Wadi: ಬೀದಿಗೆ ಬಿದ್ದ ರೈಲು ನಿಲ್ದಾಣ ಸಫಾಯಿ ಕಾರ್ಮಿಕರು;

ಸಂಬಳ ಕೇಳಿ ಕೆಲಸ ಕಳೆದುಕೊಂಡ ರೈಲ್ವೆ ಕಾರ್ಮಿಕರು!

Team Udayavani, Sep 20, 2023, 11:31 AM IST

4-wadi

ವಾಡಿ: ದುಡಿಮೆಗೆ ತಕ್ಕ ಸಂಬಳ ನೀಡುವಂತೆ ಬೇಡಿಕೆಯಿಟ್ಟ ರೈಲು ನಿಲ್ದಾಣ ಸಫಾಯಿ ಕಾರ್ಮಿಕರನ್ನು ಗುತ್ತಿಗೆದಾರ ಕೆಲಸದಿಂದಲೇ ಕಿತ್ತುಹಾಕಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಂಭವಿಸಿದೆ.

ಕಳೆದ ಎರಡು ತಿಂಗಳಿಂದ ಕೆಲಸವಿಲ್ಲದೆ ಬೀದಿಗೆ ಬಿದ್ದು ಗೋಳಾಡುತ್ತಿರುವ ರೈಲ್ವೆ ಗುತ್ತಿಗೆ ಸಫಾಯಿ ಕಾರ್ಮಿಕರು ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಕಣ್ಣೀರಿಡುತ್ತಿದ್ದಾರೆ.

ಸೋಮವಾರ ಪಟ್ಟಣದ ರೈಲು ನಿಲ್ದಾಣ ಪ್ರದೇಶದಲ್ಲಿ ದಲಿತ ಸೇನೆಯ ಪದಾಧಿಕಾರಿಗಳ ನೇತೃತ್ವದಲ್ಲಿ ಜಮಾಯಿಸಿದ್ದ ಮೂವತ್ತಕ್ಕೂ ಹೆಚ್ಚು ಜನ ರೈಲು ನಿಲ್ದಾಣದ ಗುತ್ತಿಗೆ ಸಫಾಯಿ ಕಾರ್ಮಿಕರು, ಕೆಲಸದಿಂದ ತೆಗೆದುಹಾಕಿದ ತ್ರೀಸ್ಟಾರ್ ಗುತ್ತಿಗೆದಾರ ಮಾಲೀಕನ ವಿರುದ್ಧ ಸುದ್ದಿಗೋಷ್ಠಿ ನಡೆಸುವ ಮೂಲಕ ತಮ್ಮ ಅಳಲು ತೋಡಿಕೊಂಡರು.

ಕಳೆದ ಏಳೆಂಟು ವರ್ಷಗಳಿಂದ ವಾಡಿ ರೈಲು ನಿಲ್ದಾಣದಲ್ಲಿ ಗುತ್ತೆಗೆ ಸಫಾಯಿ ಕರ್ಮಚಾರಿಗಳಾಗಿ ದುಡಿಯುತ್ತಿದ್ದೇವೆ. ಗುತ್ತಿಗೆದಾರರು ಬದಲಾದರೂ ಕಾರ್ಮಿಕರನ್ನು ಬದಲಿಸುತ್ತಿರಲಿಲ್ಲ. ಆದರೆ ಪ್ರತಿಯೊಬ್ಬ ಗುತ್ತಿಗೆದಾರನೂ ಸಹ ನಮ್ಮ ಖಾತೆಗೆ ಪಾವತಿಯಾಗುತ್ತಿದ್ದ ಒಟ್ಟಾರೆ ಸಂಬಳದಲ್ಲಿ ಶೇ.೫೦ ರಷ್ಟು ವೇತನ ವಾಪಸ್ ಪಡೆಯುತ್ತಿದ್ದರು. ಈಗ ಹೊಸದಾಗಿ ಬಂದಿರುವ ತ್ರೀಸ್ಟಾರ್ ಗುತ್ತಿಗೆದಾರ ಕೂಡ ಅದೇ ಶೋಷಣೆ ಮುಂದುವರೆಸಿದ್ದಾನೆ. ಖಾತೆಗೆ ಜಮೆಯಾದ ವೇತನದಲ್ಲಿ ಗುತ್ತಿಗೆದಾರನಿಗೆ ಪಾಲು ಕೊಡಲೇಬೇಕು. ಇಲ್ಲದಿದ್ದರೆ ಕೆಲಸದಿಂದ ತೆಗೆದುಹಾಕುವ ಬೆದರಿಕೆ ನೀಡಿದ್ದಾರೆ. ಪರಿಣಾಮ ಕಣ್ಣೀರು ಕಪಾಳಕ್ಕೆ ಸುರಿದರೂ ಸಂಬಳದಲ್ಲಿ ಕಮಿಷನ್ ವಾಪಸ್ ಕೊಟ್ಟಿದ್ದೇವೆ. ಕಾರ್ಮಿಕರು ರಜೆ ಪಡೆದ ದಿನಗಳನ್ನು ಸೇರಿಸಿಯೇ ಸಂಬಳ ಪಾವತಿಯಾಗುತ್ತಿತ್ತು. ಆದರೆ ರಜೆ ದಿನಗಳ ಸಂಬಳ ವಾಪಸ್ ಗುತ್ತಿಗೆದಾರನಿಗೆ ನೀಡಬೇಕು. ಸಂಬಳ ಕಡಿತದ ಮೋಸವನ್ನು ಪ್ರಶ್ನಿಸಿದರೆ ನಮ್ಮನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಬೇರೆ ಕಾರ್ಮಿಕರನ್ನು ತಂದು ಕೆಲಸ ಮಾಡಿಸುತ್ತಿದ್ದಾರೆ. ಗುತ್ತಿಗೆದಾರನ ಮೋಸದಿಂದ ನಮ್ಮ ಜೀವನ ನರಕವಾಗಿದೆ. ನಮಗೆ ನ್ಯಾಯ ಕೊಡಿಸುವವರು ಯಾರೂ ಇಲ್ಲ ಎಂದು ಮಹಿಳಾ ಕಾರ್ಮಿಕರು ದುಃಖ ಹೊರಹಾಕಿದರು.

ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ಮಾತನಾಡಿದ ದಲಿತ ಸೇನೆಯ ಜಿಲ್ಲಾಧ್ಯಕ್ಷ, ನ್ಯಾಯವಾದಿ ಶ್ರವಣಕುಮಾರ ಮೊಸಲಗಿ, ರೈಲು ನಿಲ್ದಾಣದ ಸ್ವಚ್ಚತೆ ಮಾಡುತ್ತಿರುವ ಗುತ್ತಿಗೆ ಸಫಾಯಿ ಕಾರ್ಮಿಕರು ದಲಿತರಾಗಿದ್ದು, ಅತ್ಯಂತ ಬಡ ಕುಟುಂಬದವರಾಗಿದ್ದಾರೆ. ಇವರಿಗೆ ಸಿಗಬೇಕಾದ ಕಾನೂನುಬದ್ಧ ವೇತನ ನೀಡದೆ ಗುತ್ತಿಗೆದಾರ ವಂಚಿಸಿದ್ದಾನೆ. ಪಾವತಿಸಲಾದ ಸಂಬಳದಲ್ಲಿ ಕಮಿಷನ್ ವಾಪಸ್ ಪಡೆದು ದ್ರೋಹ ಮಾಡಿದ್ದಾನೆ. ಸಂಬಳ ಕಡಿತ ಮಾಡಬೇಡಿ ಎಂದು ಕೇಳಿದ್ದಕ್ಕೆ ಮೂವತ್ತು ಜನ ಕಾರ್ಮಿಕರನ್ನು ಕೆಲಸದಿಂದಲೇ ಕಿತ್ತುಹಾಕಿ ಅನ್ಯಾಯ ಮಾಡಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈಲ್ವೆ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡಬೇಕು. ನಿರ್ಲಕ್ಷ್ಯ ವಹಸಿದರೆ ರೈಲ್ವೆ ನಿಲ್ದಾಣದ ತ್ರೀಸ್ಟಾರ್ ಗುತ್ತಿಗೆದಾರನ ವಿರುದ್ಧ ಕಾನೂನು ಹೋರಾಟ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ದಲಿತ ಸೇನೆಯ ನಗರ ಅಧ್ಯಕ್ಷ ರಘುವೀರ ಪವಾರ, ಐಎನ್‌ಟಿಯುಸಿ ಅಧ್ಯಕ್ಷ ರಾಮಮೂರ್ತಿ ಶ್ರೀಧರ ಚಿಟ್ಟೆಂಪಳ್ಳಿ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.