![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 21, 2020, 7:46 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದೊಳಗೆ ಅಕ್ರಮವಾಗಿ ಪ್ರವೇಶಿಸಿ ಜಿಂಕೆ ಭೆಟಿಯಾಡಿ ಮಾಂಸ ಸಾಗಾಟ ಮಾಡುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.
ಉದ್ಯಾನದ ಆನೆಚೌಕೂರು ವಲಯದ ಕೆಂಬುಕೊಲ್ಲಿ ಆನೆ ತಡೆ ಕಂದಕದ ಬಳಿ ಘಟನೆ ನಡೆದಿದ್ದು. ಸೂಳಗೋಡು ಗ್ರಾಮದ ಎಸ್.ಬಿ.ಮನು, ಆಯರಹಳ್ಳಿ ಹಾಡಿಯ ಮಂಜು ಬಂಧಿತರು. ಬಂಧಿತರಿಂದ 20 ಕೆಜಿ ಜಿಂಕೆ ಮಾಂಸ, ಸೀಗಲ್ ಬ್ಯಾರಲ್ ಗನ್ ಮತ್ತಿತರ ಪರೀಕರಗಳನ್ನು ವಶಕ್ಕೆ ಪಡೆಯಲಾಗಿದೆ.
ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿ ಮೇರೆಗೆ ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಎಸಿಎಫ್ ಸತೀಶ್ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸಿಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೂಳಗೋಡಿನ ರಾಜು, ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಪೂವಯ್ಯ ಪರಾರಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು. ಪರಾರಿಯಾದವರ ಪತ್ತೆಗೆ ತಂಡ ರಚಿಸಲಾಗಿದೆ ಎಂದು ನಾಗರಹೊಳೆ ಉದ್ಯಾನವನದ ಹುಲಿಯೋಜನೆ ನಿರ್ದೇಶಕ ಡಿ ಮಹೇಶ್ ಕುಮಾರ್ ಉದಯವಾಣಿಗೆ ತಿಳಿಸಿದರು
You seem to have an Ad Blocker on.
To continue reading, please turn it off or whitelist Udayavani.