2025ರ ಎ. 19, 20; ಶಿವಮೊಗ್ಗದಲ್ಲಿ “ಮಲೆನಾಡ ಕಂಬಳ’ ಆಯೋಜನೆ
Team Udayavani, Aug 21, 2024, 6:40 AM IST
ಮಂಗಳೂರು: ಬೆಂಗಳೂರಿನ ಬಳಿಕ ಕರಾವಳಿಯ ಜಾನ ಪದ ಕ್ರೀಡೆ ಕಂಬಳವನ್ನು ಶಿವ ಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಎ.19 ಹಾಗೂ 20ರಂದು ಆಯೋ ಜಿಸಲಾಗುತ್ತಿದೆ ಎಂದು ಕಂಬಳ ಜಿಲ್ಲಾ ಸಮಿತಿ ಅಧ್ಯಕ್ಷ ಡಾ| ಬೆಳಪು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಧುನಿಕ ತಂತ್ರಜ್ಞಾನ ಹಾಗೂ ಶಿಸ್ತು ಪಾಲಿಸಿಕೊಂಡು ಆಯೋಜಿಸಲು ಸಿದ್ಧತೆ ನಡೆ ಸಲಾಗಿದೆ. ಮಾಜಿ ಸಚಿವ ಈಶ್ವರಪ್ಪ, ರೋಟರಿ ಸಂಸ್ಥೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದರು.
ಕಂಬಳ ಸಂಪ್ರದಾಯ, ಆಚಾರ ವಿಚಾರ, ಒಳಗೊಂಡ ವಿಶಿಷ್ಟ ಕ್ರೀಡೆ.ಕಂಬಳ ಕರೆ, ನೀರಿನ ವ್ಯವಸ್ಥೆ, ಕೋಣಗಳು ಉಳಿದುಕೊಳ್ಳುವ ವ್ಯವಸ್ಥೆ ಬಗ್ಗೆ ಚರ್ಚಿಸಲಾಗಿದೆ. ಕರಾ ವಳಿ ಭಾಗದಿಂದ ಕೋಣಗಳನ್ನು ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಕಂಬಳ ಶಿಸ್ತು ಸಮಿತಿ ಅಧ್ಯಕ್ಷ ಭಾಸ್ಕರ ಕೋಟ್ಯಾನ್, ಶಿವಮೊಗ್ಗ ಕಂಬಳ ಆಯೋಜನ ಸಮಿತಿ ಅಧ್ಯಕ್ಷ ಲೋಕೇಶ್ ಶೆಟ್ಟಿ ರೈ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.