ರಾಜ್ಯದಲ್ಲಿ 1,316 ಶಾಲೆಗಳು ಅನಧಿಕೃತ: ಶಿಕ್ಷಣ ಇಲಾಖೆ 


Team Udayavani, Feb 15, 2023, 6:10 AM IST

ರಾಜ್ಯದಲ್ಲಿ 1,316 ಶಾಲೆಗಳು ಅನಧಿಕೃತ: ಶಿಕ್ಷಣ ಇಲಾಖೆ 

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,316 ಶಾಲೆಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಂಗ್ರಹಿಸಿದ್ದು, ಈ ಪೈಕಿ 871 ಶಾಲೆಗಳು ಬೆಂಗಳೂರಿನಲ್ಲೇ ಇವೆ.

ರಾಜ್ಯ ಪಠ್ಯಕ್ರಮದಲ್ಲಿ ಅನುಮತಿ ಪಡೆದು ಇತರೆ ಪಠ್ಯಕ್ರಮದಲ್ಲಿ ಬೋಧಿಸುತ್ತಿರುವ 95 ಶಾಲೆಗಳು, ಒಂದು ಮಾಧ್ಯಮಕ್ಕೆ ಅನುಮತಿ ಪಡೆದು ಇನ್ನೊಂದು ಮಾಧ್ಯಮದಲ್ಲಿ ಬೋಧಿಸುತ್ತಿರುವ 294 ಶಾಲೆಗಳು ಪತ್ತೆಯಾಗಿವೆ. ಅಲ್ಲದೆ ರಾಜ್ಯದಲ್ಲಿ ಅನುಮತಿ ಪಡೆಯದೇ 63 ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು 74 ಶಾಲೆಗಳು ಅನಧಿಕೃತವಾಗಿ ಉನ್ನತೀಕರಿಸಿಕೊಂಡಿವೆ.

ಅನಧಿಕೃತ ಶಾಲೆಗಳಿಗೆ ನೋಟಿಸ್‌ ನೀಡಲಾಗಿದ್ದು ಈ ಶಾಲೆಗಳ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು ಆದಷ್ಟು ಶೀಘ್ರ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ 386 ಶಾಲೆಗಳು ಮತ್ತು ಬೆಂಗಳೂರು ಉತ್ತರದಲ್ಲಿ 485 ಅನಧಿಕೃತ ಶಾಲೆಗಳು ಪತ್ತೆಯಾಗಿದೆ. ರಾಜ್ಯದ ಒಟ್ಟು ಅನಧಿಕೃತ ಶಾಲೆಗಳಲ್ಲಿ ಶೇ. 66 ಬೆಂಗಳೂರಿನಲ್ಲೇ ಇದೆ. ಉಳಿದಂತೆ ತುಮಕೂರು 109, ಬೆಂಗಳೂರು ಗ್ರಾಮಾಂತರ 66, ಚಿಕ್ಕಬಳ್ಳಾಪುರ 59, ಬೀದರ್‌ 50, ಕೋಲಾರ 32, ಚಿಕ್ಕಮಗಳೂರು 21, ಕಲಬುರಗಿ 17, ಧಾರವಾಡ 14, ಮಂಡ್ಯ ಜಿಲ್ಲೆಯಲ್ಲಿ 10 ಶಾಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

14 ಜಿಲ್ಲೆಯಲ್ಲಿ ಅನಧಿಕೃತ ಶಾಲೆಗಳೇ ಇಲ್ಲ
ದಕ್ಷಿಣ ಕನ್ನಡ, ಗದಗ, ಶಿರಸಿ, ವಿಜಯಪುರ, ಬಾಗಲಕೋಟೆ, ಚಿಕ್ಕೊಡಿ, ಬೆಳಗಾವಿ, ಕೊಡಗು, ಕೊಪ್ಪಳ, ಯಾದಗಿರಿ, ವಿಜಯನಗರ, ರಾಮನಗರ, ದಾವಣಗೆರೆ, ಶಿವಮೊಗ್ಗ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಅನಧಿಕೃತ ಶಾಲೆಗಳು ಕಂಡು ಬಂದಿಲ್ಲ. ಉಳಿದಂತೆ ಉಡುಪಿ, ಹಾವೇರಿ ಮತ್ತು ಚಿತ್ರದುರ್ಗದಲ್ಲಿ ಒಂದೇ ಒಂದು ಅನಧಿಕೃತ ಶಾಲೆ ಪತ್ತೆಯಾಗಿದೆ. ಹಾಸನ 2, ರಾಯಚೂರು 4, ಚಾಮರಾಜನಗರ 5, ಮೈಸೂರು ಜಿಲ್ಲೆಯಲ್ಲಿ 7 ಅನಧಿಕೃತ ಶಾಲೆಗಳನ್ನು ಗುರುತಿಸಲಾಗಿದೆ ಎಂದು ಹೇಳಲಾಗಿದೆ.

ಅನಧಿಕೃತ ಶಾಲೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಅನಧಿಕೃತ ಶಾಲೆಗಳ ಅಂತಿಮ ಪಟ್ಟಿ ತಯರಾಗಿಲ್ಲ. ಅನಧಿಕೃತ ಶಾಲೆಗಳೆಂದು ಮೇಲ್ನೊಟಕ್ಕೆ ಕಂಡು ಬಂದಿರುವ ಶಾಲೆಗಳ ದಾಖಲೆಗಳ ಪರಿಶೀಲನೆ ನಡೆಸಬೇಕಿದೆ. ಶಾಲೆಗಳನ್ನು ಅನಧಿಕೃತವೆಂದು ಘೋಷಿಸುವುದು ಅತ್ಯಂತ ಸೂಕ್ಷ್ಮ ಸಂಗತಿಯಾಗಿದ್ದು ನಾವು ಅವಸರ ಮಾಡುವಂತಿಲ್ಲ. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಗೊಳ್ಳುವ ಮೊದಲೇ ನಾವು ಅನಧಿಕೃತ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.
– ಆರ್‌. ವಿಶಾಲ್‌, ಶಿಕ್ಷಣ ಇಲಾಖೆಯ ಆಯುಕ್ತರು

ಶಿಕ್ಷಣ ಇಲಾಖೆ ಸರಿಯಾಗಿ ಗಮನಿಸಿದರೆ ಅನಧಿಕೃತ ಶಾಲೆಗಳ ಸಂಖ್ಯೆ ಇನ್ನಷ್ಟು ಹೆಚ್ಚಿರುವ ಸಂಭವವಿದೆ. ಶಿಕ್ಷಣ ಇಲಾಖೆಯ ಆಯುಕ್ತರ ಆನುಮೋದಿತ ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ಮಕ್ಕಳ ದಾಖಲಾತಿ, ಹಾಜರಾತಿಗಳನ್ನು ನೋಂದಾಣಿ ಮಾಡಿಕೊಂಡು ಬಂದಿದ್ದೇವೆ. ಆರ್‌ಟಿಇ ಅಡಿಯಲ್ಲಿ ಅಧಿಕೃತ ಶಾಲೆಯೆಂದು, ಪ್ರತಿ ವರ್ಷ ಆರ್‌ಟಿಇ ಆಡಿ ಸೀಟುಗಳನ್ನು ಘೋಷಿಸಿ ಈಗ ಅನಧಿಕೃತ ಶಾಲೆಯೆಂದು ಪ್ರಕಟಿಸಿರುವುದು ಸರಿಯಲ್ಲ.
ಡಿ. ಶಶಿಕುಮಾರ್‌, ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವ್ಯವಸ್ಥಾಪಕರ ಸಂಘಟನೆ

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.