![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 12, 2023, 8:37 AM IST
ಹುಣಸೂರು: ತಾಲೂಕಿನ ಹನಗೋಡು ಭಾಗದ ಗ್ರಾಮಗಳಲ್ಲಿ ಆ.11ರ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಕಡೇಮನುಗನಹಳ್ಳಿ ಬಳಿಯ ಶ್ರೀ ಓಂಕಾರೇಶ್ವರ ದೇವಾಲಯ ನೀರಿನಿಂದ ಆವೃತವಾಗಿದ್ದರೆ, ಹೆಬ್ಬಾಳ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
ನಾಗರಹೊಳೆ ಉದ್ಯಾನದಂಚಿನ ಹನಗೋಡು ಹೋಬಳಿಯ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಸತತ ಮಳೆಯಿಂದಾಗಿ ನಾಗರಹೊಳೆ ಉದ್ಯಾನ, ಅಂಚಿನ ಗ್ರಾಮಗಳಾದ ಬೆಕ್ಕೆಶೆಡ್, ಕಿಕ್ಕೇರಿಕಟ್ಟೆ, ಕಡೇಮನುಗನಹಳ್ಳಿ ಭಾಗದಿಂದ ಭಾರೀ ಪ್ರಮಾಣದ ನೀರು ಒಮ್ಮೆಲೆ ಹರಿದು ಬಂದಿದ್ದರಿಂದ ದೇವಾಲಯಕ್ಕೆ ನೀರು ನುಗ್ಗಿ ಆವರಣ ಜಲಾವೃತವಾಗಿದೆ.
ಅದಲ್ಲದೆ ಜಮೀನುಗಳಲ್ಲೂ ಭಾರೀ ಪ್ರಮಾಣದ ನೀರು ನಿಂತಿದೆ. ಈ ಭಾಗದ ಹತ್ತಾರು ಕೆರೆಗಳಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬಂದಿದೆ.
ಹನಗೋಡು-ಪಂಚವಳ್ಳಿ ರಸ್ತೆ ಬಂದ್:
ನಾಗರಹೊಳೆ ಉದ್ಯಾನದಿಂದ ಹರಿದು ಬರುವ ನೀರಿನಿಂದ ಹೆಬ್ಬಾಳ ತುಂಬಿ ಹರಿಯುತ್ತಿದ್ದು ಬುಧವಾರ ಸಂಜೆಯಿಂದಲೇ ನೇರಳಕುಪ್ಪೆ-ಪಂಚವಳ್ಳಿ ಮುಖ್ಯರಸ್ತೆಯ ಹೆಬ್ಬಾಳದ ಹಳ್ಳದ ಮೇಲೆ ಎರಡು ಅಡಿಗೂ ಹೆಚ್ಚು ನೀರು ಹರಿಯುತ್ತಿದ್ದು, ರಸ್ತೆ ಸಂಚಾರ ಬಂದ್ ಆಗಿದೆ.
ನೀರಿನ ಹರಿವನ್ನು ಹಾಗೂ ದೇವಾಲಯಕ್ಕೆ ತುಂಬಿರುವ ನೀರನ್ನು ನೋಡಲು ಸಾಕಷ್ಟು ಮಂದಿ ಗ್ರಾಮಸ್ಥರು ನೆರೆದಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.