Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ


Team Udayavani, Oct 18, 2024, 12:12 PM IST

6-hunsur

ಹುಣಸೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊರ್ವ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ತೀವ್ರಗಾಯಗೊಳಿಸಿರುವ ಘಟನೆ ತಾಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಅ.17ರ ಗುರುವಾರ ನಡೆದಿದೆ.

ತಾಲೂಕಿನ ಗಾವಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿ ಗ್ರಾಮದ ಕೃಷಿ, ಕೂಲಿ ಕಾರ್ಮಿಕ ಪ್ರಮೋದ್ ಅಲಿಯಾಸ್ ರಾಜು (27) ಚಾಕುವಿನಿಂದ ಇರಿದು ಹಲ್ಲೆಗೊಳಗಾದವನು. ಅದೇ ಗ್ರಾಮದ ಕುರಿ ವ್ಯಾಪಾರಿ ಕುಮಾರ ನಾಯಕ ಚಾಕುವಿನಿಂದ ಇರಿದವನು. ಈತನನ್ನು ಈಗಾಗಲೇ ಬಂಧಿಸಲಾಗಿದೆ.

ಘಟನೆಯ ವಿವರ: ಹಿರೀಕ್ಯಾತನಹಳ್ಳಿ ಗ್ರಾಮದ ನಿವಾಸಿ ಕೃಷಿ ಕಾರ್ಮಿಕ ಪ್ರಮೋದ್ (27) ಹಾಗೂ ಕುಮಾರ ನಾಯಕ ಅವರ ನಡುವೆ ಹಳೆ ವೈಷಮ್ಯವಿತ್ತು. ಈ ಸಂಬಂಧ ಅ.16ರ ಬುಧವಾರ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸಮಯಕ್ಕೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪ್ರಮೋದ್ ಮೇಲೆ ಏಕಾಏಕಿ ಕುಮಾರ ನಾಯಕ ದಾಳಿ ನಡೆಸಿ ಎಡಗೈ  ಭಾಗಕ್ಕೆ ಚಾಕುವಿನಿಂದ ತಿವಿದಿದ್ದಾನೆ.

ಸಾವಿನ ದವಡೆಯಿಂದ ಬದುಕುಳಿಯಲು ಪ್ರಯತ್ನಿಸಿದ ಪ್ರಮೋದ್‌ ಅಲ್ಲೇ ಪಕ್ಕದಲ್ಲಿರುವ ಅಂಗಡಿಗಳತ್ತ ಓಡಿದಾಗ ಸ್ಥಳಿಯರು ಆತನನ್ನು ಬದುಕುಳಿಸುವ ಪ್ರಯತ್ನ ನಡೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಸ್ಥಳಿಯರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಧನ: ಘಟನೆಯಲ್ಲಿ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ ಆರೋಪಿ ಕುಮಾರ ನಾಯಕನನ್ನು ಸ್ಥಳೀಯರು ಪೊಲೀಸರಿಗೊಪ್ಪಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು. ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಮುನಿಯಪ್ಪ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.