Hunsur: ವಿವಿಧ ಬೇಡಿಕೆ ಈಡೇರಿಕೆಗಾಗಿ ಸಂಘಟನೆಗಳ ಪ್ರತಿಭಟನಾ ಧರಣಿ


Team Udayavani, Feb 17, 2024, 2:39 PM IST

8-hunsur

ಹುಣಸೂರು: ದೇಶದ ರಾಜಧಾನಿ ದೆಹಲಿಗೆ ಹೊರಟ ರೈತರ ಮೇಲೆ ನಡೆದ ಅಮಾನುಷ ದೌರ್ಜನ್ಯ ಖಂಡಿಸಿ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಹಾಗೂ ಅಂಗನವಾಡಿ ಕಾರ್ಯಕರ್ತರ ಹಾಗೂ ರೈತ ಕೂಲಿಕಾರರ ಮತ್ತು ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಧರಣಿ ನಡೆಸಿದರು.

ನಗರದ ಸಂವಿಧಾನ ಸರ್ಕಲ್‌ನಲ್ಲಿ ದಲಿತ ಹಕ್ಕುಗಳ ಸಮಿತಿ, ರಾಜ್ಯ ರೈತ ಸಂಘ, ನಗರ ಕಾರ್ಮಿಕರ ಸಂಘ, ಡಿಎಚ್‌ಎಸ್, ಡಿಎಸ್‌ಎಸ್ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನಾ  ಧರಣಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ, ಕಾರ್ಮಿಕ, ಕೂಲಿಕಾರರ ವಿರೋಧಿ ನೀತಿಗಳನ್ನು ಕೂಡಲೇ ವಾಪಸ್ ಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸಲು ಕ್ರಮವಹಿಸಬೇಕು ಎಂದ ಪ್ರತಿಭಟನಾಕಾರರು ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಘೋಷಣೆಗೆ ಕೂಗಿ ಗಮನ ಸೆಳೆದರು.

ಸಿಐಟಿಯು ತಾಲೂಕು ಸಂಚಾಲಕ ವಿ.ಬಸವರಾಜಕಲ್ಕುಣಿಕೆ ಮಾತನಾಡಿ, ದೇಶದಲ್ಲಿ ರೈತ ಕಾರ್ಮಿಕರ ಪರವಾಗಿ ನಿಲ್ಲಬೇಕಾದ ಸರಕಾರಗಳು ವಿರೋಧಿ ಧೋರಣೆಗಳನ್ನು ಅನುಸರಿಸಿ ಅವರ ಬದುಕನ್ನು ಕಿತ್ತುಕೊಳ್ಳಲು ಹೊರಟಿವೆ ಎಂದ ಅವರು, ರೈತರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ ದೇಶದ ರಾಜಧಾನಿ ದೆಹಲಿಗೆ ಹೊರಟ ರೈತರ ಮೇಲೆ ಕೇಂದ್ರ ಸರಕಾರ ಅಮಾನುಷವಾಗಿ ಹಲ್ಲೆ ಮಾಡಿ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಇದು ಸಾಧ್ಯವಾಗದ ಮಾತು. ಕೂಡಲೇ ರೈತರೊಂದಿಗೆ ಮಾತುಕತೆ ನಡೆಸಿ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ರೈತರ ಬೇಡಿಕೆಗಳನ್ನು ಈಡೇರಿಸುವ ಬದಲು ಸರಕಾರ ಅವರ ಹೋರಾಟವನ್ನು ಹತ್ತಿಕ್ಕಲು ಹೊರಟಿರುವುದು ರೈತ ವಿರೋಧಿ ಸರಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ ತಾಲೂಕು ಕಾರ್ಯದರ್ಶಿ ಕಾಮ್ರೆಡ್ ಪುಷ್ಪ ಮಾತನಾಡಿ, ದೇಶದಲ್ಲಿ ದುಡಿಯುವ ಜನರಿಗೆ ಇಂದು ಕನಿಷ್ಠ ವೇತನ ಇಲ್ಲದೆ ದುಡಿಯುವ ಪರಿಸ್ಥಿತಿಯನ್ನು ಆಳುವ ಸರಕಾರಗಳೇ ನಿರ್ಮಾಣ ಮಾಡುತ್ತವೆ. ಸರಕಾರಗಳು ಕೂಡಲೇ ದುಡಿಯುವ ವರ್ಗಕ್ಕೆ ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿದ ಅವರು ರೈತ ಕಾರ್ಮಿಕರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಡಿ.ಎಚ್.ಎಸ್ ಜಿಲ್ಲಾ ಸಂಚಾಲಕ ಬೆಳ್ತೂರು ವೆಂಕಟೇಶ್, ಸಿಐಟಿಯು ತಾಲೂಕು ಸಹ ಸಂಚಾಲಕ ಶಿವರಾಮು, ತಾಲೂಕು ಅಂಗನವಾಡಿ ನೌಕರ ಸಂಘದ ತಾಲೂಕು ಅಧ್ಯಕ್ಷ ಮಂಗಳಗೌರಮ್ಮ, ಡಿಎಚ್‌ಎಸ್‌ನ ತಾ.ಅಧ್ಯಕ್ಷ ತಮ್ಮಡಹಳ್ಳಿ ಮಹದೇವು, ರೈತ ಸಂಘದ ತಾಲೂಕು ಅಧ್ಯಕ್ಷ ಬೆಂಕಿಪುರಚಿಕ್ಕಣ್ಣ, ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ದಸಂಸ ನಗರ ಸಂಚಾಲಕ ರಾಜು ಚಿಕ್ಕ ಹುಣಸೂರು ಮಾತನಾಡಿದರು.

ಖಜಾಂಚಿ ಕಲಾವತಿ, ಉಪಾಧ್ಯಕ್ಷೆ ನಾಗಮ್ಮ, ನಗರ ಕಾರ್ಮಿಕ ಸಂಘದ ಅಧ್ಯಕ್ಷ ಚಂದ್ರೇಗೌಡ, ಗೌರವಾಧ್ಯಕ್ಷ ಎಚ್.ಎಮ್.ಶ್ರೀಧರ್, ಮುಖಂಡರಾದ ಪ್ರೇಮ, ರೇಖಾ, ಮಣಿ, ರಂಜಿತಾ, ಪದ್ಮಭಾಯಿ, ಹೊನ್ನಮ್ಮ, ಸರಸ್ವತಿ, ಜಾನಕಿ, ಶಾರದಾ, ಅನ್ನಪೂರ್ಣ, ನಗರ ಕಾರ್ಮಿಕರ ಸಂಘದ ಮಹದೇವು, ಲಕ್ಷ್ಮಣ, ನಾಗನಹಳ್ಳಿ ಚೆಲುವರಾಜು, ಕೆಂಪರಾಮಯ್ಯ, ಸಾಲಿಡಾರಟಿ ಯೂತ್ ಮೂಮಂಟ್‌ನ ಮುದಾಶೀರ್,  ಪಬ್ಲಿಕ್ ಪೀಸ್ ಕಮಿಟಿಯ ಅಜಿಬುಲ್ಲ, ರಿಜ್ವಾನ್, ಬಿಸಿಯೂಟ ಸಂಘದ ಮಂಜುಳ ಹೇಮಾ ಸೇರಿದಂತೆ 200ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.