ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಮತೀಯ ಸಂಘಟನೆ, ರಾಜಕೀಯ ಪಕ್ಷಗಳ ಬೆಂಬಲಿಗರ "ಸೋಶಿಯಲ್‌ ಮೀಡಿಯಾ ವಾರ್‌' ; ನಿರಂತರ ನಿಗಾ ಇಡಲು ಸೂಚನೆ

Team Udayavani, Jun 24, 2024, 6:10 AM IST

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಮಂಗಳೂರು: ಚುನಾವಣೆ ಹೊತ್ತಲ್ಲಿ ಯುದೊœàನ್ಮಾದ ಸ್ಥಿತಿಯಲ್ಲಿದ್ದ ಕರಾವಳಿ ಭಾಗದ “ಸೋಶಿಯಲ್‌ ಮೀಡಿಯಾ ವಾರ್‌ ರೂಂ’ಗಳು ಫ‌ಲಿತಾಂಶ ಹೊರಬಿದ್ದ ಬಳಿಕವೂ ತಣ್ಣಗಾಗಿಲ್ಲ. ಬದಲಾಗಿ, ಕರಾವಳಿ ಭಾಗದಲ್ಲಿ ರಾಜಕೀಯ ಕೆಸರೆರಚಾಟ, ಕೋಮು ಪ್ರಚೋದನೆ, ವೈಯಕ್ತಿಕ ದ್ವೇಷ ಮೊದಲಾದವುಗಳನ್ನು ಒಳಗೊಂಡ
ಪೋಸ್ಟ್‌ಗಳ ಭರಾಟೆ ಹೆಚ್ಚಾಗಿದ್ದು, ಇದರ ನಿಯಂತ್ರಣ ಈಗ ಪೊಲೀಸರಿಗೆ ತಲೆನೋವು ತರಿಸಿದೆ.

ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಂ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು, ಕಾಮೆಂಟ್‌ಗಳು,ಆಡಿಯೋ ತುಣುಕುಗಳು ಸಮಾಜದಸ್ವಾಸ್ಥ್ಯ ಕೆಡಿಸುವ ಅಪಾಯ ಇರುವುದ ರಿಂದ ಇಂತಹ ಚಟುವಟಿಕೆಗಳ ಮೇಲೆನಿರಂತರ ನಿಗಾ ಇಡಲು ಎಲ್ಲ ಠಾಣೆ ಗಳ ಪೊಲೀಸರಿಗೆ ಉನ್ನತ ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕೆಲವು ರಾಜಕೀಯ, ಧಾರ್ಮಿಕ, ಮೂಲಭೂತವಾದಿ ಸಂಘಟನೆಗಳು ತಮ್ಮ ದ್ವೇಷಪೂರಿತ ಸಂದೇಶಗಳನ್ನು ಪಸರಲು ಸಾಮಾಜಿಕ ಜಾಲತಾಣವನ್ನು ವೇದಿಕೆಯಾಗಿ ಮಾಡಿಕೊಂಡಿವೆ. ಇಂತಹ ಪೋಸ್ಟ್‌ಗಳು ಕೆಲವು ಘಟನೆ, ವೈಷಮ್ಯಗಳಿಗೆ ಪ್ರಚೋದನೆ ನೀಡುವಂತಿವೆ. ರಾಜಕೀಯ ಪಕ್ಷಗಳ ಕೆಲವು ಮುಖಂಡರು ಕೂಡ ತಮ್ಮ “ಚೇಲಾ’ಗಳ ಮೂಲಕ ಸಂದೇಶಗಳನ್ನು ಹಾಕಿಸುವುದು, ವೈರಲ್‌ ಮಾಡಿಸುವುದು ಮೊದಲಾದವು ಗಳನ್ನು ಮಾಡುತ್ತಿದ್ದಾರೆ. ಇದು ಕೂಡ ಗಮನಕ್ಕೆ ಬಂದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕೀ ವರ್ಡ್‌ ಬಳಕೆ
ಸಮುದಾಯಗಳಿಗೆ ಸಂಬಂಧಿ ಸಿದ ಪೋಸ್ಟ್‌ಗಳ ಸಂದರ್ಭದಲ್ಲಿ ಕೀ ವರ್ಡ್‌ಗಳನ್ನು ಬಳಸುತ್ತಿದ್ದಾರೆ. ಕೆಲವು ಅನಾಮಿಕರಿಂದ ಖಾತೆಗಳು ಸೃಷ್ಟಿಯಾಗಿರುವುದು ಗೊತ್ತಾಗಿದೆ. ನಿರಂತರವಾಗಿ ಆಕ್ಷೇಪಾರ್ಹ ಪೋಸ್ಟ್‌,
ಕಮೆಂಟ್‌ಗಳನ್ನು ಹಾಕುವವರನ್ನು ಕೂಡ ಗುರುತಿಸಿ ನಿಗಾ ವಹಿಸ ಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರವಾಗಿ ಕಣ್ಗಾವಲು ಇಡಲು ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ “ಸೋಶಿ ಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌’ ಕಾರ್ಯಾಚರಿಸುತ್ತಿದ್ದು, ಇದರ ಮೂಲಕ ಈಗಾಗಲೇ ಈ ಪೈಕಿ ಕೆಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಿಸಿ ಕೆಮರಾ ಫ‌ೂಟೇಜ್‌ ವೈರಲ್‌
ಯಾವುದೇ ಘಟನೆ ನಡೆದ ಕೂಡಲೇ ಸಿಸಿ ಕೆಮರಾದಲ್ಲಿ ದಾಖಲಾಗುವ ದೃಶ್ಯಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೇ ಕ್ಷಣಗಳಲ್ಲಿ ಅಪ್‌ಲೋಡ್‌ ಆಗಿ ವೈರಲ್‌ ಆಗುತ್ತಿರುವುದು ಕೂಡ ಪೊಲೀಸರಿಗೆ ಸವಾಲಾಗುತ್ತಿದೆ. ಸಿಸಿಟಿವಿ ಫ‌ೂಟೇಜ್‌ಗಳು ಜಾಲತಾಣಗಳಿಗೆ ಹೋಗುವ ಮೊದಲು ಪೊಲೀಸ್‌ ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆಯೂ ಚಿಂತಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಪರಿಗಣನೆ
ಉಡುಪಿ ಜಿಲ್ಲೆಯಲ್ಲಿ ಈ ವರ್ಷ ಅವಹೇಳನಕಾರಿ ಪೋಸ್ಟ್‌ಗಳು ಸಹಿತ ಆಕ್ಷೇಪಾರ್ಹವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಹ ಹರಿಯಬಿಟ್ಟ ಬಗ್ಗೆ 21 ದೂರುಗಳು ಬಂದಿದ್ದು, ಈ ಪೈಕಿ 12 ಎಫ್ಐಆರ್‌ ದಾಖಲಾಗಿವೆ. ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು.
ಪೋಸ್ಟ್‌ಗಳನ್ನು ಫಾರ್ವರ್ಡ್‌ ಮಾಡುವುದರಿಂದ ಅದನ್ನು ಒಪ್ಪಿದಂತೆ ಹಾಗೂ ಬೆಂಬಲಿಸಿದಂತೆ ಆಗುತ್ತದೆ. ಸಾರ್ವಜನಿಕರನ್ನು ವಂಚಿಸುವ, ತಪ್ಪು ಸಾರ್ವಜನಿಕ ಅಭಿಪ್ರಾಯ ರೂಪಿಸುವ, ಆತಂಕ ಮೂಡಿಸುವ ಹಾಗೂ ಅಪರಾಧಗಳನ್ನು ನಡೆಸುವ ಉದ್ದೇಶದಿಂದ ಕೆಲವರು ನಕಲಿ ಸಂದೇಶಗಳನ್ನು ಕೂಡ ಪೋಸ್ಟ್‌ ಮಾಡುತ್ತಾರೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು.
-ಡಾ| ಕೆ. ಅರುಣ್‌, ಎಸ್‌ಪಿ, ಉಡುಪಿ

ಸಂದೇಶ ರವಾನಿಸುವವರ ಮೇಲೆ ನಿಗಾ
ಇತ್ತೀಚೆಗಿನ ಕೆಲವು ಸಮಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹಾಗೂ ಕೋಮು ಭಾವನೆಯನ್ನು ಪ್ರಚೋದಿಸುವ ಸಂದೇಶಗಳನ್ನು ಹರಿಯಬಿಡಲಾಗುತ್ತಿರುವುದನ್ನು ಗಮನಿಸಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಗರದಲ್ಲಿ ಕಳೆದ ಕೆಲವು ದಿನಗಳಲ್ಲಿ ಹಲವು ಎಫ್ಐಆರ್‌ ದಾಖಲಾಗಿವೆ. ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್‌ ಮಾಡುವುದು, ಫಾರ್ವರ್ಡ್‌ ಮಾಡುವುದು ತಪ್ಪು. ಮುಖ್ಯವಾಗಿ ಕೋಮುಭಾವನೆ ಕೆರಳಿಸುವ ಸಂದೇಶಗಳನ್ನು ರವಾನಿಸುವವರ ಮೇಲೆ ವಿಶೇಷ ನಿಗಾ ಇಡಲಾಗುತ್ತಿದೆ.
-ಅನುಪಮ್‌ ಅಗರ್‌ವಾಲ್‌, ಪೊಲೀಸ್‌ ಆಯುಕ್ತರು ಮಂಗಳೂರು

50ಕ್ಕೂ ಅಧಿಕ ಪ್ರಕರಣ
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ, ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸಿದರೆ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಕಳೆದ 1 ವರ್ಷಗಳಲ್ಲಿ 50ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ ಕೊಳ್ಳಲಾಗಿದೆ. ಕೋಮು ಸಾಮರಸ್ಯ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವಂಥ ಯಾವುದೇ ಪೋಸ್ಟ್‌, ವಾಯ್ಸ ಮೆಸೇಜ್‌ ಮೊದಲಾದವುಗಳನ್ನು ರವಾನಿಸುವವರ ಮೇಲೆ ನಿರಂತರ ನಿಗಾ ಇಡಲಾಗಿದೆ.
-ರಿಷ್ಯಂತ್‌ ಸಿ.ಬಿ. ಎಸ್‌ಪಿ, ದ.ಕ.

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.