25 ಸಾ.ಕೋ.ರೂ. ಬಂಡವಾಳ ನಿರೀಕ್ಷೆ-ಅಮೆರಿಕ ಪ್ರವಾಸ ಬಗ್ಗೆ ಸಚಿವ ಪ್ರಿಯಾಂಕ್‌ ಮಾಹಿತಿ


Team Udayavani, Oct 12, 2023, 11:43 PM IST

PRIYANK KHARGE IMP

ಬೆಂಗಳೂರು: ಈ ವರ್ಷಾಂತ್ಯ ಅಥವಾ 2025ರ ಜನವರಿಯಲ್ಲಿ ರಾಜ್ಯ ಸರಕಾರ ನಡೆಸಲು ಉದ್ದೇಶಿಸಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರಕಾರ ಬರೋಬ್ಬರಿ 25 ಸಾವಿರ ಕೋಟಿ ರೂ. ಬಂಡವಾಳವನ್ನು ನಿರೀಕ್ಷೆ ಮಾಡಿದೆ.

ಈ ಬಗ್ಗೆ 12 ದಿನಗಳ ಕಾಲ ವಿದೇಶ ಪ್ರವಾಸ ನಡೆಸಿದ್ದ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಅವರು ಗುರುವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. “12 ದಿನಗಳ ಪ್ರವಾಸದಲ್ಲಿ ಅಮೆರಿಕದ ಪೂರ್ವ ಕರಾವಳಿಯಿಂದ ಪಶ್ಚಿಮ ಕರಾವಳಿವರೆಗೆ ಸಂಚರಿಸಿ ಬೇರೆ ಬೇರೆ ಕಂಪೆನಿಗಳ ಉನ್ನತ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಯಿತು. ಈ ವೇಳೆ ಒಟ್ಟು 36 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆವು. ಕೆಲವು ಸಂಸ್ಥೆಗಳ ಉತ್ಪಾದನ ಘಟಕಗಳಿಗೆ ತೆರಳಿ ಪರಿಶೀಲಿಸಿದ್ದೇವೆ’ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಯಾವ ಕ್ಷೇತ್ರಗಳಿಗೆ ಆದ್ಯತೆ?
ಎಲೆಕ್ಟ್ರಾನಿಕ್ಸ್‌, ಸೆಮಿಕಂಡಕ್ಟರ್‌, ಏರೋ ಸ್ಪೇಸ್‌, ಆಟೋ, ಇವಿ, ಮೆಡ್‌-ಟೆಕ್‌ ವಲಯಗಳಿಂದ ಹೂಡಿಕೆ ಗಳನ್ನು ನಿರೀಕ್ಷಿಸಲಾಗಿದೆ. ಅಲ್ಲದೆ, ಅಪ್ಲೆ„ಡ್‌ ಮೆಟೀರಿ ಯಲ್‌, ಎಎಂಡಿ, ಗ್ಲೋಬಲ್‌ ಫೌಂಡ್ರಿಸ್‌, ಲ್ಯಾಮ್‌ ರಿಸರ್ಚ್‌, ಬೋಯಿಂಗ್‌, ಕ್ರಿಪ್ಟನ್‌, ಡೆಲ್‌, ಎಂಕೆಎಸ್‌ ಇನ್‌ಸ್ಟ್ರೆéಮೆಂಟ್ಸ್‌, ಟೆಡಾರೈನ್‌, ಜೆಇ ಹೆಲ್ತ್‌ ಕೇರ್‌, ಇಂಟೆಲ್‌ ಲ್ಯಾಬ್ಸ್, ಆರ್ಟಿ ಎಕ್ಸ್‌, ಟೆಕ್ಸಾಸ್‌ ಇನ್‌ವೆಸ್ಟ್‌ಮೆಂಟ್ಸ್‌, ಆಪಲ್‌, ವಾಟರ್ಸ್‌ ಕಾಪರ್‌ನಂತಹ ಮುಂಚೂಣಿ ಕಂಪೆನಿ ಜತೆಗೆ ಚರ್ಚಿಸಲಾಯಿತು ಎಂದರು.

ಕೌಶಲಯುತ ಮಾನವ ಸಂಪನ್ಮೂಲ
ಬಹುತೇಕ ಕಂಪೆನಿಗಳು ಭಾರತ ಎಂದರೆ, ಬೆಂಗಳೂರು ಎನ್ನುವಂತೆ ಬಿಂಬಿತವಾಗಿದೆ. ದೇಶದಲ್ಲಿ ಮಾನವ ಸಂಪನ್ಮೂಲವಿದೆ. ಆದರೆ, ಕೌಶಲಯುತ, ಉದ್ಯಮಶೀಲ ಮಾನವ ಸಂಪನ್ಮೂಲದ ಆವಶ್ಯಕತೆಗೆ ಬೇಡಿಕೆ ಹೆಚ್ಚಿದೆ. ಹೀಗಾಗಿ ಇದಕ್ಕೆ ಅಗತ್ಯವಿರುವ ಒಪ್ಪಂದಗಳೂ ಹೂಡಿಕೆದಾರರ ಸಮಾವೇಶದಲ್ಲಿ ಆಗಲಿದೆ. ಹೂಡಿಕೆದಾರರಿಗೆ ಅಗತ್ಯ ಭೂಮಿ, ವಿದ್ಯುತ್‌, ನೀರು ಸಹಿತ ಎಲ್ಲ ರೀತಿಯ ಸೌಲಭ್ಯ ನೀಡಲಾಗುತ್ತದೆ. ಹೂಡಿಕೆದಾರ ಸ್ನೇಹಿಯಾಗಿರುವ ರಾಜ್ಯದಲ್ಲಿ ಬೆಂಗಳೂರಿನಿಂದ ಹೊರಗೆ ಹೂಡಿಕೆ ಮಾಡುವವರಿಗೆ ವಿಶೇಷ ಸವಲತ್ತುಗಳೂ ಸಿಗಲಿವೆ. ಎಂದು ಸಚಿವ ಎಂ.ಬಿ. ಪಾಟೀಲ್‌ ವಿವರಿಸಿದರು.

ಟಿಐಇ ಗ್ಲೋಬಲ್‌ ಇವೆಂಟ್‌ನಲ್ಲಿ ಕರ್ನಾಟಕ ಭಾಗಿ
2023ರ ನವೆಂಬರ್‌ನಲ್ಲಿ ಸಿಂಗಾಪುರದಲ್ಲಿ ನಡೆಯಲಿರುವ ಈ ವರ್ಷದ ಟಿಐಇ ಗ್ಲೋಬಲ್‌ ಇವೆಂಟ್‌ನಲ್ಲಿ ಕರ್ನಾಟಕ ಭಾಗಿಯಾಗಲಿದೆ. ಐಟಿ-ಬಿಟಿ ಇಲಾಖೆಯ ಎಲಿವೇಟ್‌ ಕಾರ್ಯಕ್ರಮದಡಿ ಪೋಷಣೆಗೊಂಡ 100 ಸ್ಟಾರ್ಟಪ್‌ಗ್ಳು ಭಾಗಿಯಾಗಲಿವೆ. ಮುಂದಿನ ವರ್ಷ ಬೆಂಗಳೂರಿನಲ್ಲಿ ವಾರ್ಷಿಕ ಸಮ್ಮೇಳನ ನಡೆಸಲು ಟಿಐಇ ಗೋಬಲ್‌ಗೆ ಮನವಿ ಮಾಡಲಾಗಿದ್ದು, ಅದಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದರು.

ವೈಮಾನಿಕ ಹಾಗೂ ರಕ್ಷಣ ವಲಯಕ್ಕೆ ನಮ್ಮ ರಾಜ್ಯವು ಶೇ. 60ರಷ್ಟು ಕೊಡುಗೆ ಕೊಡುತ್ತಿದೆ. ರಫ್ತು ಉದ್ಯಮದಲ್ಲಿ ಶೇ.40 ಕೊಡುಗೆ ಇದೆ. ಮುಂದಿನ ಡಿಸೆಂಬರ್‌ ಹಾಗೂ 2025ರ ಜನವರಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ. ಬೆಂಗಳೂರಿನಿಂದ ಹೊರಗೆ ಹೂಡಿಕೆ ಮಾಡುವವರಿಗೆ ವಿಶೇಷ ಪ್ರೋತ್ಸಾಹವಿರಲಿದೆ.
 -ಎಂ.ಬಿ.ಪಾಟೀಲ್‌, ಕೈಗಾರಿಕೆ ಸಚಿವ

ಚೀನ ಮತ್ತಿತರ ದೇಶಗಳೊಂದಿಗೆ ಮಾತ್ರವಲ್ಲದೆ, ಹೂಡಿಕೆದಾರರನ್ನು ಆಕರ್ಷಿಸುವ ವಿಚಾರದಲ್ಲಿ ದೇಶದಲ್ಲಿನ ಇತರೆ ರಾಜ್ಯಗಳೊಂದಿಗೆ ಸ್ಪರ್ಧೆ ಇದೆ. ವಿದೇಶಿ ಹೂಡಿಕೆದಾರರು ವಿಂಡೋ ಶಾಪಿಂಗ್‌ ರೀತಿ ಮಾಡುವುದರಿಂದ ನಮ್ಮಲ್ಲಿನ ಸೌಲಭ್ಯಗಳನ್ನು ಅವರಿಗೆ ಮನವರಿಕೆ ಮಾಡಿಸಲು ಈ ಪ್ರವಾಸ ಫ‌ಲಪ್ರದವಾಗಲಿದೆ.
-ಪ್ರಿಯಾಂಕ್‌ ಖರ್ಗೆ, ಐಟಿ-ಬಿಟಿ ಸಚಿವ

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.