ಹುಣಸೂರು: ಹರಾಜು ನಿರ್ದೇಶಕ ಗೈರು, ಸಭೆ ಬಹಿಷ್ಕರಿಸಿದ ತಂಬಾಕು ಬೆಳೆಗಾರರು

ಅತೀ ಮಳೆ, ಸಂಕಷ್ಟದಲ್ಲಿರುವ ರೈತರ ನೆರವಿಗೆ ಮಂಡಳಿ ನಿಲ್ಲಲಿ- ಹೊಸೂರು ಕುಮಾರ್

Team Udayavani, Sep 22, 2022, 8:52 AM IST

1

ಹುಣಸೂರು: ಕಟ್ಟೆ ಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆ ಆರಂಭವಾಗುವ ಹಿನ್ನೆಲೆಯಲ್ಲಿ ಬೆಳೆಗಾರರ ಸಭೆಗೆ ತಂಬಾಕು ಮಂಡಳಿಯ ಹರಾಜು ನಿರ್ದೇಶಕರು ಸೇರಿದಂತೆ ಖರೀದಿ ಕಂಪನಿಗಳ ಮುಖ್ಯಸ್ಥರ ಗೈರನ್ನು ವಿರೋಧಿಸಿ ಹೊಗೆಸೊಪ್ಪು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿ ಸಭೆಯನ್ನು ಬಹಿಷ್ಕರಿಸಿದರು.

ಬುಧವಾರದಂದು ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯ ರೈತ ಭವನದಲ್ಲಿ ಮಂಡಳಿ ವತಿಯಿಂದ ಬೆಳೆಗಾರರು ಹಾಗೂ ತಂಬಾಕು ಖರೀದಿ ಕಂಪನಿಗಳ ಮುಖ್ಯಸ್ಥರ ಸಭೆ ಆಯೋಜಿಸಲಾಗಿತ್ತು. ಆದರೆ ಸಭೆಗೆ ಹರಾಜು ನಿರ್ದೇಶಕಿ, ಐಟಿಸಿ ಕಂಪನಿ ಸೇರಿದಂತೆ ಯಾವುದೇ ಕಂಪನಿಯ ಮುಖ್ಯಸ್ಥರು ಭಾಗವಹಿಸಿರಲಿಲ್ಲ. ಮಂಡಳಿಯ ಉಪಾಧ್ಯಕ್ಷ ಬಸವರಾಜು, ಸದಸ್ಯ ಹಬ್ಬನಕುಪ್ಪೆದಿನೇಶ್, ಪ್ರಾದೇಶಿಕ ವ್ಯವಸ್ಥಾಪಕ ಎಂ. ಲಕ್ಷ್ಮಣ ರಾವ್ ಹಾಗೂ ಸ್ಥಳೀಯ ಅಧೀಕ್ಷಕರುಗಳು ಮಾತ್ರ ಭಾಗವಹಿಸಿದ್ದರು.

ಸಭೆ ಆರಂಭವಾಗುತ್ತಿದ್ದಂತೆ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ದಿ ಸಂಘದ ಶಿವಣ್ಣೇ ಗೌಡ,ಚಂದ್ರೇ ಗೌಡ, ರೈತ ಮುಖಂಡರಾದ ಅಶೋಕ್, ದೇವರಾಜ್, ಶ್ರೀಧರ, ಶ್ರೀನಿವಾಸ್, ಎ.ಪಿ.ಸ್ವಾಮಿ, ಮರೂರು ಚಂದ್ರಶೇಖರ್  ಮತ್ತಿತರ ಬೆಳೆಗಾರರು ಸಂಸದ, ಶಾಸಕರು ಬಂದಿಲ್ಲ, ಹರಾಜು ನಿರ್ದೇಶಕರಂತೂ ಯಾವ ಬೆಳೆಗಾರರ ಸಭೆಗೂ ಬರುತ್ತಿಲ್ಲಾ, ಇನ್ನು ಗುಂಟೂರಿನಲ್ಲಿರುವ ಕಾರ್ಯನಿರ್ವಾಹಕ ನಿರ್ದೇಶಕರೂ ಸಹ ಈವರೆವಿಗೂ ಕರ್ನಾಟಕ್ಕೆ ಬಂದಿಲ್ಲ. ಇಲ್ಲಿನ ಸಮಸ್ಯೆಗಳಿಗೆ ಜವಾಬ್ದಾರಿ ಹೊರುವವರು ಯಾರು, ಅವರು ಬರುವವರೆಗೂ ಸಭೆ ನಡೆಸುವುದೇ ಬೇಡವೆಂದು ಆಕ್ರೋಶ ವ್ಯಕ್ತಪಡಿಸಿ, ಸಭೆ ಬಹಿಷ್ಕರಿಸಿ ಮಂಡಳಿ ವಿರುದ್ದ ಪ್ರತಿಭಟಿಸಿದರು.

ಹಿರಿಯ ಅಧಿಕಾರಿಗಳು ಬರಲೇಬೇಕು: ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಅತಿಯಾದ ಮಳೆಯಿಂದ ತಂಬಾಕು ಇಳುವರಿ ಸಾಕಷ್ಟು ಕಡಿಮೆಯಾಗಿದೆ. ರಸಗೊಬ್ಬರವನ್ನು ಮೂರು-ನಾಲ್ಕು ಬಾರಿ ನೀಡಿದ್ದಾರೆ. ಇಂತಹ ಕಷ್ಟದ ಸಂದರ್ಭದಲ್ಲಿ ಬೆಳೆಗಾರರ ಸಂಕಷ್ಟಕ್ಕೆ ನಿಲ್ಲಬೇಕಾದ ತಂಬಾಕು ಮಂಡಳಿಯ ಹಿರಿಯ ಅಧಿಕಾರಿಗಳು ಕನಿಷ್ಟ ಹಾನಿ ಸ್ಥಳಕ್ಕೂ ಸೌಜನ್ಯದ ಭೇಟಿ ನೀಡಿಲ್ಲ. ಕನಿಷ್ಟ ಗೊಬ್ಬರ ಹಾಗೂ ಬೆಳೆ ಸಾಲ ಮನ್ನಾ ಮಾಡುವ ನಿಟ್ಟಿನಲ್ಲೂ ಪ್ರಯತ್ನ ನಡೆಸಿಲ್ಲ. ಹರಾಜು ನಿರ್ದೇಶಕರಂತೂ ರೈತ ವಿರೋಧಿಯಾಗಿದ್ದಾರೆ. ಹರಾಜಿಗೂ ಮುನ್ನ ಸಭೆಗೆ ಸಂಸದ, ಶಾಸಕರು, ಮಂಡಳಿಯ ಹಿರಿಯ ಅಧಿಕಾರಿಗಳು ಬರಲೇಬೇಕು. ಇಲ್ಲದಿದ್ದಲ್ಲಿ ಹರಾಜು ಮಾರುಕಟ್ಟೆ ಆರಂಭವಾಗಲು ಬಿಡಲ್ಲವೆಂದು ಎಚ್ಚರಿಸಿದರು.

ಕಟ್ಟೆಮಳಲವಾಡಿ ಶ್ರೀಧರ್ ಬೆಂಗಳೂರಿನ ಹರಾಜು ನಿರ್ದೇಶಕರ ಕಚೇರಿಯನ್ನು ಮೈಸೂರಿಗೂ, ಮೈಸೂರಿನ ಆರ್.ಎಂ.ಓ.ಕಚೇರಿಯನ್ನು ಹುಣಸೂರಿಗೂ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಹಲವಾರು ವರ್ಷಗಳಿಂದ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನಿಮ್ಮ ಅವಧಿಯಲ್ಲಾದರೂ ಸ್ಥಳಾಂತರಕ್ಕೆ ಕ್ರಮ ವಹಿಸಿ. ಉತ್ತಮ ಬೆಲೆಕೊ ಡಿಸಲು ಮುಂದಾಗಿರೆಂದು ಮಂಡಳಿ ಉಪಾಧ್ಯಕ್ಷ ಬಸವರಾಜು ರಲ್ಲಿ ಮನವಿ ಮಾಡಿದರು. ಕಚೇರಿ ಸ್ಥಳಾಂತರ ಪ್ರಸ್ತಾವನೆ ಮಂಡಳಿ ಮುಂದಿದ್ದು, ಕ್ರಮವಹಿಸಲಾಗುವುದೆಂದು ಭರವಸೆ ಇತ್ತರು.

ಅ.10ಕ್ಕೆ ಮಾರುಕಟ್ಟೆ ಆರಂಭ: ಬೆಳೆಗಾರರ ಬೇಡಿಕೆಯಂತೆ ದಸರಾ ನಂತರ ಅ.10ಕ್ಕೆ ಮಾರುಕಟ್ಟೆ ಆರಂಭಿಸಲಾಗುತ್ತಿದೆ. ಈ ಬಾರಿ 62 ಮಿಲಿಯನ್ ತಂಬಾಕು ಉತ್ಪಾದನೆ ನಿರೀಕ್ಷಿಸಲಾಗಿದೆ. ರೈತ ಮುಖಂಡರ ಬೇಡಿಕೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಮಾರುಕಟ್ಟೆ ಆರಂಭಕ್ಕೆ ಬೆಳೆಗಾರರು ಸಹಕರಿಸುವಂತೆ ಕೋರಿದ್ದೇನೆ. – ಎಂ.ಲಕ್ಷ್ಮಣ್‌ ರಾವ್. ಆರ್.ಎಂ.ಓ. ತಂಬಾಕು ಮಂಡಳಿ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.