ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ


Team Udayavani, Feb 13, 2023, 6:00 AM IST

ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳಿಗೆ ವಿಶೇಷ ಸ್ಥಾನಮಾನವಿದೆ. ರಾಜ್ಯಪಾಲರು ಆಯಾಯ ರಾಜ್ಯಗಳ ಪ್ರಥಮ ಪ್ರಜೆಯಾಗಿದ್ದು ಇವರನ್ನು ಕೇಂದ್ರ ಸರಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ನಡುವಣ ಕೊಂಡಿಯಾಗಿ ರಾಜ್ಯಪಾಲರು ಕರ್ತವ್ಯ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದಾಗ ರಾಜ್ಯಪಾಲರ ಪಾತ್ರ ಅತೀ ಮಹತ್ವದ್ದಾಗಿರುತ್ತದೆ.

ರವಿವಾರದಂದು ಕೇಂದ್ರ ಸರಕಾರದ ಶಿಫಾರಸಿನಂತೆ ಹೊಸದಾಗಿ ಆರು ಮಂದಿಯನ್ನು ರಾಷ್ಟ್ರಪತಿ ಅವರು ವಿವಿಧ ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರೆ ಇನ್ನು ಏಳು ಮಂದಿ ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ರಾಜ್ಯಪಾಲರಾಗಿ ನೇಮಕಗೊಂಡವರು ಮತ್ತು ವರ್ಗಾವಣೆಗೊಂಡ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ ಅವರ ಹೆಸರುಗಳನ್ನು ಗಮನಿಸಿದಾಗ ಕೇಂದ್ರ ಸರಕಾರ ಚಾಣಾಕ್ಷ ನಡೆ ಇರಿಸಿರುವುದು ಸ್ಪಷ್ಟವಾಗುತ್ತದೆ. ಹೊಸದಾಗಿ ರಾಜ್ಯಪಾಲರಾಗಿ ನೇಮಕಗೊಂಡ ಕೆಲವು ಹೆಸರುಗಳು ಅಚ್ಚರಿ ತರಿಸಿದರೂ ಇದರ ಹಿಂದೆ ಪಕ್ಕಾ ರಾಜಕೀಯ ಲೆಕ್ಕಾಚಾರ, ಚುನಾವಣ ತಂತ್ರಗಾರಿಕೆ, ದೂರದೃಷ್ಟಿ ಇರುವುದು ಗೋಚರವಾಗುತ್ತದೆ.
ರಾಜ್ಯಪಾಲರ ನೇಮಕದ ಸಂದರ್ಭದಲ್ಲಿ ಬಿಜೆಪಿ ಅಳೆದೂ ತೂಗಿ ತನ್ನ ಮನೆಯನ್ನು ಸುವ್ಯವಸ್ಥಿತವಾಗಿ ಇರಿಸಿಕೊಳ್ಳಲು ಆದ್ಯತೆ ನೀಡಿರುವುದು ಸ್ಪಷ್ಟವಾಗುತ್ತದೆ. ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಸದ್ಯ ವಿಪಕ್ಷ ನಾಯಕರಾಗಿರುವ ಗುಲಾಬ್‌ಚಂದ್‌ ಕಟಾರಿಯಾಗೆ ರಾಜ್ಯಪಾಲ ಹುದ್ದೆ ನೀಡಲಾಗಿದೆ. ಇದು ರಾಜ್ಯದಲ್ಲಿ ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕೈಗೊಂಡ ಕ್ರಮವೆನ್ನಲಾಗಿದೆ. ಇನ್ನು ಈಗಾಗಲೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಚುನಾವಣ ಪ್ರಕ್ರಿಯೆಗಳು ನಡೆಯುತ್ತಿರುವ ರಾಜ್ಯಗಳಾದ ಮೇಘಾಲಯ, ನಾಗಾಲ್ಯಾಂಡ್‌ಗೆ ಅನುಭವಿಗಳನ್ನು ವರ್ಗಾಯಿಸಿ ರಾಜಕೀಯ ಲೆಕ್ಕಾಚಾರದ ಜತೆಯಲ್ಲಿ ಸಂಭಾವ್ಯ ಬೆಳವಣಿಗೆ ಎದುರಿಸಲು ಬಿಜೆಪಿ ಸಜ್ಜಾಗಿರುವಂತೆ ಭಾಸವಾಗುತ್ತಿದೆ.

ತಮಿಳುನಾಡಿನ ಬಿಜೆಪಿ ಹಿರಿಯ ನಾಯಕ ಸಿ.ಪಿ.ರಾಧಾಕೃಷ್ಣನ್‌ಗೂ ಗೌರವಾನ್ವಿತ ಹುದ್ದೆ ಕೊಡಲಾಗಿದೆ. ಈ ಮೂಲಕ ತಮಿಳುನಾಡು ಬಿಜೆಪಿಯ ಮೇಲೆ ಪೂರ್ಣ ಹಿಡಿತ ಸಾಧಿಸಲು ಕೆ.ಅಣ್ಣಾಮಲೈ ಅವರಿಗೆ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಬಿಜೆಪಿ ವಿಪ್‌ ಆರ್‌ಎಸ್‌ಎಸ್‌ ಹಿನ್ನೆಲೆಯ ಶಿವಪ್ರತಾಪ್‌ ಶುಕ್ಲಾರನ್ನು ಇತ್ತೀಚೆಗಷ್ಟೇ ಕಾಂಗ್ರೆಸ್‌ ಮರಳಿ ಅಧಿಕಾರಕ್ಕೇರಿರುವ ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್‌ಗಢದ ರಾಜ್ಯಪಾಲರಾಗಿದ್ದ ಅನಸೂಯಾರನ್ನು ಮಣಿಪುರಕ್ಕೆ ವರ್ಗಾಯಿಸುವ ಮೂಲಕ ಮೀಸಲಾತಿ ಮಸೂದೆ ವಿಚಾರವಾಗಿ ಛತ್ತೀಸ್‌ಗಢ ಬಿಜೆಪಿ ನಾಯಕರಲ್ಲಿ ಉಂಟಾಗಿರುವ ಅಸಮಾಧಾನವನ್ನು ತಣಿಸುವ ಪ್ರಯತ್ನವನ್ನು ಕೇಂದ್ರ ಮಾಡಿದೆ.

ಅಚ್ಚರಿಯ ಆಯ್ಕೆ ಎಂಬಂತೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕರ್ನಾಟಕ ಮೂಲದ ಎಸ್‌. ಅಬ್ದುಲ್‌ ನಝೀರ್‌ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಅಯೋಧ್ಯೆ ವಿವಾದ ಮತ್ತು ತ್ರಿವಳಿ ತಲಾಖ್‌ ರದ್ದು ವಿರುದ್ಧದ ಅರ್ಜಿಯ ಪ್ರಕರಣದ ವಿಚಾರಣ ಪೀಠದ ಭಾಗವಾಗಿದ್ದ ಅವರಿಗೆ ನಿವೃತ್ತರಾದ ಐದು ವಾರಗಳಲ್ಲೇ ಈ ಹುದ್ದೆ ಲಭಿಸಿದೆ. ಕರ್ನಾಟಕ ವಿಧಾನಸಭೆಗೆ ಇದೇ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಈ ನೇಮಕಾತಿ ಒಂದಿಷ್ಟು ಕುತೂಹಲ ಮೂಡಿಸಿದೆ. ಸದಾ ಒಂದಿಲ್ಲೊಂದು ಕಾರಣದಿಂದಾಗಿ ರಾಜ್ಯ ಸರಕಾರ – ರಾಜ್ಯಪಾಲರ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿರುವ ತಮಿಳುನಾಡು, ತೆಲಂಗಾಣ ಮತ್ತು ಕೇರಳ ರಾಜ್ಯಪಾಲರು ವಿಪಕ್ಷಗಳ ವಾಗ್ಧಾಳಿಗೆ ತುತ್ತಾಗುತ್ತಿದ್ದರೂ ತಲೆಕೆಡಿಸಿಕೊಳ್ಳದ ಕೇಂದ್ರ ಯಥಾಸ್ಥಿತಿ ಕಾಯ್ದುಕೊಳ್ಳುವ ಮೂಲಕ ಆಯಾಯ ರಾಜ್ಯಗಳಲ್ಲಿನ ಆಡಳಿತ ಪಕ್ಷಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.