Coimbatore: ಪ್ರಧಾನಿಗೆ 265 ಪತ್ರ ಬರೆದ ಗೃಹಿಣಿ!


Team Udayavani, Nov 29, 2023, 1:02 AM IST

coimba

ಕೊಯಮತ್ತೂರು: ಸಾರ್ವಜನಿಕ ಸಮಸ್ಯೆಗಳನ್ನು ಹೇಳಿಕೊಂಡು ಅದರ ಪರಿಹಾರಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವ ನಾಗರಿಕರನ್ನು ನೋಡಿರುತ್ತೀರಿ. ಅಂಥವರು ಹೆಚ್ಚೆಂದರೆ ಎಷ್ಟು ಪತ್ರ ಬರೆಯಬಹುದು? 10, 20, 30…!

ತಮಿಳುನಾಡಿನ ಕೊಯಮತ್ತೂರಿನ 36 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ 265 ಪತ್ರಗಳನ್ನು ಬರೆಯುವ ಮೂಲಕ ವಿವಿಧ ಸಾರ್ವಜನಿಕ ವಿಚಾರಗಳನ್ನು ಪ್ರಧಾನಿ ಕಾರ್ಯಾಲಯದ ಗಮನಕ್ಕೆ ತಂದಿದ್ದಾರೆ.

2023ರ ಮಾರ್ಚ್‌ 8ರಿಂದಲೂ ನಿರಂತರವಾಗಿ ಪ್ರಧಾನಿ ಕಾರ್ಯಾ ಲಯಕ್ಕೆ ಪತ್ರ ಬರೆಯುತ್ತಿರುವುದು ಕೊಯಮತ್ತೂರಿನ ಗಾಂಧಿಮಾ ನಗರದ ಕೃತಿಕಾ. ಇವರು ಬಿಎಸ್‌ಸಿ ಕಂಪ್ಯೂಟರ್‌ ಸೈನ್ಸ್‌ ಪದವೀಧರೆ. 2012ರಲ್ಲಿ ಪಳನಿಸಾಮಿ ಎಂಬವರನ್ನು ವಿವಾಹವಾದ ಬಳಿಕ ನಗರದಲ್ಲೇ ನೆಲೆಸಿದ್ದಾರೆ.

ಯಾವ್ಯಾವ ವಿಚಾರ ಪ್ರಸ್ತಾಪ?: ಅಂತಾರಾಷ್ಟ್ರೀಯ ಮಹಿಳಾ ದಿನದಿಂದ ಅಂದರೆ ಮಾ.8ರಿಂದಲೂ ಕೃತಿಕಾ ಪಿಎಂಒಗೆ ಪತ್ರ ಬರೆಯುತ್ತಿದ್ದಾರೆ. ಅಡುಗೆ ಅನಿಲ ಸಿಲಿಂಡರ್‌ ದರ ಇಳಿಕೆ, ಆನ್‌ಲೈನ್‌ ರಮ್ಮಿಗೆ ನಿಷೇಧ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಸೇರಿದಂತೆ ಹಲವು ಸಾಮಾಜಿಕ ಕಳಕಳಿಯ ವಿಚಾರಗಳನ್ನು ಕೇಂದ್ರ ಸರಕಾರದ ಗಮನಕ್ಕೆ ತಂದಿದ್ದಾರೆ. ಪ್ರಧಾನಿ ಕಾರ್ಯಾಲಯದಲ್ಲಿ “ಕುಂದುಕೊರತೆಗಳ ಪೆಟ್ಟಿಗೆ’ ಇದೆ ಎಂಬುದು ತಿಳಿದ ಮೇಲೆ, ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ಪ್ರಧಾನಿ ಕಾರ್ಯಾಲಯಕ್ಕೇ ತಿಳಿಸೋಣ ಎಂದು ನಿರ್ಧರಿಸಿ ಪತ್ರಗಳನ್ನು ಬರೆಯಲಾರಂಭಿಸಿದೆ ಎಂದಿದ್ದಾರೆ ಕೃತಿಕಾ.

ಪಿಎಂಒ ಪ್ರತಿಕ್ರಿಯೆ: ಈವರೆಗೆ 265 ಪತ್ರಗಳನ್ನು ಬರೆದಿದ್ದು, ಪಿಎಂಒದಿಂದ ಪ್ರತಿಕ್ರಿಯೆಗಳೂ ಬಂದಿವೆ ಎಂದಿದ್ದಾರೆ ಕೃತಿಕಾ. ಅಲ್ಲದೇ ಪ್ರಧಾನಿ ಕಾರ್ಯಾಲಯದ ಕುಂದುಕೊರತೆಯ ವಿಭಾಗವು ಫೋನ್‌ ಕರೆ ಮಾಡಿ ಪತ್ರಗಳ ಸ್ವೀಕೃತಿ ಬಗ್ಗೆಯೂ ಮಾಹಿತಿ ನೀಡುತ್ತಿರುತ್ತದೆ. ಪತ್ರ ಬರೆದು, ಕಳುಹಿಸಲು ದಿನಕ್ಕೆ 40 ರೂ. ಖರ್ಚಾಗುತ್ತಿದೆ. ತಿಂಗಳಿಗೆ ಅಂದಾಜು 1,200ರೂ. ವೆಚ್ಚವಾಗುತ್ತಿದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ, ಗೃಹಿಣಿಯಾಗಿದ್ದರೂ ಸರಕಾರವನ್ನು ತಲುಪುವುದು ಕಷ್ಟವಲ್ಲ ಎಂಬುದು ನನಗೆ ಖುಷಿ ತಂದ ವಿಚಾರ ಎಂದಿದ್ದಾರೆ ಕೃತಿಕಾ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.