ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಏರಿಕೆ; ಜ. 1ರಿಂದ ಅನ್ವಯವಾಗುವಂತೆ ಜಾರಿ


Team Udayavani, Dec 29, 2023, 11:43 PM IST

teacher

ಬೆಂಗಳೂರು: ಸೇವೆ ಖಾಯಂ ಗೊಳಿಸುವಂತೆ ರಾಜ್ಯವ್ಯಾಪಿ ಮುಷ್ಕರ ನಡೆಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜತೆಗೆ ರಾಜ್ಯ ಸರಕಾರ ಸಂಧಾನಕ್ಕೆ ಮುಂದಾಗಿದೆ. ಜ. 1ರಿಂದ ಅನ್ವಯವಾಗುವಂತೆ ಹಾಲಿ ಇರುವ ಗೌರವಧನವನ್ನು 5 ಸಾವಿರ ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.

ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರ ಜತೆಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ 26 ಸಾವಿರ ದಿಂದ 31 ಸಾವಿರ ರೂ.ವರೆಗೆ ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಪ್ರಯೋ ಜನ ಸಮಾನವಾಗಿ ದೊರಕಲಿದೆ. ರಾಜ್ಯದ ಬೊಕ್ಕಸಕ್ಕೆ ಇದರಿಂದ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದರು.

ನಿವೃತ್ತರಿಗೆ ಭದ್ರತ ಇಡುಗಂಟು
ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿ, 60 ವರ್ಷಕ್ಕೆ ನಿವೃತ್ತರಾಗುವವರಿಗೆ ಭದ್ರತ ಇಡಗಂಟು ನೀಡಲು ನಿರ್ಧರಿಸಲಾಗಿದೆ. ವಾರ್ಷಿಕ 50 ಸಾವಿರ ರೂ.ಗಳಂತೆ ಲೆಕ್ಕಹಾಕಿ 5 ಲಕ್ಷ ರೂ. ಧನಸಹಾಯ ನೀಡಲಾಗುವುದು. ಇದಕ್ಕಾಗಿ 72 ಕೋಟಿ ರೂ. ಕಾಯ್ದಿರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪ್ರ.ದರ್ಜೆ ಕಾಲೇಜುಗಳ ಪ್ರಾಂಶುಪಾಲರು, ಖಾಯಂ ಸಿಬಂದಿ ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಗೌರವಕ್ಕೆ ಚ್ಯುತಿ ಬರದಂತೆ ವರ್ತಿಸಬೇಕು. ಕೌನ್ಸೆಲಿಂಗ್‌ ಮೂಲಕ ಆಯ್ಕೆಯಾದವರಿಗೆ ಕೆಲಸದ ಅವಧಿ ಕಡಿಮೆಯ ಕಾರಣ ವಜಾ ಮಾಡುವಂತಿಲ್ಲ. 10 ತಿಂಗಳು ಗೌರವಧನ ಕಡ್ಡಾಯ. ಪ್ರತೀ ತಿಂಗಳು ಒಂದು ವೇತನ ಸಹಿತ ರಜೆ ನೀಡಲು ಸಮ್ಮತಿಸಲಾಗಿದೆ. ಒಮ್ಮೆ ದಾಖಲೆ ಸಲ್ಲಿಸಿದವರು ಪ್ರತೀ ವರ್ಷ ಸಲ್ಲಿಸುವ ಅಗತ್ಯವಿಲ್ಲ. ಅದಕ್ಕೆ ಹೊಸ ತಂತ್ರಜ್ಞಾನ ಬಳಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಏನಿತ್ತು? ಏನಾಗಲಿದೆ?
ಪ್ರಸ್ತುತ ಅನುಭವ ಆಧರಿಸಿ ಅತಿಥಿ ಉಪನ್ಯಾಸಕರಿಗೆ 26ರಿಂದ 31 ಸಾವಿರ ರೂ.ವರೆಗೆ ವೇತನ.
ಈಗ 5 ಸಾವಿರ ರೂ. ಏರಿಕೆ. 10,600 ಅತಿಥಿ ಉಪನ್ಯಾಸಕರಿಗೆ ಲಾಭ. ಸರಕಾರಕ್ಕೆ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ.
60 ವರ್ಷಕ್ಕೆ ನಿವೃತ್ತರಾಗುವವರಿಗೆ ಭದ್ರತ ಇಡುಗಂಟು. ತಲಾ 5 ಲಕ್ಷ ರೂ. ನೆರವು, ಸರಕಾರಕ್ಕೆ ಹೆಚ್ಚುವರಿ 72 ಕೋಟಿ ರೂ. ನೀಡುವ ಒತ್ತಡ.
ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಉಚಿತ ವಿಮೆ.

 

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.