30ರಿಂದ ಶ್ರೀಶೈಲದಲ್ಲಿ ಯುಗಾದಿ ಮಹೋತ್ಸವ


Team Udayavani, Mar 28, 2022, 6:30 PM IST

14

ಕಲಬುರಗಿ: ನೆರೆಯ ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲಂ ಸಾರಂಗಧರ ಮಠದಲ್ಲಿ ಯುಗಾದಿ ಮಹೋತ್ಸವ ಪ್ರಯುಕ್ತ ಮಾ.30ರಿಂದ ಏಪ್ರಿಲ್‌ 2ರ ವರೆಗೆ ಜಗದ್ಗುರು ಸಾರಂಗಧರೇಶ್ವರ ರಾಷ್ಟ್ರೀಯ ಸೇವಾ ಪೀಠದಿಂದ ಶಿವತತ್ವ ಪ್ರವಚನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವರ್ಷಂಪ್ರತಿ ಶಿವರಾತ್ರಿ, ಯುಗಾದಿ ಮಹೋತ್ಸವದ ಅಂಗವಾಗಿ ಸಾರಂಗಧರ ಮಠದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗಿದೆ. ಈ ಸಲ ಮಾ.30ರಂದು ನಿಡುಮಾಮಿಡಿ ಜಗದ್ಗರು ಮಠದ ಪೀಠಾಧ್ಯಕ್ಷ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಿಂಚನಸೂರ ಕಲ್ಮಠದ ಪೂಜ್ಯ ಸಿದ್ಧಮಲ್ಲ ಶಿವಾಚಾರ್ಯರ ಅಧ್ಯಕ್ಷತೆಯಲ್ಲಿ ನಡೆಯುವ ಆರಂಭದ ಕಾರ್ಯಕ್ರಮವನ್ನು ಕ್ರೇಡಲ್‌ ಅಧ್ಯಕ್ಷ ಚಂದು ಪಾಟೀಲ ಉದ್ಘಾಟಿಸುವರು ಎಂದು ಸಾರಂಗಧರ ಪೀಠದ ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೊದಲ ದಿನದ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ, ಗಣ್ಯರಾದ ನೀಲಕಂಠರಾವ್‌ ಮೂಲಗೆ, ಶರಣು ಪಪ್ಪಾ, ಮಲ್ಲಿಕಾರ್ಜುನ ಖೇಮಜಿ, ಗೌಸ ಬಾಬಾ, ಎಂ.ಎಸ್‌.ಪಾಟೀಲ ನರಿಬೋಳ, ದಿವ್ಯಾ ಹಾಗರಗಿ ಇತರರು ಪಾಲ್ಗೊಳ್ಳಲಿದ್ದಾರೆ.

ಮಾ.31ರಂದು ಜಗದ್ಗುರು ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸೊನ್ನದ ಡಾ| ಶಿವಾನಂದ ಮಹಾ ಸ್ವಾಮೀಜಿ, ಚವದಾಪುರಿ ಹಿರೇಮಠದ ಡಾ| ರಾಜಶೇಖರ ಶಿವಾಚಾರ್ಯರು, ಮಾಜಿ ಮೇಯರ್‌ ಶರಣು ಮೋದಿ, ಉದ್ಯಮಿದಾರ ಸಂತೋಷ ಬಿಲಗುಂದಿ ಭಾಗವಹಿಸುವರು ಎಂದು ವಿವರಿಸಿದರು.

ಏ.1ರಂದು ನಡೆಯುವ ಕಾರ್ಯಕ್ರಮವನ್ನು ಕೇಂದ್ರದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಉದ್ಘಾಟಿಸುವವರು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್‌ಡಿಬಿ) ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ ಅಧ್ಯಕ್ಷತೆ ವಹಿಸುವರು. ಶಾಸಕರಾದ ಬಸವರಾಜ ಮತ್ತಿಮಡು, ಶರಣು ಸಲಗರ್‌, ಬಿ.ಜಿ.ಪಾಟೀಲ, ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದರು.

ಏ.2ರಂದು ಬೆಳಗ್ಗೆ 10ಕ್ಕೆ ಯುಗಾದಿ ಹಬ್ಬದಂದು ಶಿವೈಕ್ಯ ಜಗದ್ಗುರು ರಾಜದೇಶಿಕೇಂದ್ರ ಸ್ವಾಮೀಜಿ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಶಿವಾಷ್ಟೋತ್ತಾರ ನಾಮಾವಳಿ, ಮಹಾಮಂಗಳಾರತಿ, ಪೂಜ್ಯ ಜಗದ್ಗುರು ಮಹಾಸನ್ನಿ ಧಿಯವರಿಂದ ಆಶೀರ್ವಚನ ಸಿಗಲಿದೆ. ನಾಡಿನಾದ್ಯಂತ ಆಗಮಿಸುವ ಭಕ್ತರಿಗೆ ಶ್ರೀಮಠದಲ್ಲಿ ಎಂದಿನಂತೆ ವಸತಿ ಹಾಗೂ ಪ್ರಸಾದ ವ್ಯವಸ್ಥೆವಿರಲಿದೆ ಎಂದು ವಿವರಿಸಿದರು. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮುಂತಾದವರಿದ್ದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.