![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 11, 2022, 10:00 AM IST
ಹುಣಸೂರು: ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಹೊಗೆಸೊಪ್ಪು ಹರಾಜು ಪ್ರಕ್ರಿಯೆಗೆ ಶಾಸಕ ಎಚ್.ಪಿ.ಮಂಜುನಾಥ್ ರೈತ ಮುಖಂಡರೊಡಗೂಡಿ ಚಾಲನೆ ನೀಡಿದರು.
ಮೊದಲ ದಿನ ಗುಣಮಟ್ಟದ ತಂಬಾಕು ಕೆ.ಜಿ.ಗೆ 202 ರೂ. ಹರಾಜು ನಡೆಯಿತು. ಕಳೆದ ಬಾರಿ ಆರಂಭದ ದಿನ ಕೆ.ಜಿ.ಗೆ 185ರೂ.ಗೆ ಹರಾಜಾಗಿತ್ತು. ಕಳೆದ ವರ್ಷ 163.70 ರೂ. ಸರಾಸರಿ ಬೆಲೆ ಸಿಕ್ಕಿತ್ತು. ಮಾರುಕಟ್ಟೆಗೆ 27 ಬೇಲ್ ಬಂದಿದ್ದು, 28 ಕಂಪನಿಗಳು ಭಾಗವಹಿಸಿದ್ದರು.
ಕಟ್ಟೆಮಳಲವಾಡಿ ಪ್ಲಾಟ್ ಫಾರಂ 2 ಮತ್ತು 3 ಹಾಗೂ 64ರ ಹರಾಜು ಪ್ರಾಂಗಣಕ್ಕೆ ಮೊದಲ ದಿನ ಮಾರುಕಟ್ಟೆಗಾಗಮಿಸಿದ್ದ ಬೇಲ್ಗಳನ್ನು ಎಲೆಕ್ಟ್ರಾನಿಕ್ ಯಂತ್ರದ ಮೂಲಕ ಬಿಡ್ಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕ ಎಚ್.ಪಿ.ಮಂಜುನಾಥ್, ಎರಡು ವರ್ಷಗಳ ಕೋವಿಡ್-19 ಹಾಗೂ ಈ ವರ್ಷದ ಅತಿಯಾದ ಮಳೆಯಿಂದಾಗಿ ರೈತರು ಸಂಕಷ್ಟದ ನಡುವೆಯೂ ಸಾಲ ಮಾಡಿ ತಂಬಾಕು ಬೆಳೆ ಬೆಳೆದಿದ್ದು, ಇಡೀ ಬದುಕನ್ನೇ ಬೇಲ್ಗಳಾಗಿ ಪರಿವರ್ತಿಸಿ ಮಾರುಕಟ್ಟೆಗೆ ತಂದಿದ್ದಾರೆ. ಹರಾಜು ಪ್ರಕ್ರಿಯೆ ವೇಳೆ ಕಂಪನಿಯವರು ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ತಂಬಾಕು ಖರೀದಿ ಮಾಡಬೇಕು. ಖರೀದಿ ಕಂಪನಿಗಳು ಹಾಗೂ ರೈತರ ನಡುವೆ ಸೇತುವೆಯಾಗಿ ತಂಬಾಕು ಮಂಡಳಿ ಅಧಿಕಾರಿಗಳು ಕಾರ್ಯನಿರ್ವಹಿಸಿ ರೈತರ ನೆರವಿಗೆ ನಿಲ್ಲಬೇಕೆಂದು ಸೂಚಿಸಿದರು.
ಕೆಲ ರೈತ ಮುಖಂಡರು ಮಾತನಾಡಿ, ಈ ಬಾರಿ ಸಾಲ ಮಾಡಿ 2-3 ಬಾರಿ ತಂಬಾಕು ಬೆಳೆಯಲು ರಸಗೊಬ್ಬರ ಬಳಸಿದ್ದು, ಪ್ರತಿ ವರ್ಷ ಖರ್ಚು ಹೆಚ್ಚಾಗುತ್ತಿದೆ. ಹೀಗಾಗಿ ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದೇವೆ. ಮಾರುಕಟ್ಟೆಯಲ್ಲಿ ಪಾರದರ್ಶಕತೆ ಜೊತೆಗೆ ಹಲವಾರು ಮೂಲ ಸೌಕರ್ಯದ ಸಮಸ್ಯೆಗಳಿದ್ದು, ತಕ್ಷಣವೇ ಸೌಕರ್ಯ ಕಲ್ಪಿಸಬೇಕೆಂದು ಅಧಿಕಾರಿಗಳು ಹಾಗೂ ಶಾಸಕರಲ್ಲಿ ಮನವಿ ಮಾಡಿದರು.
ರೈತರ ನೆರವಿಗೆ ಮಂಡಳಿ: ತಂಬಾಕು ಮಂಡಳಿ ಪ್ರಾದೇಶಿಕ ನಿರ್ದೇಶಕ ಲಕ್ಷ್ಮಣ್ರಾವ್ ಮಾತನಾಡಿ, ರಾಜ್ಯದ ಹೊಗೆಸೊಪ್ಪು ಬೆಳೆಗಾರರು ಅತಿಯಾದ ಮಳೆಯಿಂದ ತೊಂದರೆಗೊಳಗಾಗಿದ್ದಾರೆ. ಖರೀದಿ ಕಂಪನಿಗಳು ರೈತರ ನಿರೀಕ್ಷೆಯಂತೆ ಬೆಲೆ ನೀಡುವತ್ತ ಗಮನ ಹರಿಸಬೇಕೆಂದು ಸೂಚಿಸಿ, ಮಾರುಕಟ್ಟೆಯಲ್ಲಿ ಹರಾಜು ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದ್ದು, ಮಂಡಳಿ ರೈತರ ಪರವಾಗಿದ್ದು, ಆತಂಕಕ್ಕೊಳಗಾಗಬೇಡಿ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲವೆಂಬ ಭರವಸೆ ನೀಡಿದರು. ಹುಡಿ ಮಾರಾಟಕ್ಕೂ ಅವಕಾಶ: ಇದೇ ಪ್ರಥಮ ಬಾರಿಗೆ ಹುಡಿ ಹೊಗೆಸೊಪ್ಪನ್ನು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಹಳ್ಳಿಗಳಲ್ಲಿ ದಳ್ಳಾಳಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡದಂತೆ ಆರ್.ಎಂ.ಓ.ಮನವಿ ಮಾಡಿದರು.
ಸಂಸದ-ನಿರ್ದೇಶಕರ ಗೈರು ರೈತರ ಆಕ್ರೋಶ:
ಸಂಸದ ಪ್ರತಾಪ ಸಿಂಹ, ತಂಬಾಕು ಮಂಡಳಿಯ ಹರಾಜು ನಿರ್ದೇಶಕಿ ಅಶ್ವಿನಿ ನಾಯ್ಡು ಗೈರಾಗಿದ್ದರು. ಕಳೆದ ಒಂದೂವರೆ ವರ್ಷಗಳಿಂದ ಮಾರುಕಟ್ಟೆಗೆ ಬರಲು ರೈತ ಮುಖಂಡರು ಮನವಿ ಮಾಡಿದರೂ ಮಾರುಕಟ್ಟೆಗೆ ಬಾರದ ಹರಾಜು ನಿರ್ದೇಶಕಿ ಅಶ್ವಿನಿ ನಾಯ್ಡುರನ್ನು ಕರೆಸಬೇಕೆಂದು ಆಕ್ರೋಶ ಹೊರ ಹಾಕಿದರು.
ಕಟ್ಟೆಮಳಲವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಧಾರಾಣಿ ತಗಡಯ್ಯ, ಮಾಜಿ ಅಧ್ಯಕ್ಷ ನಟರಾಜ್, ಸದಸ್ಯರು, ರೈತ ಮುಖಂಡರಾದ ಶಿವಣ್ಣೇಗೌಡ, ಚಂದ್ರೇಗೌಡ, ಎ.ಪಿ.ಸ್ವಾಮಿ, ರಾಮೇಗೌಡ, ರಾಜೇಗೌಡ, ಶ್ರೀಧರ, ಅಶೋಕ, ತಂಬಾಕು ಮಂಡಳಿಯ ಅಧಿಕಾರಿಗಳು ಹಾಗೂ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಬೆಳೆಗಾರರು ಭಾಗವಹಿಸಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.