Moon: ಚಂದ್ರನ ಮೇಲೆ 3 ಪುಟಾಣಿ ರೋವರ್ಗಳು
2024ರಲ್ಲಿ ನಾಸಾದಿಂದ ರೊಬೊಟಿಕ್ ಪರಿಶೋಧನೆ ಯೋಜನೆ
Team Udayavani, Aug 4, 2023, 7:18 AM IST
ವಾಷಿಂಗ್ಟನ್: ಚಂದ್ರಯಾನ-3 ಯೋಜನೆ ಮೂಲಕ ಭಾರತವು ಚಂದ್ರನ ಮೇಲೆ ಲ್ಯಾಂಡರ್ ಮತ್ತು ರೋವರ್ ಇಳಿಸಲು ಮುಂದಾಗಿದೆ. ಇದೇ ವೇಳೆ ಅಮೆರಿಕದ ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಶನ್(ನಾಸಾ) ತನ್ನ ರೊಬೊಟಿಕ್ ಪರಿಶೋಧನೆ ಯೋಜನೆ ಭಾಗವಾಗಿ, 2024ರಲ್ಲಿ ಚಂದ್ರನ ಮೇಲೆ ಮೂರು ಮಿನಿಯೇಚರ್ ರೋವರ್ಗಳನ್ನು ಇಳಿಸಲು ಯೋಜಿಸಿದೆ.
ರೊಬೋಟ್ಗಳು ಹೇಗೆ ಸ್ವಾಯತ್ತವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ನೇರ ಮಾನವ ಹಸ್ತಕ್ಷೇಪವಿಲ್ಲದೆ ಪರಸ್ಪರ ಸಹಕರಿಸುತ್ತವೆ ಎಂಬುದನ್ನು ನಿರೂಪಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಅಲ್ಲದೇ ಇದು ಭವಿಷ್ಯದ ಬಾಹ್ಯಾಕಾಶ ಕಾರ್ಯಾಚರಣೆಗಳ ದಕ್ಷತೆಯನ್ನು ಹೆಚ್ಚಿಸಲಿದೆ.
ಸೂಟ್ಕೇಸ್ ಗಾತ್ರದ ಮೂರು ರೋವರ್ಗಳನ್ನು ಚಂದ್ರನ ರೈನರ್ ಗಾಮಾ ಪ್ರದೇಶದಲ್ಲಿ ನಿಯೋಜಿಸಲಾಗುತ್ತದೆ. ಇದು ಚಂದ್ರನಲ್ಲಿ ಸುಮಾರು 14 ಭೂಮಿಯ ದಿನಗಳು ಕಾರ್ಯನಿರ್ವಹಿಸಲಿವೆ. ಅಲ್ಲಿ ರೋವರ್ಗಳ ಸಾಮರ್ಥ್ಯವನ್ನು ಪರೀಕ್ಷಿಸುವ ಪ್ರಯೋಗಕ್ಕೆ ಒಳಗಾಗಲಿದೆ ಎಂದು ನಾಸಾ ತಿಳಿಸಿದೆ.
“ಕಾರ್ಯವನ್ನು ಸ್ವಾಯತ್ತವಾಗಿ ಸಾಧಿಸಲು ಮೊಬೈಲ್ ರೋಬೋಟ್ಗಳ ನೆಟ್ವರ್ಕ್ ಒಟ್ಟಿಗೆ ಕೆಲಸ ಮಾಡಬಹುದು ಎಂಬುದನ್ನು ನಿರೂಪಿಸುವುದು ಈ ಯೋಜನೆಯ ಗುರಿಯಾಗಿದೆ. ಭವಿಷ್ಯದಲ್ಲಿ ಪರಿಶೋಧನೆಗಳಿಗೆ ಇದೊಂದು ಕ್ರಾಂತಿಯ ಹೆಜ್ಜೆಯಾಗಿದೆ. ಕಳುಹಿಸಬೇಕಾದ ರೋವರ್ಗಳ ಸಂಖ್ಯೆ ಮತ್ತು ಅವುಗಳ ಸಾಮೂಹಿಕ ಪಾತ್ರಗಳ ಬಗೆಗಿನ ಪ್ರಶ್ನೆಗಳಿಗೆ ಇದು ಉತ್ತರವಾಗಲಿದೆ’ ಎಂದು ನಾಸಾ ಜೆಟ್ ಪ್ರೊಪಲ್ಶನ್ ಪ್ರಯೋಗಾಲಯದ ಯೋಜನಾ ವ್ಯವಸ್ಥಾಪಕಿ ಶುಭಾ ಕೋಮಂದೂರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.