![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 14, 2020, 10:50 AM IST
ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಸಹ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸೆಸೆಲ್ಸಿ ಪರೀಕ್ಷೆಯ ಮೌಲ್ಯಮಾಪನಕ್ಕೆ ಹಾಜರಾಗುವ ಮೂಲಕ ಶಿಕ್ಷಕಿಯೊಬ್ಬರು ಕರ್ತವ್ಯನಿಷ್ಠೆ ಮೆರೆದಿದ್ದಾರೆ.
ಮಡಿಕೇರಿ ತಾಲೂಕಿನ ಬೆಟ್ಟಿಗೇರಿಯ ಉದಯ ಪ್ರೌಢ ಶಾಲೆಯ ಶಿಕ್ಷಕಿ ಕವಿತಾ ಅವರ ತಾಯಿ ವಯೋ ಸಹಜ ಕಾಯಿಲೆಯಿಂದ ಸೋಮವಾರ ಮುಂಜಾನೆ ನಿಧನ ಹೊಂದಿದರು. ಎಸೆಸೆಲ್ಸಿ ಪರೀಕ್ಷೆ ತುಂಬಾ ವಿಳಂಬವಾಗಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತಾನು ಗೈರುಹಾಜರಾಗುವುದು ಸರಿಯಲ್ಲ ಎಂದು ಭಾವಿಸಿದ ಅವರು ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆಯುತ್ತಿರುವ ಮೌಲ್ಯಮಾಪನಕ್ಕೆ ಹಾಜರಾದರು. ಕರ್ತವ್ಯ ಮುಗಿದ ಬಳಿಕ ತಾಯಿಯ ಅಂತ್ಯಸಂಸ್ಕಾರ ನಡೆಸಿದರು.
ಶಿಕ್ಷಣಾಧಿಕಾರಿ ಮಚ್ಚಾಡೋ ಅವರು ಶಿಕ್ಷಕಿಯ ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿದ್ದಾರೆ. ಸಹೋದ್ಯೋಗಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.