ಪಡಿತರ ಚೀಟಿ ಕುರಿತ ಸಮೀಕ್ಷೆ ಉತ್ತಮ ನಿರ್ಧಾರ


Team Udayavani, Jul 28, 2023, 12:26 AM IST

ration

ಯಾವುದೇ ಸರಕಾರಗಳು ಅಧಿಕಾರಕ್ಕೆ ಬಂದಾಗಲೂ ಅದರ ನೀತಿ ನಿರೂ ಪಣೆಯಲ್ಲೂ ಬದಲಾವಣೆಗಳಾಗುತ್ತವೆ. ಚುನಾವಣೆಗೂ ಮೊದಲು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾರ್ಯಕ್ರಮಗಳ ಅನುಷ್ಠಾನ, ಅದಕ್ಕೆ ಬೇಕಾದ ಸಂಪನ್ಮೂಲ ಕ್ರೋಡೀಕರಣ ಸಹಿತ ಮತ್ತಿತರ ಅಂಶಗಳ ಹಿನ್ನೆಲೆಯಲ್ಲಿ ಇಂತಹ ಬದಲಾವಣೆಗಳು ಸಹಜ. ಆದರೆ ಅವು ಬಹು ಪಾಲು ಜನಹಿತವಾಗಿಯೇ ಇರಬೇಕು ಎಂಬುದು ಜನರ ಆಶಯ.

ಯಾರೊಬ್ಬರೂ ಹಸಿದ ಹೊಟ್ಟೆಯಲ್ಲಿ ಇರಬಾರದು ಎಂಬ ಉದ್ದೇಶ ದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರಕಾರ ಕೊಡುವ ತಲಾ 5 ಕೆ.ಜಿ. ಅಕ್ಕಿಯ ಜತೆಗೆ ರಾಜ್ಯ ಸರಕಾರವೂ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿ ನೀಡುವುದು ಇದರ ಮೂಲ ಉದ್ದೇಶವಾಗಿತ್ತು.

ಈಗ ಪಡಿತರ ಚೀಟಿಗಳ ಅರ್ಹತೆ ಮತ್ತು ಅನರ್ಹತೆಯ ವಿಚಾರವು ಸರಕಾರದ ಮಟ್ಟದಲ್ಲಿ ಚರ್ಚೆಯ ವಿಷಯವಾಗಿದೆ. ಹೀಗಾಗಿ ಪಡಿತರ ಚೀಟಿದಾರರಿಗೆ ಪಾತಾಳ ಗರಡಿ ಹಾಕಿರುವ ಸರಕಾರಿ ಅಧಿಕಾರಿಗಳು, ಕುಟುಂಬದ ಮಾಲಕರನ್ನು ಸೂಚಿಸದ 53,547 ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿದ್ದರೆ, ಬಹು ಮಾಲಕತ್ವವುಳ್ಳ 4,845 ಕಾರ್ಡ್‌ಗಳಿವೆ. ಆಧಾರ್‌ ಸಂಖ್ಯೆ ವಿಲೀನಗೊಳ್ಳದ 54,349 ಪಡಿತರ ಚೀಟಿಗಳಿದ್ದರೆ, ಆಧಾರ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆ ವಿಲೀನಗೊಳ್ಳದ 21.69 ಲಕ್ಷ ಕಾರ್ಡ್‌ಗಳಿವೆ. ನಕಲಿ ಆಧಾರ್‌ ವಿಲೀನ ಮಾಡಿದ 14 ಪಡಿತರ ಚೀಟಿಗಳನ್ನೂ ಪಟ್ಟಿ ಮಾಡಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ 2023 ರ ಮಾರ್ಚ್‌ನಿಂದ ಸತತ ಮೂರು ತಿಂಗಳ ಕಾಲ ಆಹಾರ ಧಾನ್ಯವನ್ನೇ ಪಡೆಯದ 5.32 ಲಕ್ಷ ಪಡಿತರ ಚೀಟಿಗಳಿವೆ. ಇವರು ಪಡಿತರ ಚೀಟಿಯನ್ನು ರೇಷನ್‌ಗಿಂತ ಹೆಚ್ಚು ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಸೇವೆ ಪಡೆಯಲು ಬಳಸುತ್ತಿದ್ದಾರೆ ಎಂಬುದು ಅಧಿಕಾರಿಗಳ ಹೇಳಿದೆ.

ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿ, ಆಹಾರ ಧಾನ್ಯ ಬೇಕು ಎನ್ನುವವರು ಮತ್ತು ವೈದ್ಯಕೀಯ ಉದ್ದೇಶಕ್ಕೆ ಪಡಿ ತರ ಚೀಟಿ ಪಡೆಯುವವರನ್ನು ಪ್ರತ್ಯೇಕಿಸುವ ಸಲಹೆಯನ್ನು ಸರಕಾರದ ಮುಂದಿಟ್ಟಿದ್ದಾರೆ. ಎಸ್‌.ಎಂ. ಕೃಷ್ಣ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಡಿ.ಬಿ.ಇನಾಂದಾರ್‌, ಇತ್ತೀಚಿನ ಉಮೇಶ್‌ ಕತ್ತಿ ಅವರ ಅವಧಿವರೆಗೆ ಪಡಿತರ ಚೀಟಿ ನೀಡುವ ಮಾನ ದಂಡಗಳ ಪರಿಶೀಲನೆ ಪ್ರಕ್ರಿಯೆಗಳು ವಿವಾದವಾದದ್ದೇ ಹೆಚ್ಚು. ಇದಕ್ಕೆ ಕಾರ್ಡ್‌ ದಾರರಿಂದ ಸರಕಾರ ಸಾಕಷ್ಟು ಪ್ರತಿರೋಧ ಎದುರಿಸಿದ್ದು ಉಂಟು.

ಈಗಾಗಲೇ ಕೇಂದ್ರ ಸರಕಾರದ ಆಯುಷ್ಮಾನ್‌ ಭಾರತ್‌ ಕಾರ್ಡ್‌ ಜತೆಗೆ ರಾಜ್ಯ ಸರಕಾರದಿಂದ ಆರೋಗ್ಯ ಕರ್ನಾಟಕ ಕಾರ್ಡ್‌ನ್ನು ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ ಆಧರಿಸಿ ನೀಡಲಾಗುತ್ತಿದೆ. ಐದು ಲಕ್ಷ ರೂ.ವರೆಗೆ ವೈದ್ಯಕೀಯ ಸೇವೆ ಪಡೆಯಲು ಅವಕಾಶವಿದೆ. ಇದು ಎಲ್ಲ 1.28 ಕೋಟಿ ಪಡಿತರ ಚೀಟಿಗಳನ್ನುಳ್ಳ ಬಿಪಿಎಲ್‌ ಕುಟುಂಬಗಳಿಗೆ ಅನ್ವಯಿಸುತ್ತಿದೆ. ಅವರು ಆಹಾರ ಧಾನ್ಯ ಪಡೆಯಲಿ, ಪಡೆಯದಿರಲಿ. ಈಗ ಅವರಿಗೊಂದು ಕಾರ್ಡ್‌, ಇವರಿಗೊಂದು ಕಾರ್ಡ್‌ ಕೊಡಲು ಸಾಧ್ಯವೇ? ಇದರಿಂದ ಸರಕಾರಕ್ಕೆ ಇನ್ನಷ್ಟು ಹೊರೆ ಆಗುವುದಿಲ್ಲವೇ? ಆಹಾರ ಧಾನ್ಯ ಪಡೆಯು ತ್ತಿರುವವರು ವೈದ್ಯಕೀಯ ಉದ್ದೇಶಕ್ಕೆ ಕಾರ್ಡ್‌ ಅನ್ನು ಬಳಸುವ ಹಾಗಿರು ವುದಿಲ್ಲವೇ? ಅನ್ನಭಾಗ್ಯವು ಕನ್ನಭಾಗ್ಯ ಆಗಬಾರದು ಎಂಬುದು ಎಷ್ಟು ಸರಿಯೋ, ಆಹಾರವೂ ಸಿಗಬೇಕು, ಆರೋಗ್ಯವೂ ಸಿಗಬೇಕು ಎಂಬುದು ಕೂಡ ಅಷ್ಟೇ ಸರಿ. ಹೀಗಾಗಿ ಅಧಿಕಾರಿಗಳು ದಾರಿ ತಪ್ಪಿಸಿದರೂ ಸರಕಾರ ಸರಿ ದಾರಿಯಲ್ಲಿ ನಡೆಯುವುದೊಂದೇ ಇದಕ್ಕಿರುವ ಪರಿಹಾರ.

ಟಾಪ್ ನ್ಯೂಸ್

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.