ಕೆರೆಗಳಿಗೆ ಮರುಜೀವ ನೀಡಿದ ಕೋವಿಡ್‌ 19


Team Udayavani, Jun 1, 2020, 5:59 AM IST

krushee lake

ಮೈಸೂರು: ಲಾಕ್‌ಡೌನ್‌ ಹಿನ್ನೆಲೆ ಜಿಲ್ಲೆಯ 800ಕ್ಕೂ ಹೆಚ್ಚು ಕೆರೆಗಳು ಮರುಜೀವ ಪಡೆಯುವಂತಾಗಿದ್ದು, ಕೆರೆಗಳ ಪುನಶ್ಚೇತನ ಕಾರ್ಯ ಆರಂಭವಾಗಿದೆ. ಲಾಕ್‌ಡೌನ್‌ ಹಿನ್ನೆಲೆ ನಗರ ಪ್ರದೇಶದಲ್ಲಿ ಉದ್ಯೋಗ ಕಟ್ಟಿಕೊಂಡಿದ್ದ  ಯುವಕರು ತಮ್ಮ ಹಳ್ಳಿ ಸೇರಿದ್ದರು. ಅಲ್ಲದೇ, ಊರಿನಲ್ಲೇ ಸಣ್ಣ ಪುಟ್ಟ ಕೃಷಿ ಕೆಲಸ ಮಾಡಲು ಶುರು ಮಾಡಿ ದ್ದರು. ಹೀಗೆ ನಗರ ಬಿಟ್ಟು ಗ್ರಾಮ ಸೇರಿದ್ದ ಯುವಕರನ್ನು ಕೃಷಿಯತ್ತ ಸೆಳೆಯಬೇಕು.

ಹಳ್ಳಿಯಲ್ಲೇ ಉಳಿಯುವಂತೆ ಮಾಡಬೇಕು ಎಂಬ ಉದ್ದೇಶದಿಂದ ಗ್ರಾಮಗಳಲ್ಲಿ ಉದ್ಯೋ ಗಾವಕಾಶ ಸೃಷ್ಟಿಸಲು ಸರ್ಕಾರ ನಿರ್ಧರಿಸಿತು. ಅದಕ್ಕಾಗಿ ನರೇಗಾ ಯೋಜನೆಯಡಿ ಕೆರೆಗಳನ್ನು ಸಂರಕ್ಷಣೆ ಮಾಡುವ ಕಾಮಗಾರಿ ಗಳನ್ನು ಕೈಗೆತ್ತಿಕೊಂಡು, ಅಳಿವಿನಂಚಿನಲ್ಲಿದ್ದ ಕೆರೆಗಳಿಗೆ  ಪುನಶ್ಚೇತನಗೊಳಿಸುವ ಕಾರ್ಯಕ್ಕೆ ಯುವ ಸಮುದಾಯವನ್ನು ಬಳಕೆ ಮಾಡಿ ಕೊಳ್ಳಲಾಗುತ್ತಿದೆ. ಹಳ್ಳಿಗಳಲ್ಲಿ ಉಳಿದುಕೊಂಡಿರುವ ಯುವ ಜನತೆಗೆ ಆರ್ಥಿಕ, ಜೀವನ ನಿರ್ವಹಣೆಗೆ ಒತ್ತು ನೀಡುವುದರೊಂದಿಗೆ ಜಿಲ್ಲೆಯಲ್ಲಿ ಕೆರೆ, ಗೋಕುಂಟೆ ಅಭಿವೃದ್ಧಿ ಸೇರಿ ದಂತೆ ಒಟ್ಟು 800ಕ್ಕೂ ಹೆಚ್ಚು ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗಿದೆ.

10 ಸಾವಿರ ಜಾಬ್‌ಕಾರ್ಡ್‌ ವಿತರಣೆ: ನಗರ ಪ್ರದೇಶದಿಂದ ಯುವಕವರು ಹಳ್ಳಿ ಸೇರಿದರು. ಅಲ್ಲದೆ, ಹಳ್ಳಿಗಳಲ್ಲೂ ಸಾಕಷ್ಟು ಮಂದಿ ಇದ್ದರು. ಇದನ್ನು ಮನಗಂಡು ನರೇಗಾ ಯೋಜನೆಯಡಿ ಕಳೆದ 2 ತಿಂಗಳಿ ನಲ್ಲಿ 10 ಸಾವಿರ ಜನರಿಗೆ  ಜಾಬ್‌ಕಾರ್ಡ್‌ ವಿತರಿಸಲಾಗಿದೆ. ಇದಕ್ಕಾಗಿ 4.5 ಲಕ್ಷ ವ್ಯಯಿಸ ಲಾಗಿದ್ದು, 30 ಲಕ್ಷ ಗುರಿ ತಲುಪುವ ನಿರೀಕ್ಷೆ ಯಿದೆ. ಹೂಳು ಎತ್ತುವುದು, ಕೃಷಿ, ಮೀನು ಹೊಂಡ ನಿರ್ಮಾಣ, ಕೆರೆ ಏರಿ ಬಲವರ್ಧನೆ, ಕೆರೆ ಸರಹದ್ದಿಗೆ ಟ್ರಂಚ್‌ ಹಾಕುವುದು,  ಕೆರೆಯ ಸುತ್ತಮುತ್ತ ಸಸಿ ನೆಡುವುದು ಸೇರಿದಂತೆ ನಾನಾ ಕೆಲಸಗಳನ್ನು ಶುರು ಮಾಡಲಾಗಿದೆ.

ಏನಿದು ಕಾಮಗಾರಿ?: ಕಳೆದ 2 ತಿಂಗಳಿನಿಂದ ನಗರದ ಜನಜೀವನ ಅಸ್ತವ್ಯಸ್ತವಾಗಿತ್ತು. ಕೆಲಸ ಕಾರ್ಯಗಳು ಇಲ್ಲದೆ ಜೀವನ ನಡೆಸು ವುದೇ ಕಷ್ಟವಾಗಿತ್ತು. ಈ ವೇಳೆ ಗ್ರಾಮೀಣ ಪ್ರದೇಶದಿಂದ ವಲಸೆ ಬಂದ ನಗರ ಸೇರಿದ್ದ ಯುವ ಸಮೂಹ  ಪಟ್ಟಣ ಬಿಟ್ಟು ಹಳ್ಳಿ ಕಡೆ ಮುಖ ಮಾಡಿದ್ದರು. ಈ ವೇಳೆ ಯುವಕರು ಏನು ಮಾಡುವುದು ಎಂಬ ಚಿಂತೆಯಲ್ಲಿ ದ್ದರು. ಇದಕ್ಕೆ ಪೂರಕವಾಗಿ ಸರ್ಕಾರ ಯುವ ಮಂದಿಗೆ ನರೇಗಾ ಮೂಲಕ ವಿವಿಧ ಕಾಮ ಗಾರಿಗಳನ್ನು ನಡೆಸಿ, ಅವರಿಗೆ ಕೆಲಸ  ನೀಡಿತು. ಅಂದಾಜು 157 ಕೋಟಿ ರೂ. ವೆಚ್ಚದ ಕಾಮ ಗಾರಿ ಆರಂಭಿಸಲಾಗಿದೆ.

ಯುವ ಜನರ ಸ್ವಾವಲಂಬನೆ ದಾರಿ: ವಿದ್ಯಾವಂತ ಯುವಕರು ಕೆಲಸವಿಲ್ಲದೇ ತಮ್ಮ ಊರು ಸೇರಿದ್ದರು. ಆದರೆ, ಉದ್ಯೋಗ ಮರೀಚಿಕೆಯಾಗಿತ್ತು. ಹೀಗಾಗಿ ಸರ್ಕಾರ ಅವರು ಖಾಲಿ ಕೂರಬಾರದು ಎಂಬ ಉದ್ದೇಶದಿಂದ ನರೇಗಾ  ಯೋಜನೆಯಡಿ ಕೆರೆಗೆ ಸಂರಕ್ಷಣೆಗೆ ಸಂಬಂಧಪಟ್ಟ ನಾನಾ ಕಾಮಗಾರಿ ಹಮ್ಮಿಕೊಂಡಿತು. ಇದರಿಂದ ಹಳ್ಳಿಗಳಲ್ಲಿ ಯುವಜನತೆ ಸ್ವಾವಲಂಬನೆ ಜೀವನ ನಡೆಸಲು ಸಾಧ್ಯವಾಯಿತು. ಅಲ್ಲದೇ, ಜೀವನ ನಿರ್ವಹಣೆ ಹಾಗೂ ಆರ್ಥಿಕ  ಸ್ವಾವಲಂಬನೆ ಸಾಧಿಸಲು ಅವಕಾಶ ದೊರಕಿತು.

ಇದೇ ಮೊದಲ ಬಾರಿಗೆ ನೀರಿಲ್ಲದ ಜಿಲ್ಲೆಯ ಎಲ್ಲಾ ಕೆರೆಗಳನ್ನು ಅಭಿವೃದ್ಧಿಗೆ ಸರ್ಕಾರದಿಂದ ಅನು ಮೋದನೆ ದೊರಕಿದೆ. ಪ್ರತಿಯೊಂದು ಗ್ರಾಮದಲ್ಲಿ ಕೆರೆ ಕೆಲಸ ಆರಂಭವಾ ಗಿದ್ದು, ಯುವಕರಿಗೆ ಸ್ಥಳೀಯ ಮಟ್ಟ ದಲ್ಲೇ ಉದ್ಯೋಗವಿದೆ.  ಯುವಕರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. 
-ಕೃಷ್ಣರಾಜ್‌, ಜಿಪಂ ಉಪ ಕಾರ್ಯದರ್ಶಿ

*ಸತೀಶ್‌ ದೇಪುರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.