Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ


Team Udayavani, May 3, 2024, 3:57 PM IST

12

ಹುಣಸೂರು: ತಾಲೂಕಿನ ಕಿರಂಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಳಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಸಮರ್ಪಕ ನಿರ್ವಹಣೆಯಿಂದ ಬೇಸತ್ತ ಗ್ರಾಮಸ್ಥರು‌, ಪಿಡಿಓ ಸಮ್ಮುಖದಲ್ಲಿ ಬೀಗ ಜಡಿದು ಆಕ್ರೋಶ ಹೊರಹಾಕಿದರು.

ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದಿದ್ದ ಹಿನ್ನೆಲೆಯಲ್ಲಿ ಗುರುವಾರ ಎಸಿಡಿಪಿಓ ವೀಣಾ ಹಾಗೂ ಮೇಲ್ವಿಚಾರಕಿ ಸುಮಂಗಲಿ ಭೇಟಿ ಇತ್ತು ಗ್ರಾಮಸ್ಥರ ಸಭೆ ನಡೆಸಿದರು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಅಣ್ಣಯ್ಯ, ಸದಸ್ಯ ಹರೀಶ್‌ಗೌಡ ಸೇರಿದಂತೆ ಮುಖಂಡರಾದ ಮಹದೇವು, ಗೌರಮ್ಮ, ಈರೇಗೌಡ, ಮಹದೇವಿ ಮತ್ತಿತರರು  ಅಂಗನವಾಡಿ ಕಾರ್ಯಕರ್ತೆ ಸುಜಾತಾಬಾಯಿ ಕೇಂದ್ರವನ್ನು ಸೂಕ್ತ ನಿರ್ವಹಣೆ ಮಾಡುತ್ತಿಲ್ಲ. ಆದಿವಾಸಿ ಮಕ್ಕಳನ್ನು ಕೀಳಾಗಿ ಕಾಣುತ್ತಾರೆ. ದೂರ ಕೂರಿಸುತ್ತಾರೆ. ಸರಿಯಾಗಿ ಪಡಿತರ ವಿತರಿಸುವುದಿಲ್ಲ. ಹೀಗಾಗಿ ಗ್ರಾಮ ಪಂಚಾಯತ್‌ ಗೆ ಹಾಗೂ ಸಿಡಿಪಿಒಗೆ ದೂರು ನೀಡಿದ್ದೆವು. ಪಿಡಿಒ ಭವ್ಯ ಸಹ ಅನೇಕ ಬಾರಿ ತಿಳುವಳಿಕೆ ನೀಡಿದ್ದರು. ಗ್ರಾಮಸ್ಥರು ಎಷ್ಟೇ ಎಚ್ಚರಿಸಿದ್ದರೂ ಪ್ರಯೋಜನವಾಗದೆ ಗ್ರಾಮಸ್ಥರು ಸೇರಿ ಬೀಗ ಹಾಕಿದ್ದೇವೆಂದು ಹೇಳಿ, ಈ ಕೇಂದ್ರಕ್ಕೆ ಬದಲಿ ಶಿಕ್ಷಕಿ                                    ನೇಮಿಸಿರೆಂದು ಪಟ್ಟು ಹಿಡಿದರು.

ಅಂಗನವಾಡಿ ಶಿಕ್ಷಕಿ ಸುಜಾತಾಬಾಯಿ ಕೇಂದ್ರದ ಸಹಾಯಕಿ ಅನಾರೋಗ್ಯದಿಂದ ಬರುತ್ತಿಲ್ಲ. ಒಬ್ಬರಿಂದ ನಿರ್ವಹಣೆ ಸಾದ್ಯವಿಲ್ಲ. ನನ್ನಿಂದ ತಪ್ಪಾಗಿದ್ದು, ಮುಂದೆ ಸರಿಪಡಿಸಿಕೊಂಡು ಹೋಗುವೆನೆಂಬ ಭರವಸೆ ಮೇರೆಗೆ ಗ್ರಾಮಸ್ಥರು ಒಪ್ಪಿ ಇವರನ್ನೇ ಮುಂದುವರೆಸುವುದು. ಮುಂದೆ ಇದೇ ರೀತಿ ನಡೆದುಕೊಂಡಲ್ಲಿ ಇವರ ವಿರುದ್ದ ಕ್ರಮವಹಿಸಬೇಕೆಂಬ ಗ್ರಾಮಸ್ಥರ ಬೇಡಿಕೆ ಮೇರೆಗೆ ಅಂಗನವಾಡಿ ತೆರೆಯಲು ಅವಕಾಶ ಮಾಡಿಕೊಟ್ಟರು.

ಇಂದು ಸಿಡಿಪಿಒ ಭೇಟಿ:

ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವ ಬಗ್ಗೆ ಪಿಡಿಓರಿಂದ ಮಾಹಿತಿ ಬಂದಿದೆ. ನಾನು ರಜೆಯಲ್ಲಿದ್ದೇನೆ. ಗ್ರಾಮಕ್ಕೆ ಎಸಿಡಿಪಿಓ ಹಾಗೂ ಮೇಲ್ವಿಚಾರಕಿ ಭೇಟಿ ನೀಡಿ ಪರಿಶೀಲಿಸಿ, ಗ್ರಾಮಸ್ಥರ ಸಭೆ ನಡೆಸಿದ್ದಾರೆ. ಶುಕ್ರವಾರ ಕೇಂದ್ರಕ್ಕೆ ಭೇಟಿ ನೀಡುವೆನೆಂದು ಸಿಡಿಪಿಒ ಹರೀಶ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HC-Mahadevappa

CM Siddaramaiah ಪತ್ನಿಗೆ ಕಾನೂನು ಬದ್ಧವಾಗಿ ಸೈಟ್‌: ಸಚಿವ ಡಾ.ಎಚ್‌.ಸಿ. ಮಹದೇವಪ್ಪ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.