USA: ಅ. 8ರಂದು ಬೃಹತ್‌ ದೇಗುಲ ದರ್ಶನ: ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ

ಬಿಎಪಿಎಸ್‌ನಿಂದ ಅಕ್ಷರಧಾಮ ದೇವಸ್ಥಾನ

Team Udayavani, Sep 24, 2023, 10:32 PM IST

aksharadhama nj

ದೇಶದ ಹೊರಗೆ ನಿರ್ಮಾಣವಾಗುತ್ತಿರುವ ಅತಿದೊಡ್ಡ ದೇಗಲು ಅ. 8ರಂದು ಲೋಕಾರ್ಪಣೆಗೊಳ್ಳಲಿದೆ. ಅಮೆರಿಕದ ನ್ಯೂಜೆರ್ಸಿಯಲ್ಲಿ ಇದು ನಿರ್ಮಾಣಗೊಂಡಿದೆ. ಸ್ವಯಂಸೇವಕರೇ ಇದನ್ನು ಅದ್ದೂರಿಯಾಗಿ ನಿರ್ಮಿಸಿರುವುದು ವಿಶೇಷ.

ಹೊಸ ದೇಗುಲದ ವಿಶೇಷ ಏನು?
ಅಮೆರಿಕದ ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆ ಟೌನ್‌ಶಿಪ್‌ನಲ್ಲಿ ಅಕ್ಷರಧಾಮ ದೇಗುಲ ನಿರ್ಮಾಣವಾಗಿದೆ. ಬಿಎಪಿಎಸ್‌ ಸ್ವಾಮಿ ನಾರಾಯಣ ಅಕ್ಷರಧಾಮ ದೇಗುಲ ಅದರ ನೇತೃತ್ವ ವಹಿಸಿದೆ. 255 ಅಡಿ x 345 ಅಡಿ x 191 ಸುತ್ತಳತೆ ಹೊಂದಿದೆ. ಭಾರತ ಹೊಂದಿರುವ ಸಾಂಸ್ಕೃತಿಕ ಪರಂಪರೆಗಳನ್ನು ಆಧರಿಸಿ ಸುಂದರ ಕೆತ್ತನೆಯ ಶಿಲ್ಪಗಳು ಇದರಲ್ಲಿವೆ. 10 ಸಾವಿರ ವಿವಿಧ ನೃತ್ಯ ಭಂಗಿಗಳು ಇರುವ ವಿಗ್ರಹಗಳನ್ನು ಕೆತ್ತಲಾಗಿದೆ.

12,500 – ನಿರ್ಮಾಣದಲ್ಲಿ ಭಾಗಿಯಾಗಿದ್ದ ಸ್ವಯಂಸೇವಕರು
12 ವರ್ಷಗಳು- ಕಾಮಗಾರಿ ಪೂರ್ತಿಗೊಳ್ಳಲು ಬೇಕಾದ ಅವಧಿ – 2011ರಿಂದ 2023
183 ಎಕರೆ- ದೇಗುಲ ಹೊಂದಿರುವ ಜಮೀನು
ಗರ್ಭ ಗುಡಿ, 12 ದೇವರ ಗುಡಿಗಳು, 9 ಗೋಪುರಗಳು, 9 ಪಿರಮಿಡ್‌ ಆಕಾರದ ಗೋಪುರಗಳು ಇದರಲ್ಲಿವೆ.
1,000 ವರ್ಷ- ಇಷ್ಟು ವರ್ಷ ಬಾಳಿಕೆ ಬರುವಂತೆ ನಿರ್ಮಾಣ

ದೂರವೆಷ್ಟು?
90 ಕಿ.ಮೀ.- ನ್ಯೂಯಾರ್ಕ್‌ನ ಟೈಮ್ಸ್‌ ಚೌಕದಿಂದ
289 ಕಿ.ಮೀ.- ವಾಷಿಗ್ಟನ್‌ ಡಿ.ಸಿ.ಯ ಉತ್ತರಕ್ಕೆ

ಎರಡನೇ ಅತ್ಯಂತ ದೊಡ್ಡ ದೇಗುಲ?
ಕಾಂಬೋಡಿಯಾದ ಆ್ಯಂಗ್‌ಕೋರ್‌ ವಾಟ್‌ ಜಗತ್ತಿನ ಅತ್ಯಂತ ದೊಡ್ಡ ದೇಗುಲ ಎಂಬ ಹೆಗ್ಗಳಿಕೆಗೆ ಪಡೆದಿದೆ. 500 ಎಕರೆ ಪ್ರದೇಶದಲ್ಲಿ ಅದು ವ್ಯಾಪಿಸಿದೆ. ಜತೆಗೆ ಯುನೆಸ್ಕೋದ ವಿಶ್ವ ಸಾಂಸ್ಕೃತಿಕ ಪರಂಪರೆಗಳ ಪಟ್ಟಿಯಲ್ಲಿ ದಾಖಲಾಗಿದೆ. 2005ರ ನವೆಂಬರ್‌ನಲ್ಲಿ ಹೊಸದಿಲ್ಲಿಯಲ್ಲಿ ಲೋಕಾರ್ಪಣೆಗೊಂಡಿರುವ ಅಕ್ಷರಧಾಮ ದೇಗುಲ 100 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದೆ.

ಯಾವಾಗ ಉದ್ಘಾಟನೆ?
ಅ. 8

ಭಾರತದಿಂದಲೂ ಕಲ್ಲುಗಳ ಪೂರೈಕೆ
ಅಕ್ಷರಧಾಮ ದೇಗುಲ ನಿರ್ಮಾಣಕ್ಕೆ ನಾಲ್ಕು ಬಗೆಯ ಕಲ್ಲುಗಳನ್ನು ಬಳಕೆ ಮಾಡಲಾಗಿದೆ. ಸುಣ್ಣದ ಕಲ್ಲು (ಬಲ್ಗೇರಿಯಾ ಮತ್ತು ಟರ್ಕಿ), ಗುಲಾಬಿ ಬಣ್ಣದ ಕಲ್ಲು, ಮಾರ್ಬಲ್‌ (ಗ್ರೀಸ್‌), ಗ್ರಾನೈಟ್‌ (ಭಾರತ ಮತ್ತು ಚೀನ), ಸ್ಯಾಂಡ್‌ಸ್ಟೋನ್‌ (ಭಾರತ) ಗಳನ್ನು ತರಿಸಿಕೊಂಡು ನಿರ್ಮಾಣ.
2 ಮಿಲಿಯ ಕ್ಯೂಬಿಕ್‌ ಫೀಟ್‌- ಬಳಕೆ ಮಾಡಲಾದ ಕಲ್ಲುಗಳು

ದೇಶದಿಂದಲೂ ಪವಿತ್ರ ಜಲ
ಭಾರತದ ಪವಿತ್ರ ನದಿಗಳ ಸಹಿತ ಜಗತ್ತಿನ 300 ನದಿ ಮೂಲಗಳಿಂದ ನೀರು ಸಂಗ್ರಹಿಸಿ ಅಲ್ಲಿಗೆ ಕೊಂಡೊಯ್ಯಲಾಗಿದೆ

ಸ್ವಯಂಸೇವಕರು ಯಾರೆಲ್ಲ?
ವಿದ್ಯಾರ್ಥಿಗಳು, ವಿವಿಧ ಕಂಪೆನಿಗಳ ಸಿಇಒಗಳು, ವೈದ್ಯರು, ಎಂಜಿನಿಯರ್‌ಗಳು, ಕಟ್ಟಡ ವಿನ್ಯಾಸಕಾರರು ದೇಗುಲ ನಿರ್ಮಾಣದಲ್ಲಿ ಭಾಗಿಯಾಗಿದ್ದರು. ಕೆಲವರು ತಮ್ಮ ಉದ್ಯೋಗಕ್ಕೆ ರಜೆ ಹಾಕಿ ದುಡಿದಿದ್ದಾರೆ ಎಂದು ಬಿಎಪಿಎಸ್‌ ಅಧಿಕಾರಿಗಳು ಹೇಳಿದ್ದಾರೆ. ಹಲವರು ದೇಗುಲ ನಿರ್ಮಾಣಕ್ಕಾಗಿ ಸ್ಥಳದಲ್ಲಿಯೇ ಬಾಡಿಗೆಗೆ ಮನೆಗಳನ್ನು ಪಡೆದು ವಾಸ್ತವ್ಯ ಹೂಡಿದ್ದರು.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.