![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 2, 2023, 12:33 AM IST
ಹೊಸದಿಲ್ಲಿ: 8ನೇ ವೇತನ ಆಯೋಗವನ್ನು ರಚಿಸುವ ಯಾವುದೇ ಯೋಜನೆ ನಮ್ಮ ಮುಂದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. 54 ಲಕ್ಷ ಕೇಂದ್ರ ಸರಕಾರಿ ನೌಕರರು, ಪಿಂಚಣಿದಾರರ ವೇತನ ಪರಿಷ್ಕರಿಸಲು ಕೇಂದ್ರ ಸರಕಾರ ಈ ಕ್ರಮವನ್ನು ತೆಗೆದುಕೊಳ್ಳಬಹುದೇ ಎಂಬ ಊಹಾಪೋಹ ಹಬ್ಬಿರುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಕಾರ್ಯದರ್ಶಿ ಟಿ.ವಿ.ಸೋಮನಾಥನ್ ಈ ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ.
ಸಾಮಾನ್ಯವಾಗಿ ಲೋಕಸಭಾ ಚುನಾವಣೆ ಎದುರಿರುವಾಗ ಹಿಂದಿನ ಸರಕಾರಗಳು ವೇತನ ಆಯೋಗ ರಚಿಸುವ ತಂತ್ರ ಮಾಡುತ್ತಿದ್ದವು. 2013, ಸೆಪ್ಟಂಬರ್ನಲ್ಲಿ ಯುಪಿಎ ಸರಕಾರ ಇನ್ನೇನು ಚುನಾವಣೆಗೆ ಕೆಲವೇ ತಿಂಗಳಿರುವಾಗ 7ನೇ ವೇತನ ಆಯೋಗ ರಚಿಸಿತ್ತು. ಆದರೆ ಈಗ ಇಂತಹ ಕ್ರಮಕ್ಕೆ ಮುಂದಾ ಗುವ ಉದ್ದೇಶ ಪ್ರಸ್ತುತ ಬಿಜೆಪಿ ಸರಕಾರಕ್ಕೆ ಇಲ್ಲವೆನ್ನಲಾಗಿದೆ. ಬದಲಿಗೆ ಹೊಸ ಪಿಂಚಣಿ ಪದ್ಧತಿ ಪರಿಶೀಲಿಸಲು ಸರಕಾರ ಮುಂದಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.