ಜೈನ ಧರ್ಮೀಯರ ಬಗ್ಗೆ ಅವಹೇಳನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಮನವಿ
Team Udayavani, Feb 12, 2022, 5:00 PM IST
ಭಟ್ಕಳ: ಮೈಸೂರಿನ ನ್ಯೂ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಅಯೂಬ್ ಖಾನ್ ಎನ್ನುವವರು ಜೈನ ಧರ್ಮೀಯರ ಬಗ್ಗೆ ವಿಜಯಾ ಟಿ.ವಿ. ಚಾನೆಲ್ಲಿನಲ್ಲಿ ಅವಹೇಳನಕರವಾಗಿ ಮಾತನಾಡಿದ್ದು ಖಂಡನೀಯ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಶ್ರೀ ಪದ್ಮಾವತಿ ಜ್ವಾಲಾಮಾಲಿನಿ ಮತ್ತು ಚಂದ್ರನಾಥ ಸ್ವಾಮಿ ಬಸದಿ ಟ್ರಸ್ಟ್ ಹಾಡುವಳ್ಳಿ ಇದರ ವತಿಯಿಂದ ಪೊಲೀಸ್ ಉಪಾಧೀಕ್ಷಕರ ಮೂಲಕ ಮನವಿ ಸಲ್ಲಿಸಲಾಯಿತು.
ಮೈಸೂರಿನ ಸಂಸದ ಪ್ರತಾಪ ಸಿಂಹ ಅವರನ್ನು ಟೀಕಿಸುವ ಭರದಲ್ಲಿ ಜೈನ ಧರ್ಮಕ್ಕೆ ಸಂಬಂಧ ಪಟ್ಟ ಹಾಗೆ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡುವುದು ಖಂಡನೀಯವಾಗಿದೆ.
ಜೈನಧರ್ಮಿಯರು ಆರಾಧಿಸುವ ಬಾಹುಬಲಿಯ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿ ಜೈನ ಧರ್ಮಿಯರಿಗೆ ನೋವನ್ನುಂಟು ಮಾಡಿದ್ದು ಅಕ್ಷಮ್ಯ ಅಪರಾಧವಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹಲವು ಬಾರಿ ನಮ್ಮ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದರ ಮೂಲಕ ಜೈನ ಧರ್ಮಿಯರಿಗೆ ನೋವನ್ನುಂಟು ಮಾಡಿದ್ದಾರೆ. ಇನ್ನು ಮುಂದೆ ಯಾವುದೇ ವ್ಯಕ್ತಿ ಜೈನ ಧರ್ಮದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಅಲ್ಲದೇ ಬಿಗ್ಬಾಸ್ ಸ್ಪರ್ಧಿ ಪ್ರಥಮ್ ಹಾಗೂ ಪಬ್ಲಿಕ್ ಟಿ.ವಿ.ಯ ಅರುಣ್ ಬಡಿಗೇರ ಇವರೂ ಕೂಡಾ ಅವಹೇಳನಕಾರಿಯಾಗಿ ಮಾತನಾಡಿದ್ದು ಅವರ ಮೇಲೂ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಕೆ. ಯು. ಬೆಳ್ಳಿಯಪ್ಪ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಧನ್ಯಕುಮಾರ ಜೈನ್, ಪದ್ಮರಾಜ ಜೈನ್, ವೀರೇಂದ್ರಕುಮಾರ ಜೈನ್, ಯೋಗರಾಜ ಜೈನ್, ಪದ್ಮಪ್ರಸಾದ ಜೈನ್, ಪ್ರಸಾದ ಜೈನ್, ಪ್ರಭತೀಂದ್ರ ಜೈನ್ ಮುಂತಾದವರಿದ್ದರು.
ಇದನ್ನೂ ಓದಿ : ಯುದ್ಧ ಸನ್ನಿವೇಶ : ಪುತಿನ್-ಬಿಡೆನ್ ಉನ್ನತ ಮಟ್ಟದ ದೂರವಾಣಿ ಮಾತುಕತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.