡಿ, ಉಸ್ಮಾನ ಚೌಧರಿ, ಮೈಹಿಬೂಬ ಬಂಟನೂರ, ಇರ್ಫಾನ್ ಜಮಾದಾರ, ಸೈಫನ್ ಮಲ್ಲಾಬಾದ, ರಜಾಕ್ ಮುಜಾವರ, ಅಯ್ಯೂಬ ಮುಜಾವರ, ಹೈದರ್ ಮುಜಾವರ, ಸೈಫನ್ ಮುಲ್ಲಾ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.