![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2023, 10:05 PM IST
ಕಠ್ಮಂಡು: ನೇಪಾಳದ ದೋಲಾಖಾ ಜಿಲ್ಲೆಯ ಸೂರಿಯಲ್ಲಿ ಶನಿವಾರ ಬೆಳಗ್ಗೆ ಮಧ್ಯಮ ತೀವ್ರತೆಯ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಕಠ್ಮಂಡುವಿನಿಂದ 180 ಕಿಮೀ ಪೂರ್ವಕ್ಕೆ ಡೋಲಾಖಾದಲ್ಲಿ ಬೆಳಗ್ಗೆ 11.27 ಕ್ಕೆ 5.2 ತೀವ್ರತೆಯ ಭೂಕಂಪ ದಾಖಲಾಗಿದೆ.
ನೆರೆಯ ಓಖಲ್ದುಂಗಾ, ರಾಮೆಚಾಪ್, ಸಿಂಧುಪಾಲ್ ಚೌಕ್ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ ಹಾಗೂ ಕಠ್ಮಂಡು ಕಣಿವೆಯಲ್ಲಿಯೂ ಕಂಪನದ ಅನುಭವವಾಗಿದೆ. ಆದಾಗ್ಯೂ, ಭೂಕಂಪದಿಂದ ಯಾವುದೇ ಹಾನಿ ಅಥವಾ ಮಾನವ ಸಾವುನೋವುಗಳ ಬಗ್ಗೆ ತತ್ ಕ್ಷಣದ ವರದಿಗಳಿಲ್ಲ.
ಶನಿವಾರ ಮುಂಜಾನೆ 3.19ಕ್ಕೆ 4.2 ತೀವ್ರತೆಯ ಭೂಕಂಪನ ದಾಖಲಾಗಿದ್ದು, ಕಠ್ಮಂಡುವಿನಿಂದ ಪಶ್ಚಿಮಕ್ಕೆ 130 ಕಿಮೀ ದೂರದಲ್ಲಿರುವ ಗೂರ್ಖಾ ಜಿಲ್ಲೆಯಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿತ್ತು.
ಏಪ್ರಿಲ್ 2015 ರಲ್ಲಿ, ನೇಪಾಳದಲ್ಲಿ 7.8 ತೀವ್ರತೆಯ ವಿನಾಶಕಾರಿ ಭೂಕಂಪವು ಸುಮಾರು 9,000 ಜನರನ್ನು ಬಲಿ ಪಡೆದಿತ್ತು, 22,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 800,000 ಮನೆಗಳು ಮತ್ತು ಶಾಲಾ ಕಟ್ಟಡಗಳನ್ನು ಹಾನಿಗೊಂಡಿದ್ದವು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.