3 ಪ್ರದೇಶಗಳ ಕೋವಿಡ್ 19 ಪತ್ತೆ ವೆನ್ಲಾಕ್ ನಲ್ಲಿ


Team Udayavani, Apr 9, 2020, 12:17 PM IST

3 ಪ್ರದೇಶಗಳ ಕೋವಿಡ್ 19 ಪತ್ತೆ ವೆನ್ಲಾಕ್ ನಲ್ಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭವಾಗಿರುವ ಕೋವಿಡ್ 19 ವೈರಾಣು ಪತ್ತೆ ಪ್ರಯೋಗಾಲಯದಲ್ಲಿ ಮೂರು ಜಿಲ್ಲೆಗಳ ಕೋವಿಡ್ 19 ಪ್ರಕರಣಗಳನ್ನು ಪರೀಕ್ಷೆಗೊಳಪಡಿಸಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಪ್ರಕರಣಗಳು ಇನ್ನು ಮುಂದೆ ವೆನ್ಲಾಕ್ ಪ್ರಯೋಗಾಲಯದಲ್ಲಿಯೇ ಪರೀಕ್ಷೆಗೊಳಪಡಲಿವೆ.

ರಾಜ್ಯದಲ್ಲಿ ಪ್ರಸ್ತುತ ನೂತನವಾಗಿ ಆರಂಭವಾಗಿರುವ ಪ್ರಯೋಗಾಲಯಗಳಿಗೆ ಸಂಬಂಧಿಸಿ ರಾಜ್ಯ ಸರಕಾರವು ಜಿಲ್ಲೆಗಳನ್ನು ಪ್ರತ್ಯೇಕಿಸಿದೆ. ಅದರಂತೆ ವೆನ್ಲಾಕ್ ನಲ್ಲಿ ಆರಂಭವಾಗಿರುವ ಪ್ರಯೋಗಾಲಯದಲ್ಲಿ ದ.ಕ.ದೊಂದಿಗೆ ಉಡುಪಿ, ಕಾರವಾರದ ಪ್ರಕರಣಗಳ ಪರೀಕ್ಷೆ ನಡೆಯಲಿದೆ.

ದ.ಕ.: ಕೋವಿಡ್ 19 ಪಾಸಿಟಿವ್‌ ಇಲ್ಲ
ವೆನ್ಲಾಕ್ ಆಸ್ಪತ್ರೆಯಿಂದ ಪರೀಕ್ಷೆಗಾಗಿ ಇತ್ತೀಚೆಗೆ ಕಳುಹಿಸಲಾಗಿದ್ದ 7 ಮಂದಿಯ ಗಂಟಲು ದ್ರವ ಮಾದರಿಯ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು ಎಲ್ಲವೂ ನೆಗೆಟಿವ್‌ ಬಂದಿವೆ. ವೆನ್ಲಾಕ್ ಆಸ್ಪತ್ರೆಯ ನೂತನ ಕೋವಿಡ್ 19 ಪತ್ತೆ ಪ್ರಯೋಗಾಲಯದಲ್ಲಿ ಬುಧವಾರ 9 ಮಾದರಿಗಳನ್ನು ಪರೀಕ್ಷಿಸಲಾಗಿದೆ.

20 ಮಂದಿಯನ್ನು ಹೊಸದಾಗಿ ತಪಾಸಣೆಗೊಳಪಡಿಸಲಾಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈವರೆಗೆ 3,635 ಮಂದಿ ಗೃಹ ನಿಗಾವಣೆಯಲ್ಲಿದ್ದಾರೆ. 11 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ನಿಗಾವಣೆ ಯಲ್ಲಿದ್ದಾರೆ. 2,311 ಮಂದಿ 28 ದಿನಗಳ ನಿಗಾ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

ಇಲ್ಲಿವರೆಗೆ ಕಳುಹಿಸಿರುವ 357 ಮಾದರಿ ಗಳ ಪೈಕಿ 348 ಮಾದರಿ ಸ್ವೀಕರಿಸಲಾಗಿದ್ದು, 336 ನೆಗೆಟಿವ್‌, 12 ಪಾಸಿಟಿವ್‌ ಪ್ರಕರಣ ಕಂಡು ಬಂದಿತ್ತು. ಈ ಪೈಕಿ ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, 8 ಮಂದಿ ಚಿಕಿತ್ಸಾ ಪಡೆಯುತ್ತಿದ್ದಾರೆ.

ಕೇರಳದ ರೋಗಿಗಳಿಗೆ ಕೆ.ಎಸ್‌. ಹೆಗ್ಡೆ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ
ಕಾಸರಗೋಡು ಸಹಿತ ಕೇರಳ ರಾಜ್ಯದಿಂದ ಮಂಗಳೂರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಕರೆತರುವ ರೋಗಿಗಳಿಗೆ ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ವೈದ್ಯಕೀಯ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆಗೆ ಅವಕಾಶ ನೀಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ತೀರ್ಮಾನಿಸಿದೆ.

ತಲಪಾಡಿ ಮೂಲಕ ಜಿಲ್ಲೆಯೊಳಗೆ ಪ್ರವೇಶಿಸುವ ರೋಗಿಗಳಿರುವ ಆ್ಯಂಬುಲೆನ್ಸ್‌ ಗಳು ಮಂಗಳೂರಿಗೆ ಪ್ರವೇಶಿಸದೆ ನೇರವಾಗಿ ದೇರಳಕಟ್ಟೆ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಕೇರಳದ ರೋಗಿ ಗಳು ಮಂಗಳೂರು ಸೇರಿದಂತೆ ಜಿಲ್ಲೆಯ ಇತರ ಯಾವುದೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುವಂತಿಲ್ಲ. ಕೇರಳದ ಆ್ಯಂಬುಲೆನ್ಸ್‌ಗಳಿಗೆ ತುರ್ತು ಚಿಕಿತ್ಸೆಗೆ ಕಾಸರಗೋಡಿನ ತಲಪಾಡಿ ಗಡಿಯಲ್ಲಿ ಅವಕಾಶ ನೀಡಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೋವಿಡ್ 19 ಸೋಂಕು ಹರಡುವುದನ್ನು ತಡಗಟ್ಟುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಈ ರೀತಿಯ ತೀರ್ಮಾನ ಕೈಗೊಂಡಿದೆ.

13 “ಫಿವರ್‌ ಕ್ಲಿನಿಕ್‌’
ಇನ್ನೊಂದೆಡೆ ಜಿಲ್ಲೆಯಲ್ಲಿ ಶಂಕಿತ ಕೋವಿಡ್ 19 ಸೇರಿದಂತೆ ಅದಕ್ಕೆ ಸಂಬಂಧಿಸಿ ದಂತೆ ಇತರ ಯಾವುದೇ ರೋಗ ಲಕ್ಷಣಗಳು ಇದ್ದರೆ ಜನರು ತುರ್ತು ತಪಾಸಣೆಗಾಗಿ ಒಟ್ಟು 13 “ಫಿವರ್‌ ಕ್ಲಿನಿಕ್‌’ಗಳನ್ನು ಪ್ರಾರಂಭಿಸಲಾಗಿದೆ.

ದ.ಕ.: 4 ದಿನಗಳಿಂದ
ಹೊಸ ಪ್ರಕರಣವಿಲ್ಲ
ದ.ಕ. ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಯಾವುದೇ ಕೋವಿಡ್ 19ಪಾಸಿಟಿವ್‌ ಪ್ರಕರಣ ದಾಖಲಾಗದೇ ಇರುವುದು ಜಿಲ್ಲೆಯ ಜನತೆಗೆ ಹಾಗೂ ರೋಗ ನಿಯಂತ್ರಣಕ್ಕೆ ಸತತ ಪ್ರಯತ್ನಿಸುತ್ತಿರುವ ಜಿಲ್ಲಾಡಳಿತಕ್ಕೆ ಸಮಾಧಾನ ತರುವ ವಿಚಾರವಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 12 ಪ್ರಕರಣ ಗಳು ಪತ್ತೆಯಾಗಿದ್ದು, ಈ ಪೈಕಿ ನಾಲ್ವರು ಈಗಾಗಲೇ ಬಿಡುಗಡೆಗೊಂಡಿದ್ದಾರೆ. ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ನೇತೃತ್ವದಲ್ಲಿ ಲಾಕ್‌ಡೌನ್‌ ಸಮಯದಲ್ಲಿ ಕೈಗೊಂಡಿರುವ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಬಂದಿರುವುದು ಗಮನಾರ್ಹ. ಲಾಕ್‌ಡೌನ್‌ಗೆ ಪೂರಕವಾಗಿ ಜಿಲ್ಲಾಡಳಿತದ ಕಠಿಣ ಕ್ರಮಗಳಿಗೆ ಜನತೆ ನೀಡುತ್ತಿರುವ ಸಂಪೂರ್ಣ ಸಹಕಾರವೇ ಇದಕ್ಕೆ ಕಾರಣ ಎನ್ನಬಹುದು.

ಅಜ್ಜಾವರ: 44 ಮಂದಿಗೆ ಹೋಂ ಕ್ವಾರಂಟೈನ್‌
ಸುಳ್ಯ: ಅಜ್ಜಾವರದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್‌ ಪ್ರಕರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸೋಂಕಿತನ ಮನೆ ಮಂದಿಯ ಸಂಪರ್ಕದಲ್ಲಿದ್ದರೆಂಬ ಕಾರಣಕ್ಕೆ ಗ್ರಾ.ಪಂ. ಅಧ್ಯಕ್ಷೆ, ಪಿಡಿಒ ಸಹಿತ ಒಟ್ಟು 44 ಮಂದಿಯನ್ನು ಹೋಂ ಕ್ವಾರಂಟೈನಲ್ಲಿ ಇರುವಂತೆ ಸೂಚಿಸಲಾಗಿದೆ.

ಸೋಂಕಿತ ವ್ಯಕ್ತಿಯ ಸಹೋದರ ಪಂಚಾಯತ್‌ನಲ್ಲಿ ನಡೆದ ಕೋವಿಡ್ 19 ರಕ್ಷಣಾ ಕಾರ್ಯಪಡೆ ಸಭೆಯಲ್ಲಿ ಭಾಗವಹಿಸಿದ್ದರು. ಆದ್ದರಿಂದ ಸೆಕೆಂಡರಿ ಕಾಂಟೆಕ್ಟ್ ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ, ಪಿಡಿಒ, ಎಂಟು ಮಂದಿ ಸದಸ್ಯರು ಸೇರಿ ಒಟ್ಟು 44 ಮಂದಿಯನ್ನು ಕ್ವಾರಂಟೈನಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.