Karnataka: ಶಾಸಕರ ಕಿಟ್‌ಗೆ 38.50 ಲ.ರೂ.


Team Udayavani, Nov 12, 2023, 12:09 AM IST

VIDHANA SOUDHA 1

ಬೆಂಗಳೂರು: ಶಾಸಕರಿಗೆ ಗಂಡಭೇರುಂಡ ಲಾಂಛನವುಳ್ಳ ಮೆಟಲ್‌ ಬ್ಯಾಡ್ಜ್ ಹಾಗೂ ಡೈರಿ, ಪೆನ್‌, ಥರ್ಮಲ್‌ ಸ್ಟೀಲ್‌ ವಾಟರ್‌ ಬಾಟಲ್‌ ಮುಂತಾದ ವಸ್ತುಗಳನ್ನೊಳಗೊಂಡ ಕಿಟ್‌ ವಿತರಣೆಗೆ ಒಟ್ಟು 38.50 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.

ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ಇವುಗಳನ್ನು ಪ್ರತಿ ಬಾರಿ ಕೊಡುವಂತೆಯೇ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ 224 ಶಾಸಕರಿಗೂ ಗಂಡಭೇರುಂಡ ಲಾಂಛನವುಳ್ಳ ಮೆಟಲ್‌ ಬ್ಯಾಡ್ಜ್ ಗಳನ್ನು ಕೊಡಲು ಈ ಮೊತ್ತವನ್ನು ಮೀಸಲಿಡಲಾಗಿದೆ.

ಪ್ರತಿ ಬ್ಯಾಡ್ಜ್ಗೆ 2,400 ರೂ. ಹಾಗೂ ಜಿಎಸ್‌ಟಿ ಸೇರಿ 2,832 ರೂ. ಆಗಲಿದ್ದು, ಒಬ್ಬರಿಗೆ ಮೂರು ಬ್ಯಾಡ್ಜ್ ಗಳನ್ನು ಕೊಡಲಾಗುವುದು. ಇದಕ್ಕಾಗಿ 19,03,104 ರೂ. ವೆಚ್ಚದಲ್ಲಿ ಐ ಡ್ರೀಮ್ಸ್‌ ಟ್ರೇಡ್‌ ಆ್ಯಂಡ್‌ ಇವೆಂಟ್‌ ಎಂಬ ಸಂಸ್ಥೆ ಮೂಲಕ ಬ್ಯಾಡ್ಜ್ಗಳನ್ನು ಖರೀದಿಸಲಾಗಿದೆ.

ಸಣ್ಣ ನೀರಾವರಿ ಸಚಿವರ ಕೊಠಡಿ ದುರಸ್ತಿ
ವಿಕಾಸಸೌಧದ 4ನೇ ಮಹಡಿಯಲ್ಲಿ ರುವ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್‌.ಎಸ್‌.ಬೋಸ್‌ರಾಜು ಅವರ ಕೊಠಡಿಗೆ ಪೀಠೊಪಕರಣ ಸರಬರಾಜು ಸಹಿತ ಸಣ್ಣಪುಟ್ಟ ಕಾರ್ಯಗಳಿಗೆ 41 ಲಕ್ಷ ರೂ. ಲೋಕೋಪಯೋಗಿ ಇಲಾಖೆಗೆ ಪಾರದರ್ಶಕ ಕಾಯ್ದೆಯಿಂದ ವಿನಾಯಿತಿ ಕೊಡಲಾಗಿದೆ.

ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ 8.65 ಕೋ. ರೂ. ಖರ್ಚು
ಕರ್ನಾಟಕ-ಸಂಭ್ರಮ 50 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕರ್ನಾಟಕ ಅಭಿಯಾನದ ಅಂಗವಾಗಿ ಹಂಪಿಯಲ್ಲಿ ನಡೆದ ಕನ್ನಡ ಜ್ಯೋತಿ ರಥಯಾತ್ರೆ, ಅದರ ನಿರ್ಮಾಣ, ಬಾಡಿಗೆ ಅಲಂಕಾರ ನಿರ್ವಹಣೆ ಸೇವೆಯನ್ನು ಕೆಎಸ್‌ಎಂಸಿ ಮತ್ತು ಎ ಸಂಸ್ಥೆಯಿಂದ ಪಡೆಯಲು 2.38 ಕೋಟಿ ರೂ.ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪಾರದರ್ಶಕ ಕಾಯ್ದೆಯಿಂದ ವಿನಾಯಿತಿ ನೀಡಿದ್ದು, ಅಂತೆಯೇ ಹಂಪಿಯಲ್ಲಿ ರಥಯಾತ್ರೆಗೆ ಚಾಲನಾ ಕಾರ್ಯಕ್ರಮಕ್ಕೆ ಅಗತ್ಯ ಸರಕು, ಸೇವೆ ಒದಗಿಸಲು 2.45 ಕೋಟಿ ರೂ. ಮತ್ತು ಗದಗದಲ್ಲಿ ಕರ್ನಾಟಕ ಸಂಭ್ರಮ-50ರ ಪ್ರಥಮ ಕಾರ್ಯಕ್ರಮ ಆಯೋಜಿಸಲು ಅಗತ್ಯ ಸರಕು ಸೇವೆಗೆ 3.82 ಕೋಟಿ ರೂ. ಒದಗಿಸಲಾಗಿದೆ. ಇದಲ್ಲದೆ, ರಾಜ್ಯವ್ಯಾಪಿ ಜ್ಯೋತಿಯಾತ್ರೆ ನಡೆಸಿ, ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ಖರ್ಚು-ವೆಚ್ಚವನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಲಾಗಿದೆ.

ಗಿಫ್ಟ್ ಬಾಕ್ಸ್‌ಗೆ 19.47 ಲಕ್ಷ ರೂ.
ಅದೇ ರೀತಿ ನೂತನ ಶಾಸಕರೂ ಸಹಿತ ಗಣ್ಯರು, ಅಧಿಕಾರಿಗಳು, ಮಾಧ್ಯಮದವರಿಗೆ ಡೈರಿ, ಪೆನ್‌, ಥರ್ಮಲ್‌ ಸ್ಟೀಲ್‌ ವಾಟರ್‌ ಬಾಟಲ್‌, ವಿಸಿಟಿಂಗ್‌ ಕಾರ್ಡ್‌ ಹೋಲ್ಡರ್‌, ಕೀ ಚೈನ್‌ ಇತ್ಯಾದಿಗಳನ್ನು ಒಳಗೊಂಡ ಗಿಫ್ಟ್ ಬಾಕ್ಸ್‌ಗಳನ್ನು ನೀಡಲು ನಿರ್ಧರಿಸಿದ್ದು, ಉಳ್ಳಾಲದ ಬಿ.ಕೆ. ಸಪ್ಲಯರ್ ಸಂಸ್ಥೆ ಮೂಲಕ ಪ್ರತಿ ಗಿಫ್ಟ್ ಬಾಕ್ಸ್‌ಗೆ ಜಿಎಸ್‌ಟಿ 1,947 ರೂ. ಸಹಿತ 3,597 ರೂ. ಕೊಟ್ಟು ಖರೀದಿಸಲಾಗಿದೆ. ಒಟ್ಟು 1 ಸಾವಿರ ಗಿಫ್ಟ್ ಬಾಕ್ಸ್‌ಗಳಿಗೆ 19.47 ಲಕ್ಷ ರೂ. ನೀಡಲು ವಿಧಾನಸಭೆ ಸಚಿವಾಲಯಕ್ಕೆ ಪಾರದರ್ಶಕ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.