Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Team Udayavani, May 3, 2024, 3:07 PM IST
ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿ, ಮಾಂಸವನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿಗಳು ಕೃತ್ಯಕ್ಕೆ ಬಳಸಿದ್ದ ಪರಿಕರಗಳೊಂದಿಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕೊಳವಿಗೆ ಹಾಡಿಯ ದಿನೇಶ, ಬಿಲ್ಲೇನಹೊಸಹಳ್ಳಿ ಹಾಡಿಯ ರಾಮ ಬಂಧಿತರು.
ಆರೋಪಿಗಳಿಂದ 40 ಕೆ.ಜಿ. ಜಿಂಕೆಯ ಮಾಂಸ, ತಲೆ, ಚರ್ಮ, ನಾಲ್ಕು ಕಾಲುಗಳು, ಎರಡು ಕೊಂಬು, ಕೃತ್ಯಕ್ಕೆ ಬಳಸಿದ್ದ ಉರುಳು, ಕತ್ತಿ ಹಾಗೂ ಮೊಬೈಲನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ವಿವರ:
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ಕಚುವಿನಹಳ್ಳಿ ಶಾಖೆಯ ಸಣ್ಣಗದ್ದೆ ಗಸ್ತಿನ ತಟ್ಟಿಹಳ್ಳ ಪಾರೆ ಅರಣ್ಯ ಪ್ರದೇಶದಲ್ಲಿ ಡಿ.ಆರ್.ಎಫ್.ಓ ಆದ ಎಚ್.ಎಂ.ಪ್ರಮೋದ್, ಗಸ್ತು ಅರಣ್ಯ ಪಾಲಕರು ಹಾಗೂ ಎಪಿಸಿ ಸಿಬ್ಬಂದಿಗಳೊಂದಿಗೆ ಗಸ್ತು ಮಾಡುತ್ತಿದ್ದ ವೇಳೆ ಐವರ ತಂಡ ಜಿಂಕೆ ಕೊಂದು ಮಾಂಸದೊಂದಿಗೆ ಪರಾರಿಯಾಗುತ್ತಿದ್ದರು.
ಇದ್ದನ್ನು ಕಂಡು ಸಿನಿಮೀಯಾ ಮಾದರಿಯಲ್ಲಿ ಬೆನ್ನಟ್ಟಿದಾಗ ಇಬ್ಬರು ಆರೋಪಿಗಳು ಮಾಂಸ ಮತ್ತು ಪರಿಕರಗಳೊಂದಿಗೆ ಸಿಕ್ಕಿ ಬಿದ್ದರು. ಬಿಲ್ಲೇನಹೊಸಹಳ್ಳಿ ಹಾಡಿಯ ಗಣೇಶ್, ವಿಶ್ವ, ಕುಮಾರ್ ಪರಾರಿಯಾಗಿದ್ದಾರೆ.
ತಂಡ ರಚನೆ: ಬಂದಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಾರಿಯಾಗಿರುವ ಮೂವರು ಆರೋಪಿಗಳ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಡಿ.ಸಿ.ಎಫ್.ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!
Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು
Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.