ಉಡುಪಿಯಿಂದ 1,460 ವಲಸೆ ಕಾರ್ಮಿಕರ ಯಾನ

ಉತ್ತರ ಪ್ರದೇಶಕ್ಕೆ ಶ್ರಮಿಕ್‌ ರೈಲು

Team Udayavani, May 18, 2020, 5:55 AM IST

ಉಡುಪಿಯಿಂದ 1,460 ವಲಸೆ ಕಾರ್ಮಿಕರ ಯಾನ

ಉಡುಪಿ: ಜಿಲ್ಲೆಯಿಂದ ಮೊದಲ ಶ್ರಮಿಕ್‌ ರೈಲು ರವಿವಾರ ಇಂದ್ರಾಳಿ ನಿಲ್ದಾಣದಿಂದ ಉತ್ತರ ಪ್ರದೇಶಕ್ಕೆ ಹೊರಟಿತು. 1,460 ಮಂದಿ ವಲಸೆ ಕಾರ್ಮಿಕರು ರೈಲಿನಲ್ಲಿ ತೆರಳಿದರು. ಈ ರೈಲು ಉತ್ತರ ಪ್ರದೇಶ ಬಸ್ತಿ ನಿಲ್ದಾಣವನ್ನು ಮೇ 19ರ ಬೆಳಗ್ಗೆ 6.10ಕ್ಕೆ ತಲುಪಲಿದೆ. ಮಧ್ಯದಲ್ಲಿ ನಿಲುಗಡೆ ಇರುವುದಿಲ್ಲ.

ಮಧ್ಯಾಹ್ನ 2 ಗಂಟೆಗೆ ಇಂದ್ರಾಳಿ ರೈಲು ನಿಲ್ದಾಣದ ಹೊರಗೆ ತೆರೆದ ಕೌಂಟರ್‌ನಲ್ಲಿ ಟಿಕೆಟ್‌ ನೋಂದಣಿ ನಡೆಯಿತು. ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಂಡು ಇ-ಪಾಸ್‌ ಹೊಂದಿರುವ ಉತ್ತರ ಪ್ರದೇಶ ರಾಜ್ಯದ ಜನರು ಟಿಕೆಟ್‌ ಕೌಂಟರ್‌ಗಳಲ್ಲಿ ಟಿಕೆಟ್‌ ಪಡೆದುಕೊಂಡರು.

ಉಡುಪಿ, ಬ್ರಹ್ಮಾವರ, ಕಾಪು, ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಪಾಸ್‌ ಪಡೆದಿರುವವರು ನೇರವಾಗಿ ನಿಲ್ದಾಣಕ್ಕೆ ಬಂದು ಟಿಕೆಟ್‌ ಪಡೆದು ರೈಲನ್ನೇರಿದರು. ಕಾರ್ಕಳದಿಂದ 236 ಮಂದಿ, ಕುಂದಾಪುರದಿಂದ 323 ಮಂದಿ ಉಳಿದಂತೆ ಕಾಪು, ಬ್ರಹ್ಮಾವರ ಸೇರಿ ಉಡುಪಿ ಯುನಿಟ್‌ನಲ್ಲಿ 901 ಮಂದಿ ಇದ್ದರು. ಒಬ್ಬರಿಗೆ ತಲಾ 910 ರೂ. ಪ್ರಯಾಣ ದರ ನಿಗದಿಪಡಿಸಲಾಗಿತ್ತು. ಕುಂದಾಪುರ ಮತ್ತು ಕಾರ್ಕಳದಿಂದ ರೈಲ್ವೇ ನಿಲ್ದಾಣಕ್ಕೆ ಒಟ್ಟು 14 ಕೆಎಸ್ಸಾರ್ಟಿಸಿ ಬಸ್‌ಗಳಿಂದ ಕಾರ್ಮಿಕರನ್ನು ಕರೆತರಲಾಯಿತು.

600 ಮಂದಿಗೆ ನಿರಾಸೆ
ಹೆಚ್ಚುವರಿಯಾಗಿ ತೆರಳಲು ಅವಕಾಶ ಇದೆ ಎಂದು ತಿಳಿದು ಜಿಲ್ಲೆಯ ಬೇರೆ ಬೇರೆ ಭಾಗದಿಂದ ಕಾರ್ಮಿಕರು ಖಾಸಗಿ ವಾಹನಗಳ ಮೂಲಕ ರೈಲು ನಿಲ್ದಾಣದಲ್ಲಿ ನೆರೆದ ಘಟನೆ ನಡೆಯಿತು. ಇದರಲ್ಲಿ ಸೇವಾಸಿಂಧುವಿನಲ್ಲಿ ಅನುಮತಿ ಪತ್ರ ಪಡೆಯದ, ಅಪ್‌ಲೋಡ್‌ ಮಾಡಿ ನೋಂದಣಿ ಆಗದ ಮಂದಿ ನೋಂದಣಿ ಮಾಡಿದ್ದೇವೆ ಎಂದು ಯಾವುದೇ ದಾಖಲೆ ಇಲ್ಲದೆ ಬಂದಿದ್ದರು. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳು ರೈಲಿನಲ್ಲಿ ಈಗಾಗಲೇ ನಿಗದಿಯಾದ ಸೀಟು ಭರ್ತಿಯಾಗಿದ್ದು ಮುಂದಿನ ದಿನದಲ್ಲಿ ತೆರಳಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಸ್ಥಳದಲ್ಲಿ ನೆರೆದಿದ್ದ ಸುಮಾರ 600 ಮಂದಿಯನ್ನು ಹಿಂದೆ ಕಳುಹಿಸಿದ ಘಟನೆಯೂ ನಡೆಯಿತು.

ನಿಲ್ದಾಣದಲ್ಲಿ ಸೇರಿದವರಿಗೆ ಜಿಲ್ಲಾಡಳಿತದ ಸೂಚನೆ ಮೇರೆಗೆ ಶಾಸಕ ರಘುಪತಿ ಭಟ್‌, ರಾಘವೇಂದ್ರ ಕಿಣಿ ನೇತೃತ್ವದ ಕಡಿಯಾಳಿ ಗಣೇಶೋತ್ಸವ ಸಮಿತಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿತು. ರಘುಪತಿ ಭಟ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಶೀಲ್ದಾರರಾದ ಉಡುಪಿಯ ಪ್ರದೀಪ ಕುರ್ಡೇಕರ್ ‌, ಕಾಪುವಿನ ಮೊಹಮ್ಮದ್‌ ಐಸಾಕ್‌, ಡಿವೈಎಸ್‌ಪಿ ಜೈಶಂಕರ್‌, ಸರ್ಕಲ್‌ ಇನ್‌ಸ್ಪೆಕ್ಟರ್‌ ಮಂಜುನಾಥ್‌ ಉಸ್ತುವಾರಿ ವಹಿಸಿದ್ದರು.

ಇನ್ನಷ್ಟು ರೈಲಿಗೆ ವ್ಯವಸ್ಥೆ
ಜಿಲ್ಲೆಯಲ್ಲಿ ಮಧ್ಯಪ್ರದೇಶ 379, ಒಡಿಶಾ 780, ಪಶ್ಚಿಮ ಬಂಗಾಲ 977, ಬಿಹಾರ 1,600, ಛತ್ತೀಸ್‌ಗಢ್‌ 280, ರಾಜಸ್ಥಾನ 379, ಝಾರ್ಖಂಡ್‌ 1.712, ಅಸ್ಸಾಂ 338, ಉತ್ತರಾಖಂಡದ 110 ಮಂದಿ ಸೇವಾಸಿಂಧು ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶ, ಉತ್ತರಾಂಚಲ, ಮಧ್ಯಪ್ರದೇಶ, ಝಾರ್ಖಂಡಗೆ ರೈಲು ವ್ಯವ್ಯಸ್ಥೆಗೆ ಪ್ರಯತ್ನ ಮಾಡಲಾಗುತ್ತಿದೆ.
ಸದಾಶಿವ ಪ್ರಭು, ಎಡಿಸಿ ಉಡುಪಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.