ಪ್ರವಾಸಿಗರಿಗೆ ನಿರ್ಬಂಧ: ಸಫಾರಿ ಬಂದ್‌


Team Udayavani, Jul 10, 2020, 5:47 AM IST

avasi-bandh

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ತಡೆಗಟ್ಟಲು ಶುಕ್ರವಾರದಿಂದ ಎಚ್‌.ಡಿ.ಕೋಟೆ ತಾಲೂಕಿಗೆ ಹೊರರಾಜ್ಯ/ವಿದೇಶ/ಹೊರಜಿಲ್ಲೆಗಳಿಂದ ಬರುವ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌  ನಿರ್ಬಂಧ ವಿಧಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್‌-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಹಾಗೂ ಸಮುದಾಯದ ತುರ್ತು ಪರಿಸ್ಥಿತಿ ಎದುರಿಸಲು ಈಗಾಗಲೇ ಹಲವು ಕ್ರಮಗಳನ್ನು ತೆಗೆದುಕೊಂಡಿರುವ ಜಿಲ್ಲಾಧಿಕಾರಿಗಳು ಸರ್ಕಾರದ ಆದೇಶದಂತೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಜು.10ರಿಂದ ಮುಂದಿನ ಆದೇಶದವರೆಗೆ ಕೋವಿಡ್‌-19 ಸೋಂಕು ಹರಡದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಎಚ್‌.ಡಿ.ಕೋಟೆ ತಾಲೂಕಿನ ಎಲ್ಲ ಹೋಟೆಲ್‌, ರೆಸಾರ್ಟ್‌, ಲಾಡ್ಜ್, ಹೋಂ ಸ್ಟೇ, ವಸತಿ ಗೃಹಗಳಲ್ಲಿ ವಸತಿ ಸೌಕರ್ಯ ನೀಡದಂತೆ ಆದೇಶ ಹೊರಡಿಸಿದ್ದಾರೆ. ಹೊರ ಜಿಲ್ಲೆ, ರಾಜ್ಯ, ಹಾಗೂ ವಿದೇಶಗಳಿಂದ ಬರುವ  ಪ್ರವಾಸಿಗರಿಗೆ ವಸತಿ ಸೌಕರ್ಯ ನೀಡುವಂತಿಲ್ಲ.

ಅಲ್ಲದೇ ಇನ್ನು ಮುಂದೆ ಹೊರಗಿನ ಪ್ರವಾಸಿಗರ ಆನ್‌ ಲೈನ್‌, ಆಫ್ಲೈನ್‌ ಬುಕ್ಕಿಂಗ್‌ ಸ್ವೀಕರಿಸುವಂತಿಲ್ಲ ಎಂದು ಸೂಚಿಸಿದ್ದಾರೆ. ಈಗಾಗಲೇ ಆಗಮಿಸಿ ವಸತಿ ಸೌಕರ್ಯ ಹೊಂದಿರುವ  ವಾಸಿಗರನ್ನು  ಬಲವಂತವಾಗಿ ವಾಪಸ್‌ ಕಳುಹಿಸದೇ ಅವರನ್ನು ಅವಧಿ ಪೂರ್ಣಗೊಳ್ಳುವವರೆಗೂ ಕಾಯ್ದಿರಿಸುವುದು ಹಾಗೂ ಈಗಾಗಲೇ ಮುಂಗಡ ಬುಕ್ಕಿಂಗ್‌ ಮಾಡಿ ಬಂದಿಲ್ಲದಿದ್ದರೆ ಬುಕ್ಕಿಂಗ್‌ ರದ್ದು ಪಡಿಸುವಂತೆ ತಿಳಿಸಿದ್ದಾರೆ.

ಈ ನಿರ್ಬಂಧಗಳು  ಎಚ್‌.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲ ಸಫಾರಿಗಳಿಗೂ ಅನ್ವಯವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆ ಸಮಾರಂಭಗಳು ರದ್ದು: ಕೋವಿಡ್‌-19 ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಭೆ, ಸಮಾರಂಭಗಳನ್ನು ಕೈ ಬಿಡಬೇಕು. ಜನದಟ್ಟಣೆ ಕಾರ್ಯಕ್ರಮಗಳು ಹಾಗೂ ಜನ ಸೇರುವುದನ್ನು ತಡೆಗಟ್ಟಲು ಭೂಮಿ  ಪೂಜೆ, ಉದ್ಘಾಟನೆ ಹಾಗೂ ಇತರೆ ಸಮಾರಂಭಗಳನ್ನು ಕೈ ಬಿಡುವಂತೆ ಹಾಗೂ ಅನಿವಾರ್ಯ ಪರಿಸ್ಥಿತಿ ಯಲ್ಲಿ ಸಾಂಕೇತಿಕವಾಗಿ 20 ಜನರು ಮೀರದ ಹಾಗೆ ಕಾರ್ಯಕ್ರಮ ವನ್ನು ನಡೆಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.