Politics: ಎರಡೂವರೆ ವರ್ಷಗಳ ಬಳಿಕ ಸಂಪುಟದಲ್ಲಿ ಬದಲಾವಣೆ
Team Udayavani, Oct 20, 2023, 11:53 PM IST
ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದೆ ಎಂದು ಸರಕಾರದ ಮುಖ್ಯ ಸಚೇತಕ ಪಿ.ಎಂ.ಅಶೋಕ್ ಪಟ್ಟಣ ಹೇಳುವ ಮೂಲಕ ತೆರೆಮರೆಗೆ ಸರಿದಿದ್ದ ಅಧಿಕಾರ ಹಂಚಿಕೆ ಸೂತ್ರ ಮತ್ತೆ ಮುನ್ನೆಲೆಗೆ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಒಪ್ಪಂದ ಏರ್ಪಟ್ಟಿದೆ ಎಂಬ ಸುದ್ದಿಗಳು ಸರಕಾರ ರಚನೆಯ ಆರಂಭದ ದಿನಗಳಲ್ಲಿ ದಟ್ಟವಾಗಿ ಹರಿದಾಡಿದ್ದವು. ಆದರೆ ಅದು ಕೆಲವು ದಿನಗಳ ಬಳಿಕ ಆಡಳಿತ ಪಕ್ಷ ಕಾಂಗ್ರೆಸ್ನಲ್ಲಿ ಸಾಕಷ್ಟು ವಿವಾದ ಹಾಗೂ ಗೊಂದಲಗಳನ್ನು ಸೃಷ್ಟಿಸಿದ ಬಳಿಕ ಹೈಕಮಾಂಡ್ ಮಧ್ಯಪ್ರವೇಶಿಸಿ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚಕಾರವೆತ್ತದಂತೆ ಬ್ರೇಕ್ ಹಾಕಿತ್ತು. ಕೆಲವು ತಿಂಗಳು ಈ ವಿಷಯ ತಣ್ಣಗಾಗಿತ್ತು.
ಈಗ ರಾಮದುರ್ಗದ ಶಾಸಕ ಹಾಗೂ ಸರಕಾರಿ ಮುಖ್ಯ ಸಚೇತಕ ಪಿ.ಎಂ.ಅಶೋಕ್ ಅವರು ಎರಡೂವರೆ ವರ್ಷಗಳ ಬಳಿಕ ಸಂಪುಟ ಬದಲಾಗಲಿದೆ ಎಂದು ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುಜೇìವಾಲ ಹೇಳುವ ಮೂಲಕ ಮತ್ತೆ ಅಧಿಕಾರ ಹಂಚಿಕೆ ಸೂತ್ರ ಚರ್ಚೆಗೆ ಬಂದಿದೆ.
“ಉದಯವಾಣಿ’ ಜತೆ ಮಾತನಾಡಿದ ಅಶೋಕ್ ಪಟ್ಟಣ ಅವರು, ನಾನು ಸಹಿತ ಹಲವು ಹಿರಿಯರು ಪಕ್ಷಕ್ಕೆ ನಿಷ್ಠರಾಗಿದ್ದೇವೆ. ಸಹಜವಾಗಿಯೇ ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದೇವೆ. ಕಳೆದ ಸಲವೂ ನಮಗೆ ಅವಕಾಶ ಕೈತಪ್ಪಿಹೋಗಿದೆ. ಹೀಗಾಗಿ ಎರಡೂವರೆ ವರ್ಷ ಕಾಯುವಂತೆ ಸುಜೇìವಾಲ ಹೇಳಿದ್ದಾರೆ ಎಂದರು. ಸಚಿವ ಸಂಪುಟ ಪುನಾರಚನೆಯೋ, ಕೆಲವರನ್ನು ಕೈಬಿಡುತ್ತಾರೋ ಅಥವಾ ಸಮರ್ಪಕವಾಗಿ ಕೆಲಸ ಮಾಡದವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ಕೊಡುತ್ತಾರೋ ಎಂಬುದು ಮಾತ್ರ ಗೊತ್ತಿಲ್ಲ. ಹೀಗಾಗಿ ನಾನು ಕೂಡ ಕಾಯುತ್ತಿದ್ದೇನೆ ಎಂದಷ್ಟೇ ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.