Tourism: ಶೀಘ್ರ ಸಿಗಲಿದೆ “ಕ್ಷೇಮ” ಪ್ರವಾಸಾನುಭವ

ಎರಡು ತಿಂಗಳಲ್ಲಿ "ವೆಲ್‌ನೆಸ್‌ ಟೂರಿಸಂ" ಮನರಂಜನೆ ಜತೆಗೆ ಮನಶ್ಶಾಂತಿ ಲಭ್ಯ

Team Udayavani, Sep 16, 2023, 11:22 PM IST

wellness

ಬೆಂಗಳೂರು: ಪ್ರವಾಸಿಗರ ಆರೋಗ್ಯ, ಯೋಗಕ್ಷೇಮ ಕಾಪಾಡಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯು ಮುಂದಿನ 2 ತಿಂಗಳಲ್ಲಿ ಆದ್ಯತಾ ಪ್ರವಾಸಿ ತಾಣಗಳಲ್ಲಿ “ವೆಲ್‌ನೆಸ್‌ ಟೂರಿಸಂ’ ಸೌಕರ್ಯ ಒದಗಿಸಲು ಸಿದ್ಧತೆ ನಡೆಸುತ್ತಿದೆ. ಅದರನ್ವಯ ಪ್ರವಾಸಿಗರಿಗೆ ಮನರಂಜನೆ ಜತೆಗೆ ಮನಶ್ಶಾಂತಿಯೂ ಸಿಗಲಿದೆ.

ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗಾಗಿ ಸರಕಾರ ರೂಪಿಸಿರುವ ಮಹತ್ವದ ಯೋಜನೆಗಳಲ್ಲಿ ವೆಲ್‌ನೆಸ್‌ ಟೂರಿಸಂ ಕೂಡ ಒಂದು. “ವೆಲ್‌ನೆಸ್‌ ಟೂರಿಸಮ್‌’ ಅಡಿಯಲ್ಲಿ “ಆಯುರ್ವೇದ, ಯೋಗ ಹಾಗೂ ನ್ಯಾಚುರೋಪತಿ, ಯುನಾನಿ, ಸಿದ್ಧ, ಹೋಮಿಯೋಪತಿ ಸೌಕರ್ಯ ಸ್ಥಾಪಿಸಲು ಮುಂಬರುವ ಖಾಸಗಿ ಹೂಡಿಕೆದಾರರಿಗೆ ಇಲಾಖೆಯಿಂದ ಸಹಾಯಧನ, ರಿಯಾಯಿತಿ ಹಾಗೂ ಉತ್ತೇಜನ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
ಒಪ್ಪಂದ

ಎರಡು ತಿಂಗಳ ಬಳಿಕ “ಗ್ಲೋಬಲ್‌ ಟೂರಿಸಂ ಸಮ್ಮಿಟ್‌’ ಆಯೋಜಿಸಲು ಯೋಜನೆ ರೂಪಿಸಿದ್ದೇವೆ. ವೆಲ್‌ನೆಲ್‌ ಟೂರಿಸಂ ಯೋಜನೆ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಸಿದ್ಧಪಡಿಸಿರುವ ಪ್ರಸ್ತಾವನೆ ಇಟ್ಟುಕೊಂಡು ವೆಲ್‌ನೆಲ್‌ ಟೂರಿಸಂಗೆ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ಇರುವವರ ಜತೆಗೆ ಮಾತುಕತೆ ನಡೆಸಿ ಒಪ್ಪಂದಕ್ಕೆ ಸಹಿ ಮಾಡುತ್ತೇವೆ. ರಾಜ್ಯದಲ್ಲಿರುವ ಪ್ರವಾಸಿ ವ್ಯವಸ್ಥೆ ಅಭಿವೃದ್ಧಿಪಡಿಸುವುದು, ಪ್ರವಾಸಿ ಸ್ಥಳಗಳಲ್ಲಿ ಬಂಡವಾಳ ಹೂಡಿಕೆ ಮಾಡುವುದು, ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಡುವುದು, ರಾಜ್ಯದ ಆದಾಯ ಹೆಚ್ಚಿಸುವ ಉದ್ದೇಶದಿಂದ ವೆಲ್‌ನೆಸ್‌ ಟೂರಿಸಂ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ| ವಿ.ರಾಮ್‌ ಪ್ರಸಾದ್‌ ಮನೋಹರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.
ತಾಣ ಗುರುತು ಪ್ರಕ್ರಿಯೆ

ಮನರಂಜನೆ, ಸಾಂಸ್ಕೃತಿಕ ಪ್ರವಾಸಗಳ ಜತೆಜತೆಗೆ ವೆಲ್‌ನೆಸ್‌ ಟೂರಿಸಂಗೆ ದೇಶದಲ್ಲಿ ಬೇಡಿಕೆ ವ್ಯಕ್ತವಾಗಿದೆ. ವೆಲ್‌ನೆಸ್‌ ಟೂರಿಸಂ ತರಬಹುದಾದ ರಾಜ್ಯದ ಪ್ರವಾಸಿ ತಾಣ ಗುರುತಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಅಧ್ಯಾತ್ಮಿಕ ಅನುಭವ ನೀಡುವ ಸ್ಥಳಗಳಲ್ಲೇ ಈ ವ್ಯವಸ್ಥೆ ನಿರ್ಮಿಸಲು ಚಿಂತಿಸಲಾಗಿದೆ. ಇಲಾಖೆ ಗುರುತಿಸಿರುವ ತಾಣಗಳಲ್ಲಿ ಖಾಸಗಿಯರಿಗೆ ಈ ಸೌಕರ್ಯ ಒದಗಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ರಿಯಾಯಿತಿ ದರಗಳಲ್ಲಿ ಇಲ್ಲಿ ಸೌಲಭ್ಯ ಸಿಗಲಿದೆ. ಹೂಡಿಕೆ ಮಾಡುವ ಖಾಸಗಿ ವ್ಯಕ್ತಿ, ಸಂಸ್ಥೆಗಳಿಗೆ ಒಪ್ಪಂದದ ವೇಳೆಯೇ ಕೆಲವು ಷರತ್ತು ವಿಧಿಸಲು ನಿರ್ಧರಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯಲ್ಲಿ 23 ವಿವಿಧ ಸೆಕ್ಟರ್‌ಗಳಿವೆ. ಅವುಗಳಲ್ಲಿ ವೆಲ್‌ನೆಸ್‌ ಟೂರಿಸಂ ಕೂಡ ಒಂದು. ಇದಕ್ಕೆ ಸಂಬಂಧಿಸಿದ ಯೋಜನೆ ಸಿದ್ಧಪಡಿಸುತ್ತಿದ್ದೇವೆ. ಬಂಡವಾಳ ಹೂಡುವ ಆಸಕ್ತರಿಗೆ ಸೌಲಭ್ಯಗಳನ್ನು ಇಲಾಖೆ ಒದಗಿಸಲಿದೆ.
-ಡಾ| ವಿ.ರಾಮ್‌ ಪ್ರಸಾದ್‌ ಮನೋಹರ್‌, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ

ಏನಿದು ವೆಲ್‌ನೆಸ್‌ ಟೂರಿಸಂ ?
ಕ್ಷೇಮ ಪ್ರವಾಸೋದ್ಯಮವು ಭಾರತದಲ್ಲಿ ಭಾರೀ ಮುನ್ನೆಲೆಗೆ ಬರುತ್ತಿದೆ. ರಾಜ್ಯದಲ್ಲಿ ಪ್ರಕೃತಿ ಸಹಜ ವಾತಾವರಣಗಳಿಂದ ಕೂಡಿರುವ ಕೆಲವು ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ವೆಲ್‌ನೆಸ್‌ ಟೂರಿಸಂನಡಿ ಯೋಗ, ಧ್ಯಾನ, ಮನಶ್ಶಾಂತಿ ನೀಡುವ ಕೆಲವು ಆಯುರ್ವೇದ ಚಿಕಿತ್ಸೆಗಳು, ಯುನಾನಿ, ಸಿದ್ಧ, ಹೋಮಿಯೋಪತಿ ಚಿಕಿತ್ಸೆಗಳಲ್ಲಿ ಬರುವ ಥೆರಪಿ ಸೌಲಭ್ಯ ಕಲ್ಪಿಸಲಾಗುತ್ತದೆ. ಸದಾ ಕೆಲಸದ ಒತ್ತಡದಲ್ಲಿರುವವರು, ಖನ್ನತೆಗೆ ಒಳಗಾದವರು, ಒಂದೇ ಜಾಗದಲ್ಲಿದ್ದು ಬೇಜಾರಾದರೆ ಬದಲಾವಣೆ ಬಯಸುವ ಮನಸ್ಥಿತಿ ಹೊಂದಿರುವವರಿಗೆ “ವೆಲ್‌ನೆಸ್‌ ಟೂರಿಸಂ’ನಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ.

 ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.