ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ನೀಡಿ


Team Udayavani, Mar 15, 2023, 5:10 AM IST

ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ನೀಡಿ

ಸಿ.ಬಿ.ಶಶಿಧರ್‌, ತೆಂಗು ಬೆಳೆಗಾರರ ಸಂಘದ ಗೌರವಾಧ್ಯಕ್ಷ
ಕಲ್ಪತರು ನಾಡಿನ ರೈತರ ಜೀವನಾಧಾರ ಹಾಗೂ ಪ್ರಮುಖ ವಾಣಿಜ್ಯ ಬೆಳೆ ತೆಂಗು. ಇದರ ಪ್ರಮುಖ ಉತ್ಪನ್ನ ಒಣ ಕೊಬ್ಬರಿ. ಇದರ ಬೆಲೆ ಕಳೆದ ವರ್ಷ ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ಗೆ 18 ಸಾವಿರ ರೂ. ಇತ್ತು. ಪ್ರಸ್ತುತ ತಿಪಟೂರಿನ ಪ್ರಸಿದ್ಧ ಕೊಬ್ಬರಿ ಮಾರುಕಟ್ಟೆಯಲ್ಲಿಹಾಲಿ 9 ಸಾವಿರ ರೂ. ಆಸುಪಾಸಿಗೆ ಕುಸಿದಿದೆ.

ಕೊಬ್ಬರಿ ಬೆಲೆ ತೀವ್ರ ಕುಸಿತವಾಗಿರುವುದರ ವಿರುದ್ಧ ತಿಪಟೂರಿನಲ್ಲಿ ತೆಂಗು ಬೆಳೆಗಾರರ ಪರ ರೈತ, ವಿವಿಧ ಸಂಘಟನೆಗಳು ನಿರಂತ ರವಾಗಿ ಹೋರಾಟ ನಡೆಸುತ್ತಿವೆ. ಆದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಯಾವುದೇ ಸ್ಪಂದನೆ ನೀಡಿಲ್ಲ. ಇದೇ ರೀತಿ ವಿವಿಧ ಪಕ್ಷಗಳೂ ಕೊಬ್ಬರಿ ಬೆಂಬಲ ಬೆಲೆ ಬಗ್ಗೆ ಹಾಗೂ ಧಾರಣೆ ಬಗ್ಗೆ ಯಾವ ನಿಲುವನ್ನೂ ಹೊಂದಿಲ್ಲ. ಪಕ್ಷಗಳ ಚುನಾವಣ ಪ್ರಣಾಳಿಕೆ ಗಳಲ್ಲಿ ತೆಂಗು ಬೆಳೆಗಾರರ ಬಗ್ಗೆ ಏನೂ ಹೇಳಿಲ್ಲ.

ರೈತಪರವಾಗಿ ಮಾತನಾಡುವ ಸರಕಾರ ರೈತರ ತುಟಿಗೆ ತುಪ್ಪ ಸವರುವ ಕೆಲಸ ಮಾಡುತ್ತಿರುವುದು ಬಿಟ್ಟರೆ, ರೈತರಿಗೆ ಯಾವ ಅನುಕೂಲವೂ ಆಗುತ್ತಿಲ್ಲ. ತೆಂಗಿನ ಮರ ಗಳಿಗೆ ಅಣಬೆ ರೋಗ, ರಸ ಸೋರುವುದು, ನುಸಿ ಹೀಗೆ ಹಲವು ರೋಗಗಳು ಬರುತ್ತಿವೆ. ತೆಂಗನ್ನೇ ನಂಬಿ ಜೀವನ ನಡೆಸುತ್ತಿರುವ ರೈತನ ಸ್ಥಿತಿ ಶೋಚನೀಯವಾಗಿದೆ.

ಒಂದು ತೆಂಗಿನ ಮರ ಬೆಳೆಸಲು ಹತ್ತು ವರ್ಷ ಬೇಕು. ಅದರ ಪಾಲನೆ ಪೋಷಣೆಗಾಗಿ 10 ಸಾವಿರ ರೂ.ಗಳಿಗೂ ಹೆಚ್ಚು ಖರ್ಚು ಬರುತ್ತದೆ. ಇನ್ನೇನು ಫ‌ಸಲು ಬಂತು ಎನ್ನುವಾಗ ರೋಗಗಳು ಬಂದು ತೆಂಗಿನ ಮರಗಳು ನಾಶವಾಗುತ್ತಿವೆ. ದೇಶಕ್ಕೆ ಅನ್ನ ಕೊಡುವ ಹಾಗೂ ತೆರಿಗೆ ಕಟ್ಟುವ ರೈತನ ಬಗ್ಗೆ ಸರಕಾರ ಉದಾಸೀನತೆ ತೋರುತ್ತಿದೆ. ಈ ಬಾರಿಯ ಪ್ರಣಾಳಿಕೆಗಳಲ್ಲಿ ರಾಜಕೀಯ ಪಕ್ಷಗಳು ತೆಂಗು ಬೆಳೆಗಾರರ ಬಗ್ಗೆ ಪ್ರಸ್ತಾವಿಸಲಿ.

ಪ್ರಮುಖ ಹಕ್ಕೊತ್ತಾಯಗಳು
ಒಂದು ಕ್ವಿಂಟಾಲ್‌ ಕೊಬ್ಬರಿ ಬೆಳೆಯಲು 16,000ರೂ.ಕ್ಕೂ ಹೆಚ್ಚು ಖರ್ಚು ಬರುತ್ತಿದೆ. ತೆಂಗು ಬೆಳೆಗಾರರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಮಾಡಬೇಕು ಎಂದು ನೀಡಿರುವ ವರದಿ ಜಾರಿಗೆ ತರಬೇಕು.  ತೆಂಗಿನ ಕಾಯಿಗಳಿಂದ ಉತ್ತಮ ಗುಣಮಟ್ಟದ ಕೊಬ್ಬರಿ ತಯಾರಿ ಆಗಿರುವ ಬಗ್ಗೆ ತೋಟಗಾರಿಕ ವಿಜಾnನಿಗಳಿಂದ ಉತ್ತಮ ತರಬೇತಿ, ಪೋ›ತ್ಸಾಹ ನೀಡಬೇಕು.  ಕೊಬ್ಬರಿ ಬೆಲೆ ಯಾವಾಗಲೂ ಸಾಕಷ್ಟು ಏರಿಳಿತ ಇರುವುದರಿಂದ ಲಾಭದಾಯಕ ಬೆಂಬಲ ಬೆಲೆ ನೀಡಿ ಎಪಿಎಂಸಿ ಮಾರುಕಟ್ಟೆಗಳಲ್ಲಿ ಸರಕಾರ ನಫೆಡ್‌ ಖರೀದಿ ಕೇಂದ್ರಗಳನ್ನು ಸದಾಕಾಲ ತೆರೆದು ಬೆಂಬಲ ಬೆಲೆ ಹಾಗೂ ಪೋ›ತ್ಸಾಹ ಬೆಲೆ ನೀಡಿ ಕೊಬ್ಬರಿ ಖರೀದಿಸಬೇಕು.  ತೆಂಗಿನ ಕಾಯಿ ಹಾಗೂ ಕೊಬ್ಬರಿಯಿಂದ ಹೆಚ್ಚು ಉಪ ಉತ್ಪನ್ನಗಳನ್ನು ಯುವ ರೈತರು ತಯಾರಿಸಲು ತರಬೇತಿ, ಮಾರುಕಟ್ಟೆ ಒದಗಿಸಲು ಸರಕಾರ ಮುಂದಾಗಬೇಕು.  ಎಳನೀರನ್ನು ವಿವಿಧ ತಂಪು ಪಾನೀಯಗಳ ರೀತಿ ಮಾರಾಟ ಮಾಡುವಂತಹ ತಾಂತ್ರಿಕತೆ ಒದಗಿಸುವ ಕೆಲಸವನ್ನು ತೋಟಗಾರಿಕೆ ಮೂಲಕ ಒದಗಿಸುವ ಬಗ್ಗೆ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿ ಜಾರಿಗೆ ತರಬೇಕು.  ಕೊಬ್ಬರಿ ಎಣ್ಣೆ ಆರೋಗ್ಯಕ್ಕೆ ಹೆಚ್ಚು ಅನುಕೂಲ­ವಿರುವುದರಿಂದ ಸರಕಾರ ಎಲ್ಲೆಡೆ ಕೊಬ್ಬರಿ ಎಣ್ಣೆ ಬಳಸಲು ಹೆಚ್ಚು ಜಾಗೃತಿ, ಮಾರುಕಟ್ಟೆ ಒದಗಿಸಿ ತೆಂಗು ಬೆಳೆಗಾರರ ನೆರವಿಗೆ ನಿಲ್ಲಬೇಕು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.