Tourism: ಶೀಘ್ರ ಸಿಗಲಿದೆ “ಕ್ಷೇಮ” ಪ್ರವಾಸಾನುಭವ

ಎರಡು ತಿಂಗಳಲ್ಲಿ "ವೆಲ್‌ನೆಸ್‌ ಟೂರಿಸಂ" ಮನರಂಜನೆ ಜತೆಗೆ ಮನಶ್ಶಾಂತಿ ಲಭ್ಯ

Team Udayavani, Sep 16, 2023, 11:22 PM IST

wellness

ಬೆಂಗಳೂರು: ಪ್ರವಾಸಿಗರ ಆರೋಗ್ಯ, ಯೋಗಕ್ಷೇಮ ಕಾಪಾಡಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯು ಮುಂದಿನ 2 ತಿಂಗಳಲ್ಲಿ ಆದ್ಯತಾ ಪ್ರವಾಸಿ ತಾಣಗಳಲ್ಲಿ “ವೆಲ್‌ನೆಸ್‌ ಟೂರಿಸಂ’ ಸೌಕರ್ಯ ಒದಗಿಸಲು ಸಿದ್ಧತೆ ನಡೆಸುತ್ತಿದೆ. ಅದರನ್ವಯ ಪ್ರವಾಸಿಗರಿಗೆ ಮನರಂಜನೆ ಜತೆಗೆ ಮನಶ್ಶಾಂತಿಯೂ ಸಿಗಲಿದೆ.

ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗಾಗಿ ಸರಕಾರ ರೂಪಿಸಿರುವ ಮಹತ್ವದ ಯೋಜನೆಗಳಲ್ಲಿ ವೆಲ್‌ನೆಸ್‌ ಟೂರಿಸಂ ಕೂಡ ಒಂದು. “ವೆಲ್‌ನೆಸ್‌ ಟೂರಿಸಮ್‌’ ಅಡಿಯಲ್ಲಿ “ಆಯುರ್ವೇದ, ಯೋಗ ಹಾಗೂ ನ್ಯಾಚುರೋಪತಿ, ಯುನಾನಿ, ಸಿದ್ಧ, ಹೋಮಿಯೋಪತಿ ಸೌಕರ್ಯ ಸ್ಥಾಪಿಸಲು ಮುಂಬರುವ ಖಾಸಗಿ ಹೂಡಿಕೆದಾರರಿಗೆ ಇಲಾಖೆಯಿಂದ ಸಹಾಯಧನ, ರಿಯಾಯಿತಿ ಹಾಗೂ ಉತ್ತೇಜನ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
ಒಪ್ಪಂದ

ಎರಡು ತಿಂಗಳ ಬಳಿಕ “ಗ್ಲೋಬಲ್‌ ಟೂರಿಸಂ ಸಮ್ಮಿಟ್‌’ ಆಯೋಜಿಸಲು ಯೋಜನೆ ರೂಪಿಸಿದ್ದೇವೆ. ವೆಲ್‌ನೆಲ್‌ ಟೂರಿಸಂ ಯೋಜನೆ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಸಿದ್ಧಪಡಿಸಿರುವ ಪ್ರಸ್ತಾವನೆ ಇಟ್ಟುಕೊಂಡು ವೆಲ್‌ನೆಲ್‌ ಟೂರಿಸಂಗೆ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ಇರುವವರ ಜತೆಗೆ ಮಾತುಕತೆ ನಡೆಸಿ ಒಪ್ಪಂದಕ್ಕೆ ಸಹಿ ಮಾಡುತ್ತೇವೆ. ರಾಜ್ಯದಲ್ಲಿರುವ ಪ್ರವಾಸಿ ವ್ಯವಸ್ಥೆ ಅಭಿವೃದ್ಧಿಪಡಿಸುವುದು, ಪ್ರವಾಸಿ ಸ್ಥಳಗಳಲ್ಲಿ ಬಂಡವಾಳ ಹೂಡಿಕೆ ಮಾಡುವುದು, ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಡುವುದು, ರಾಜ್ಯದ ಆದಾಯ ಹೆಚ್ಚಿಸುವ ಉದ್ದೇಶದಿಂದ ವೆಲ್‌ನೆಸ್‌ ಟೂರಿಸಂ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ| ವಿ.ರಾಮ್‌ ಪ್ರಸಾದ್‌ ಮನೋಹರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.
ತಾಣ ಗುರುತು ಪ್ರಕ್ರಿಯೆ

ಮನರಂಜನೆ, ಸಾಂಸ್ಕೃತಿಕ ಪ್ರವಾಸಗಳ ಜತೆಜತೆಗೆ ವೆಲ್‌ನೆಸ್‌ ಟೂರಿಸಂಗೆ ದೇಶದಲ್ಲಿ ಬೇಡಿಕೆ ವ್ಯಕ್ತವಾಗಿದೆ. ವೆಲ್‌ನೆಸ್‌ ಟೂರಿಸಂ ತರಬಹುದಾದ ರಾಜ್ಯದ ಪ್ರವಾಸಿ ತಾಣ ಗುರುತಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಅಧ್ಯಾತ್ಮಿಕ ಅನುಭವ ನೀಡುವ ಸ್ಥಳಗಳಲ್ಲೇ ಈ ವ್ಯವಸ್ಥೆ ನಿರ್ಮಿಸಲು ಚಿಂತಿಸಲಾಗಿದೆ. ಇಲಾಖೆ ಗುರುತಿಸಿರುವ ತಾಣಗಳಲ್ಲಿ ಖಾಸಗಿಯರಿಗೆ ಈ ಸೌಕರ್ಯ ಒದಗಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ರಿಯಾಯಿತಿ ದರಗಳಲ್ಲಿ ಇಲ್ಲಿ ಸೌಲಭ್ಯ ಸಿಗಲಿದೆ. ಹೂಡಿಕೆ ಮಾಡುವ ಖಾಸಗಿ ವ್ಯಕ್ತಿ, ಸಂಸ್ಥೆಗಳಿಗೆ ಒಪ್ಪಂದದ ವೇಳೆಯೇ ಕೆಲವು ಷರತ್ತು ವಿಧಿಸಲು ನಿರ್ಧರಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯಲ್ಲಿ 23 ವಿವಿಧ ಸೆಕ್ಟರ್‌ಗಳಿವೆ. ಅವುಗಳಲ್ಲಿ ವೆಲ್‌ನೆಸ್‌ ಟೂರಿಸಂ ಕೂಡ ಒಂದು. ಇದಕ್ಕೆ ಸಂಬಂಧಿಸಿದ ಯೋಜನೆ ಸಿದ್ಧಪಡಿಸುತ್ತಿದ್ದೇವೆ. ಬಂಡವಾಳ ಹೂಡುವ ಆಸಕ್ತರಿಗೆ ಸೌಲಭ್ಯಗಳನ್ನು ಇಲಾಖೆ ಒದಗಿಸಲಿದೆ.
-ಡಾ| ವಿ.ರಾಮ್‌ ಪ್ರಸಾದ್‌ ಮನೋಹರ್‌, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ

ಏನಿದು ವೆಲ್‌ನೆಸ್‌ ಟೂರಿಸಂ ?
ಕ್ಷೇಮ ಪ್ರವಾಸೋದ್ಯಮವು ಭಾರತದಲ್ಲಿ ಭಾರೀ ಮುನ್ನೆಲೆಗೆ ಬರುತ್ತಿದೆ. ರಾಜ್ಯದಲ್ಲಿ ಪ್ರಕೃತಿ ಸಹಜ ವಾತಾವರಣಗಳಿಂದ ಕೂಡಿರುವ ಕೆಲವು ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ವೆಲ್‌ನೆಸ್‌ ಟೂರಿಸಂನಡಿ ಯೋಗ, ಧ್ಯಾನ, ಮನಶ್ಶಾಂತಿ ನೀಡುವ ಕೆಲವು ಆಯುರ್ವೇದ ಚಿಕಿತ್ಸೆಗಳು, ಯುನಾನಿ, ಸಿದ್ಧ, ಹೋಮಿಯೋಪತಿ ಚಿಕಿತ್ಸೆಗಳಲ್ಲಿ ಬರುವ ಥೆರಪಿ ಸೌಲಭ್ಯ ಕಲ್ಪಿಸಲಾಗುತ್ತದೆ. ಸದಾ ಕೆಲಸದ ಒತ್ತಡದಲ್ಲಿರುವವರು, ಖನ್ನತೆಗೆ ಒಳಗಾದವರು, ಒಂದೇ ಜಾಗದಲ್ಲಿದ್ದು ಬೇಜಾರಾದರೆ ಬದಲಾವಣೆ ಬಯಸುವ ಮನಸ್ಥಿತಿ ಹೊಂದಿರುವವರಿಗೆ “ವೆಲ್‌ನೆಸ್‌ ಟೂರಿಸಂ’ನಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ.

 ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.