Hunsur: ಅಕ್ರಮವಾಗಿ ಕರುಗಳ ಸಾಗಾಟ; ಕಂಟೈನರ್ ವಶ, ಇಬ್ಬರ ಬಂಧನ
Team Udayavani, Sep 24, 2024, 8:58 PM IST
ಹುಣಸೂರು: ಅಕ್ರಮವಾಗಿ ಒಂದೇ ಕಂಟೈನರ್ನಲ್ಲಿ 42 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಿಳಿಕೆರೆ ಠಾಣಾ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಸೆ.24ರ ಮಂಗಳವಾರ ನಡೆದಿದೆ.
ಹುಣಸೂರು ತಾಲೂಕಿನ ರತ್ನಪುರಿ ಹಾಗೂ ಚಾಮರಾಜನಗರದ ಇಬ್ಬರನ್ನು ಬಂಧಿಸಿ, ವಾಹನ ವಶಕ್ಕೆ ಪಡೆಯಲಾಗಿದೆ.
ಹುಣಸೂರು ತಾಲೂಕಿನ ರತ್ನಪುರಿಯಿಂದ ಕೆ.ಆರ್.ನಗರ, ಗೊಮ್ಮಟಗಿರಿ ಮಾರ್ಗವಾಗಿ ಮೈಸೂರು ಕಡೆಗೆ ಕಂಟೈನರ್ನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬೆಳಗ್ಗೆ ಬೆನ್ನಟ್ಟಿ ಮನುಗನಹಳ್ಳಿ ಬಳಿಯಲ್ಲಿ ವಾಹನವನ್ನು ಅಡ್ಡಗಟ್ಟಿ ತಡೆದು ಪರಿಶೀಲಿಸಿದಾಗ 42 ಜಾನುವಾರುಗಳು ಪತ್ತೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಚಾಲಕ ಹಾಗೂ ಇನ್ನೊಬ್ಬ ಆರೋಪಿ ಸೇರಿ ಇಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದ್ದು, ಜಾನುವಾರುಗಳನ್ನು ಬಂಧಮುಕ್ತಗೊಳಿಸಿ ಪಿಂಜಾರಾಪೋಲ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು
Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ
Rafale: ರಫೇಲ್ ಗಾಗಿ ನೋಯ್ಡಾದಲ್ಲಿ ಡಸಾಲ್ಟ್ ನಿರ್ವಹಣಾ ಕೇಂದ್ರ?
MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.