Tunnel: ಅಪಾಯಕಾರಿ “ಬಿಲ”ಗಳ ಕಥೆ- ರ‍್ಯಾಟ್‌-ಹೋಲ್‌ ಮೈನಿಂಗ್‌ ಎಂಬ ಡೆಡ್ಲಿ ಟ್ರ್ಯಾಪ್‌


Team Udayavani, Nov 28, 2023, 9:40 PM IST

rat hole mining

ಅಸುರಕ್ಷಿತ ಎಂಬ ಕಾರಣಕ್ಕೆ ದೇಶದಲ್ಲಿ ಬ್ಯಾನ್‌ ಆಗಿದ್ದ ಗಣಿಗಾರಿಕೆಯ ವಿಧಾನವೊಂದು ಈಗ ಸುರಂಗದಡಿ ಸಿಲುಕಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅಮೆರಿಕದಿಂದ ತರಿಸಲಾದ ಆಗರ್‌ ಮಷೀನ್‌ ಸೇರಿದಂತೆ ಹೈಟೆಕ್‌ ಯಂತ್ರಗಳು ಕೈಕೊಟ್ಟಾಗ ನೆರವಿಗೆ ಬಂದಿದ್ದೇ ಈ ರ‍್ಯಾಟ್‌-ಹೋಲ್‌ ಮೈನಿಂಗ್‌. ಏನಿದು ವಿಧಾನ? ಇದಕ್ಕೆ ನಿಷೇಧ ಹೇರಿದ್ದೇಕೆ ಎಂಬ ಮಾಹಿತಿ ಇಲ್ಲಿದೆ.

ಏನಿದು ರ‍್ಯಾಟ್‌ ಹೋಲ್‌ ಮೈನಿಂಗ್‌?
ಪುಟ್ಟ ಪುಟ್ಟ ಗುಂಡಿಗಳನ್ನು ಅಂದರೆ 4 ಅಡಿಗಿಂತಲೂ ಕಡಿಮೆ ಅಗಲದ ಹೊಂಡಗಳನ್ನು ಅಗೆದು, ಭೂಮಿಯ ಆಳಕ್ಕಿಳಿದು ಕಲ್ಲಿದ್ದಲನ್ನು ಹೊರತೆಗೆಯುವ ವಿಧಾನವಿದು. ಕೈಯ್ಯಲ್ಲೇ ಒಬ್ಬ ವ್ಯಕ್ತಿಗಷ್ಟೇ ಹೋಗಿ-ಬರಲು ಸಾಧ್ಯವಾಗುವಂಥ ಕಿರಿದಾದ ಗುಂಡಿಗಳನ್ನು ಅಗೆಯುವವರನ್ನು ರ‍್ಯಾಟ್‌-ಹೋಲ್‌ ಮೈನರ್ಸ್‌ ಎಂದು ಕರೆಯುತ್ತಾರೆ. ಗುಂಡಿ ಅಗೆದ ಬಳಿಕ ದಪ್ಪ ಹಗ್ಗ ಮತ್ತು ಬಿದಿರಿನ ಏಣಿಗಳ ಮೂಲಕ ಕಾರ್ಮಿಕನು ಗುಂಡಿಯೊಳಕ್ಕೆ ಇಳಿಯುತ್ತಾನೆ. ಕಲ್ಲಿದ್ದಲಿನ ಪದರವು ಸಿಕ್ಕಿದೊಡನೆ, ಅದನ್ನು ಹೊರತೆಗೆಯುವ ಕೆಲಸ ನಡೆಯುತ್ತದೆ. ಈ ಗುಂಡಿಗಳು ಕೆಲವೊಮ್ಮೆ 100ರಿಂದ 400 ಅಡಿ ಆಳವೂ ಇರುತ್ತದೆ.

ಅತ್ಯಂತ ಅಪಾಯಕಾರಿ
ಈ ವಿಧಾನವು ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿದೆ. ಏಕೆಂದರೆ, ಈ ಕಿರಿದಾದ ಗುಂಡಿಗೆ ಒಮ್ಮೆಗೆ ಒಬ್ಬ ಕಾರ್ಮಿಕನಷ್ಟೇ ಇಳಿಯಲು ಸಾಧ್ಯ. ಒಳಕ್ಕೆ ಹೋದ ಆತ ಹಲವು ಪ್ರಕರಣಗಳಲ್ಲಿ ಉಸಿರಾಟದ ತೊಂದರೆ, ಆಮ್ಲಜನಕದ ಕೊರತೆ ಮತ್ತು ಹಸಿವಿನಿಂದ ಮೃತಪಟ್ಟ ಉದಾಹರಣೆಗಳಿವೆ.

ಹಲವು ದುರಂತಗಳು
ಇದೊಂದು ಅವೈಜ್ಞಾನಿಕ ವಿಧಾನ ಎಂಬ ಕಾರಣಕ್ಕಾಗಿ 2014ರಲ್ಲೇ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರ‍್ಯಾಟ್‌-ಹೋಲ್‌ ಮೈನಿಂಗ್‌ಗೆ ನಿಷೇಧ ಹೇರಿತ್ತು. ಆದರೂ, ಮೇಘಾಲಯ, ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಈಗಲೂ ಈ ವಿಧಾನ ಚಾಲ್ತಿಯಲ್ಲಿದೆ. 2018ರಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ 15 ಮಂದಿ ಗಣಿಯೊಳಗೆ ಪ್ರವಾಹದ ನೀರು ತುಂಬಿದ ಕಾರಣ, ಒಳಗೆ ಸಿಲುಕಿಕೊಂಡಿದ್ದರು. 2 ತಿಂಗಳಿಗೂ ಅಧಿಕ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಕೊನೆಗೂ 2 ಮೃತದೇಹಗಳಷ್ಟೇ ಹೊರತೆಗೆಯಲು ಸಾಧ್ಯವಾಯಿತು. 2021ರಲ್ಲೂ 5 ಕಾರ್ಮಿಕರು ಸಿಲುಕಿಕೊಂಡು, ಆ ಪೈಕಿ 3 ಮೃತದೇಹಗಳಷ್ಟೇ ಸಿಕ್ಕಿದವು.

ನಿಷೇಧವಾಗಿದ್ದೇಕೆ?
ಇಲಿ ಬಿಲದ ಮಾದರಿಯ ಗುಂಡಿಗಳಲ್ಲಿ ಸಮರ್ಪಕ ಗಾಳಿ-ಬೆಳಕಿನ ವ್ಯವಸ್ಥೆ ಇರುವುದಿಲ್ಲ, ಕಾರ್ಮಿಕರು ಕೂಡ ಜೀವರಕ್ಷಕ ವ್ಯವಸ್ಥೆಗಳನ್ನು ಹೊಂದಿರುವುದಿಲ್ಲ. ಪರಿಣಾಮ, ಕಾರ್ಮಿಕರ ಪ್ರಾಣಹಾನಿ, ದುರಂತಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಜತೆಗೆ, ಭೂಮಿಗೆ ಹಾನಿ, ಅರಣ್ಯ ನಾಶ ಮತ್ತು ಜಲಮಾಲಿನ್ಯಕ್ಕೂ ಇದು ಕಾರಣವಾಗುತ್ತಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು 2014ರಲ್ಲಿ ರ‍್ಯಾಟ್‌ ಹೋಲ್‌ ಮೈನಿಂಗ್‌ಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು.

ರ‍್ಯಾಟ್‌-ಹೋಲ್‌ ಮೈನಿಂಗ್‌ ನಿಷೇಧಗೊಂಡಿದ್ದು ಯಾವಾಗ?- 2014
ಈ ವಿಧಾನದಲ್ಲಿ ಗುಂಡಿಗಳು ಎಷ್ಟು ಅಗಲವಿರುತ್ತವೆ? – ಗರಿಷ್ಠ 4 ಅಡಿ
ಗುಂಡಿಗಳ ಆಳ ಎಷ್ಟಿರುತ್ತವೆ? – 100ರಿಂದ 400 ಅಡಿ

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳೋದು ಯಾವಾಗ?

Bajaj Bruzer is the world’s first CNG bike

Bajaj Bruzer; ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಬ್ರೂಝರ್‌

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

Ajit Doval is India’s James Bond!

Spy Master; ಅಜಿತ್‌ ದೋವಲ್‌ ಭಾರತದ ಜೇಮ್ಸ್‌ಬಾಂಡ್‌!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.