ನೀರಾವರಿ ಸಲಹಾ ಸಮಿತಿ ಸಭೆ ಯಾವಾಗ?


Team Udayavani, Nov 16, 2021, 12:25 PM IST

10niravani

ಹುಣಸಗಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಿಂಗಾರು ಹಂಗಾಮಿನ ಭತ್ತ ಬೆಳೆಯಲು ನೀರಿನ ಚಿಂತೆ ಆರಂಭಿಸಿದರೆ, ಅತ್ತ ಅಧಿಕಾರಿಗಳು ನೀಡುವ ಮಾಹಿತಿ ಪ್ರಕಾರ ಹಿಂಗಾರು ಹಂಗಾಮಿಗೆ ನೀರು ಹರಿಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಕಳೆದ ವರ್ಷ ಆಲಮಟ್ಟಿ ಜಲಾಶಯದಿಂದ ನವೆಂಬರ್‌ ತಿಂಗಳವರೆಗೂ ಒಳ ಹರಿವಿತ್ತು. ಆದರೆ, 2021 ಅಕ್ಟೋಬರ್‌ ಮೊದಲ ವಾರದಲ್ಲಿಯೇ ಆಲಮಟ್ಟಿ ಜಲಾಶಯದಿಂದ ಒಳ ಹರಿವು ಸ್ಥಗಿತಗೊಂಡಿದೆ. ಹೀಗಾಗಿ ನೀರಿನ ಸಂಗ್ರಹ ಲಭ್ಯತೆ ಇಲ್ಲ. ಎಲ್ಲದಕ್ಕೂ ಸಲಹಾ ಸಮಿತಿ ಕೈಗೊಳ್ಳುವ ನಿರ್ಣಯವೇ ಅಂತಿಮ ಎಂದು ಕೆಬಿಜೆಎನ್ನೆಲ್‌ ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಬಸವಸಾಗರ ಹಾಗೂ ಆಲಮಟ್ಟಿ ಜಲಾಶಯ ಸೇರಿ 80 ಟಿಎಂಸಿ ಅಡಿ ನೀರಿನ ಸಂಗ್ರಹ ಇದೆ. ಇದರಲ್ಲಿ 20 ಟಿಎಂಸಿ ಅಡಿ ಕುಡಿವ ನೀರಿಗೆ ಹಾಗೂ ಉಳಿದ 40 ಟಿಎಂಸಿ ಅಡಿ ನೀರಿನಲ್ಲಿ ಜಲಚರ ಬೆಡ್‌ ಸ್ಟೋರೇಜ್‌ 20 ಟಿಎಂಸಿ ಅಡಿ ನೀರು ಸಂಗ್ರಹ ಬೇಕು. ಇದೆಲ್ಲವೂ ಲೆಕ್ಕಿಸಿದಾಗ ವಾರಾಬಂಧಿ ಪದ್ಧತಿ ಅನುಸರಿಸಿದರೆ ಮಾ.15ರವರೆಗೆ ನೀರು ಹರಿಸಬಹುದು ಎನ್ನುತ್ತಾರೆ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಶಂಕರ ನಾಡಿ.

ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ, ಕಬ್ಬು ನಿಷೇಧಿತ ಬೆಳೆಯಾಗಿವೆ. ಹೀಗಾಗಿ ಕಡಿಮೆ ಅವಧಿಯಲ್ಲಿ ಅಂದರೆ ಮೂರು ತಿಂಗಳಲ್ಲಿಯೇ ಕೈಗೆ ಬರುವ ಬೆಳೆ ಬೆಳೆಯಲು ಈಗಾಗಲೇ ರೈತರಿಗೆ ಮಾಹಿತಿ ನೀಡಲಾಗಿದೆ. ಪ್ರತಿ ವರ್ಷ ರೈತರಿಗೆ ಇದೇ ರೀತಿ ಹೇಳಿಕೊಂಡು ಬರಲಾಗಿದೆ ಎಂಬುದು ಅಧಿಕಾರಿಗಳ ಮಾತು.

ಇದನ್ನೂ ಓದಿ:ಹಲವು ವಿಶೇಷತೆಗಳನ್ನು ಹೊಂದಿದೆ ಇಂದು ಉದ್ಘಾಟನೆಯಾಗಲಿರುವ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ

ಈಗಾಗಲೇ ಮುಂಗಾರು ಭತ್ತ ಕಟಾವು ನಡೆದಿವೆ. ಹಿಂದಿನ ವರ್ಷದಂತೆ ನೀರು ಹರಿಸುತ್ತಾರೆಂಬ ನಂಬಿಕೆಯಿಂದ ಕೆಲ ರೈತರು ಹಿಂಗಾರು ಭತ್ತ ನಾಟಿಗಾಗಿ ಸಸಿ ಹಾಕಿದ್ದಾರೆ. ಜಲಾಶಯದಲ್ಲಿ ರೈತರಿಗೆ ಬೇಕಾದಷ್ಟು ನೀರು ಸಂಗ್ರಹ ಇದ್ದಾಗಲೂ ಕೃಷ್ಣಾ ನದಿಗೆ ಅನಗತ್ಯ ನೀರು ಹರಿಸಲಾಗಿದೆ ಎನ್ನುವುದು ರೈತರ ಆಕ್ರೋಶ.

ಅ.28, 2016ರಂದು ಹಿಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ನೀರಾವರಿ ಸಲಹಾ ಸಮಿತಿ ಸಭೆ ಕರೆದು ಮಾಹಿತಿ ನೀಡಿತ್ತು. ಕಳೆದ ವರ್ಷವೂ ನ.18, 2019ರಂದು ಸಭೆ ನಡೆಸಿತ್ತು. ಆದರೆ ಇದೆಲ್ಲವೂ ನೋಡಿದಾಗ ವರ್ಷ ಗತಿಸಿದಂತೆ ಸಲಹಾ ಸಮಿತಿ ಸಭೆ ಮುಂದೂಡಿಕೊಂಡು ಬರುತ್ತಿರುವುದು ಆಶ್ಚರ್ಯ ಮೂಡಿಸಿದೆ. ಆದಾಗ್ಯೂ ಮುಂಚಿತವಾಗಿಯೇ ಪ್ರತಿ ವರ್ಷ ಅಕ್ಟೋಬರ್‌ ತಿಂಗಳಲ್ಲಿಯೇ ನೀರು ಹರಿಸುವ ಮಾಹಿತಿ ರೈತರಿಗೆ ನೀಡಬೇಕಿತ್ತು. ಆದರೂ ರೈತರ ದುರ್ದೈವವೋ ಏನೋ? ಸಭೆ ನಡೆಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಈ ಬಾರಿ ಹಿಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ನಡೆಸುವ ಸಲಹಾ ಸಮಿತಿ ಸಭೆ ರೈತರಿಗೆ ವರವಾಗಲಿದೆಯೋ? ಇಲ್ಲವೋ ಶಾಪವಾಗಲಿದೆಯೋ? ಎನ್ನುವುದನ್ನು ಕಾದುನೋಡಬೇಕು.

ಸಾಕಷ್ಟು ನೀರಿದ್ದಾಗ ರೈತರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಜಲಾಶಯ ಭರ್ತಿಗೊಂಡಾಗ ನದಿಗೆ ಹರಿಸಿದ್ದು ಏಕೆ?. ಇದೊಂದು ಹುನ್ನಾರ. ರೈತರಿಗೆ ಸಮರ್ಪಕ ನೀರು ಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಭಾರೀ ನಷ್ಟ ಅನುಭವಿಸಬೇಕಾಗುತ್ತದೆ. -ಮಲ್ಲಿಕಾರ್ಜುನ ಸತ್ಯಂಪೇಟಿ, ಕ.ರಾ.ರೈ. ಸಂಘ, ರಾಜ್ಯ ಉಪಾಧ್ಯಕ್ಷ

ಈ ಬಾರಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಇತ್ತು. ಅಕ್ಟೋಬರ್‌ ತಿಂಗಳಿಂದ ಈವರೆಗೂ ಸ್ಥಗಿತಗೊಂಡಿದೆ. ಕಡಿಮೆ ಅವಧಿ ಬೆಳೆ ಬೆಳೆದರೆ ಮಾತ್ರ ರೈತರಿಗೆ ವರದಾನ ಆಗಲಿದೆ. ನ.15ರಿಂದ 22ರೊಳಗಾಗಿ ಸಲಹಾ ಸಮಿತಿ ಸಭೆ ನಡೆಸಬಹುದು. -ಶಂಕರ ನಾಯ್ಕೋಡಿ, ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್‌, ನಾರಾಯಣಪುರ

-ಬಾಲಪ್ಪ.ಎಂ. ಕುಪ್ಪಿ

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.