ಪಿರಿಯಾಪಟ್ಟಣ: ಮುಸುಕಿನ ಜೋಳಕ್ಕೆ ಸೈನಿಕ ಹುಳುಗಳ ಕಾಟ… ಸಂಕಷ್ಟದಲ್ಲಿ ರೈತ

ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ

Team Udayavani, Jun 28, 2023, 5:51 PM IST

ಪಿರಿಯಾಪಟ್ಟಣ: ಮುಸುಕಿನ ಜೋಳಕ್ಕೆ ಸೈನಿಕ ಹುಳುಕಾಟ… ಸಂಕಷ್ಟದಲ್ಲಿ ರೈತ

ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಮುಂಗಾರಿನಲ್ಲಿ ಬಿತ್ತನೆಗೊಂಡಿರುವ ಮುಸುಕಿನ ಜೋಳದ ಬೆಳೆಯನ್ನು ಕೀಟಬಾಧೆ (ಸೈನಿಕ ಹುಳು) ಕಾಡುತ್ತಿದ್ದು, ಉತ್ತಮ ಫಸಲು ಹಾಗೂ ಇಳುವರಿ ನಿರೀಕ್ಷೆಯಲ್ಲಿದ್ದ ರೈತ ಧಿಕ್ಕು ತೋಚದೆ ಕಂಗಾಲಾಗಿದ್ದಾನೆ.

ಕಳೆದ ಮೇ ತಿಂಗಳ ಆರಂಭದಲ್ಲಿ ಮಾನ್ಸೂನ್ ಮಳೆ ಆರಂಭಕ್ಕೂ ಮೊದಲು ಅಂದರೆ ಭರಣಿ ಮಳೆಗೆ ತಾಲ್ಲೂಕಿನಾದ್ಯಂತ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳವನ್ನು ಬಿತ್ತನೆ ಮಾಡಲಾಗಿದೆ. ಮುಸುಕಿನ ಜೋಳಕ್ಕೆ ಆರಂಭದಲ್ಲಿ ಮಳೆಯ ಕೊರತೆ ಕಾಡುತ್ತಿದರುವುದು ಮಾತ್ರವಲ್ಲದೆ ಸೈನಿಕ ಹುಳುವಿನ ಕಾಟ ಹೆಚ್ಚಾಗಿರುವುದು ರೈತರನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಜೋಳ ಬಿತ್ತನೆ ಮಾಡಿ ಈಗಾಗಲೇ 50ರಿಂದ 60 ದಿನಗಳು ಕಳೆದಿರುವ ಮುಸುಕಿನ ಜೋಳ ಫಸಲು ಕಚ್ಚುವ ಹಂತದಲ್ಲಿರುವಾಗ ಸೈನಿಕಹುಳುವಿನ ದಾಳಿಗೆ ಸಿಲುಕಿರುವುದು ರೈತರನ್ನು ಚಿಂತೆಗೀಡು ಮಾಡಿದೆ. ಈಗಾಗಲೇ ಮುಸುಕಿನ ಜೋಳ ತೆನೆ ಮೂಡುವ ಹಂತದಲ್ಲಿದ್ದು, ಈಹಂತದಲ್ಲಿ ಸೈನಿಕ ಹುಳುಗಳು ಬೆಳೆಗೆ ಲಗ್ಗೆಇಟ್ಟಿವೆ. ಹಗಲಿನಲ್ಲಿ ಸುಳಿ ಹಾಗೂ ಬುಡದ ಮಣ್ಣಿನ ಒಳಭಾಗ ಸೇರಿಕೊಳ್ಳುವ ಹುಳುಗಳು, ರಾತ್ರಿವೇಳೆ ಹೊರಬಂದು ಗರಿಗಳನ್ನು ತಿನ್ನುತ್ತಿವೆ. ಜೊತೆಗೆ ಗರಿಗಳ ಮೇಲೆ ಹಿಕ್ಕೆ ವಿಸರ್ಜಿಸಿ ರೈತರ ನಿದ್ರೆ ಗೆಡಿಸಿವೆ.

ಕೀಟಬಾದೆ ತೀವ್ರಗೊಂಡು ಮುಸುಕಿನಜೋಳದ ಗರಿಗಳು ಹಾಳಾಗಿರುವ ಪರಿಣಾಮ ಬೆಳವಣಿಗೆಯಲ್ಲಿ ಕುಂಠಿತವಾಗಿದ್ದು, ಇದರಿಂದ ಜೋಳದ ತೆನೆ ಹುಲುಸಾಗಿ ಬರುವುದಿಲ್ಲ. ತೆನೆ ಬಂದರೂ ನಿರೀಕ್ಷೆಯಂತೆ ಫಸಲು ಹಿಡಿಯುವುದು ಅನುಮಾನವಾಗಿದೆ ಎಂದು ರೈತ ಹೆಚ್,ಬಿ.ಶಿವರುದ್ರ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಳೆದ 2ವಾರದಿಂದ ಮೋಡ ಕವಿದ ವಾತಾವರಣ ಹಾಗೂ ಶೀತಮಿಶ್ರಿತ ಗಾಳಿ ಕೀಟಬಾಧೆ ಕಾರಣ ಎನ್ನಲಾಗಿದೆ. ರೈತರು ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ಖಾಸಗಿ ಔಷಧಿ ಅಂಗಡಿಗಳಲ್ಲಿ ಲಭ್ಯವಿರುವ ಕೀಟನಾಶಕಗಳನ್ನು ತಂದುಬೆಳೆಗೆ ಸಿಂಪಡಿಸಿದರೂ ಕೀಟಬಾಧೆ ನಿಯಂತ್ರಣಕ್ಕೆ ಬಂದಿಲ್ಲ. ಕೆಲವರು ಬೆಳೆಗೆ ತಕ್ಷಣ ಕೀಟನಾಶಕ ಸಿಂಪಡಿಸಿದರೆ, ಇನ್ನೂ ಕೆಲವರು ಕೀಟನಾಶಕ ಸಂಪಡಿಸದೆ ಕೈಚೆಲ್ಲಿರುವ ಕಾರಣ ಹುಳುಗಳ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಒಂದು ಎಕರೆ ಜಮೀನಿನಲ್ಲಿ ಮುಸುಕಿನಜೋಳ ಬೆಳೆಯಲು ಬಿತ್ತನೆಯಿಂದ ಕಟಾವಿನ ಹಂತದವರೆಗೆ ಸುಮಾರು 8 ರಿಂದ 9 ಸಾವಿರರೂ. ನಿರ್ವಹಣೆ ವೆಚ್ಚತ ಗುಲಲಿದೆ. ಕೀಟಬಾಧೆಗೆ ತುತ್ತಾಗಿರುವ ಮುಸುಕಿನಜೋಳದ ಬೆಳೆ ಜಾನುವಾರುಗಳ ಮೇವಿಗೂ ಬಳಕೆಯಾಗದ ಸ್ಥಿತಿ ತಲುಪಿದ್ದು, ರೈತರು ದಿಕ್ಕು ತೋಚದ ಪರಿಸ್ಥಿತಿಯಲ್ಲಿದ್ದಾರೆ.

ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಮುಸುಕಿನ ಜೋಳ ಮಳೆಯ ತೀವ್ರ ಕೊರತೆಯಿಂದ ಒಣಗಿ ಹೋಗಿರುವುದು, ರೈತರಿಗೆ ಆರ್ಥಿಕವಾಗಿ ಸಂಕಷ್ಟ ಎದುರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ರೋಗಬಾಧೆ ತಡೆ, ಬೆಳೆ ಪರಿಹಾರಕ್ಕೆ ಕ್ರಮವಹಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಹೇಳೀಕೆಗಳು:
1. ರೈತ ಬೆಳೆದ ಬೆಳೆಗೆ ಕೃಷಿ ಅಧಿಕಾರಿಗಳ ಶಿಫಾರಸು ಹಾಗೂ ಮಾರ್ಗದರ್ಶನ ಅತ್ಯಗತ್ಯ. ಇಲಾಖೆಯ ಅಧಿಕಾರಿಗಳು ಬಿತ್ತನೆಯಿಂದ ಫಸಲಿನ ಹಂತದವರೆಗೂ ರೈತರೊಂದಿಗೆ ಸಂಪರ್ಕದಲ್ಲಿದ್ದು, ಆಗಾಗ್ಗೆ ಜಮೀನಿಗೆ ಭೇಟಿ ನೀಡಿ ಬೆಳೆ ವೀಕ್ಷಿಸಿ ಮಾಹಿತಿ ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ ರೋಗಬಾಧೆ ನಿಯಂತ್ರಣಕ್ಕೆ ಸೂಕ್ತ ಸಲಹೆ ನೀಡಬೇಕಿದೆ.
– ಹೆಚ್.ಬಿ.ಶಿವರುದ್ರ ಹಿಟ್ನೆಹೆಬ್ಬಾಗಿಲು ರೈತ.,

2.ಪಿರಿಯಾಪಟ್ಟಣ ತಾಲ್ಲೂಕಿನಾದ್ಯಂತ ಬಿತ್ತನೆಗೊಂಡಿರುವ ಮುಸುಕಿನಜೋಳದ ಬೆಳೆ ಈಬಾರಿ ನಿರೀಕ್ಷೆಗೂ ಮೀರಿ ಬೆಳೆದಿದ್ದರೂ ಕೀಟಬಾಧೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಬದಲು ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸಿ ಲಭ್ಯವಿರುವ ಇಮಾಮೆಕ್ಸನ್ ಬೆಂಜವೇಟ್ ಎಂಬ ಕೀಟನಾಶಕ ಹಾಗೂ ಅಧಿಕಾರಿಗಳ ಸಲಹೆ ಅನುಸರಿಸಿ ಬೆಳೆಗೆ ಕೀಟನಾಶಕ ಸಿಂಪಡಿಸಿದರೆ ಹುಳುಗಳ ಕಾಟಕ್ಕೆಮುಕ್ತಿನೀಡಬಹುದು.
– ಡಾ.ವೈ.ಪ್ರಸಾದ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ.,

– ಪಿ.ಎನ್.ದೇವೇಗೌಡ ಪಿರಿಯಾಪಟ್ಟಣ

ಟಾಪ್ ನ್ಯೂಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

9

Chikodi: ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.