Karnataka: 86 ಸಾ. ಕೋಟಿ ಸಾಲಕ್ಕೆ ಚಿಂತನೆ
Team Udayavani, Dec 13, 2023, 11:30 PM IST
ಬೆಂಗಳೂರು: ರಾಜ್ಯ ಸರಕಾರದ ಆದಾಯದಲ್ಲಿ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಸಾಲ ಪಡೆಯುವ ಚಿಂತನೆಯನ್ನು ರಾಜ್ಯ ಸರಕಾರ ನಡೆಸಿದೆ.
ರಾಜ್ಯ ಸರಕಾರ ಈಗಾಗಲೇ 5.53 ಲಕ್ಷ ಕೋಟಿ ರೂ. ಸಾಲ ಹೊಂದಿದ್ದು ಸುಮಾರು 34,000 ಕೋಟಿ ರೂ.ಗಳನ್ನು ಈ ಸಾಲಕ್ಕೆ ಬಡ್ಡಿ ರೂಪದಲ್ಲಿ ಕಟ್ಟುತ್ತಿದೆ. 2023ರ ಮಧ್ಯಮ ಅವಧಿಯ ಹಣಕಾಸು ಯೋಜನೆಯ ಪ್ರಕಾರ 2026-27ರ ಸಾಲಿನ ಹೊತ್ತಿಗೆ ರಾಜ್ಯದ ಸಾಲದ ಪ್ರಮಾಣ 7.24 ಲಕ್ಷ ಕೋಟಿ ರೂ ಗೆ ಏರಲಿದೆ.
ಸಿದ್ದರಾಮಯ್ಯ ಅವರು ಮಂಡಿಸಿದ ತಮ್ಮ ಎರಡನೇ ಅವಧಿಯ ಮೊದಲ ಬಜೆಟ್ನಲ್ಲಿ 85,818 ಕೋಟಿ ರೂ. ಸಾಲ ಪಡೆಯುವುದಾಗಿ ಹೇಳಿದ್ದರು. ಈ ಹಣಕಾಸು ವರ್ಷದಲ್ಲಿ ಸಪ್ಟೆಂಬರ್ ತಿಂಗಳ ತನಕ ರಾಜ್ಯ ಸರಕಾರ 1,191 ಕೋಟಿ ರೂ. ಗಳಷ್ಟು ಮಾತ್ರ ಸಾಲ ಪಡೆದಿದೆ. ಆದರೆ ಅಕ್ಟೋಬರ್ ಹೊತ್ತಿಗೆ ರಾಜ್ಯ ಸರಕಾರವು 7,399.90 ಕೋಟಿ ರೂ ಸಾಲ ಪಡೆದಿದೆ. ಸಾಮಾನ್ಯವಾಗಿ ಹಣಕಾಸು ವರ್ಷದ ಆರಂಭದಲ್ಲಿ ಅದಾಯದ ಹರಿವು ಉತ್ತಮವಾಗಿರುವುದರಿಂದ ಹೆಚ್ಚು ಸಾಲ ಪಡೆಯುವ ಅಗತ್ಯ ಬೀಳುವುದಿಲ್ಲ. ಆದರೆ ದ್ವಿತೀಯಾರ್ಧದಲ್ಲಿ ಹಣದ ಹರಿವು ಕಡಿಮೆ ಆಗುವ ಜತೆಗೆ ಅಭಿವೃದ್ಧಿ ಚಟುವಟಿಕೆಗಳು ಹೆಚ್ಚುವುದರಿಂದ ಸಾಲ ಪಡೆಯುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಎಂದು ರಾಜ್ಯ ಸರಕಾರದ ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳು ತಿಳಿಸುತ್ತಾರೆ.
ರಾಜ್ಯದ ಹಣಕಾಸು ನಿರ್ವಹಣ ಪರಿಶೀಲನ ಸಮಿತಿಯು ಸಾಲ ಮಾಡುವುದಕ್ಕೆ ಕಡಿವಾಣ ಹಾಕಿ, ತೆರಿಗೆ ಸಂಗ್ರಹ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ವಿವೇಚನಾಯುಕ್ತವಾಗಿ ಖರ್ಚು ಮಾಡುವುದು ಸೂಕ್ತ ಎಂದು ಈಗಾಗಲೇ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.