![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 4, 2023, 12:42 AM IST
ಗಂಗೊಳ್ಳಿ: ಇಲ್ಲಿನ ಪಂಚ ಗಂಗಾವಳಿ ಹೊಳೆಯಲ್ಲಿ ಗಂಗೊಳ್ಳಿಯ ಶೇಷಿ ಖಾರ್ವಿ (60) ಅವರು ಮರು ವಾಯಿ (ಮಳಿ) ತೆಗೆಯುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು, ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆ. 3 ರಂದು ಸಂಭವಿಸಿದೆ.
ಶೇಷಿ ಮರುವಾಯಿ (ಮಳಿ) ಹೆಕ್ಕುವ ಕೆಲಸ ಮಾಡುತ್ತಿದ್ದು, ಆ. 3ರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಹೊಳೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಮುಳುಗಿದ್ದಾರೆ. ಆ ವೇಳೆ ದೀಪಕ್ ಹಾಗೂ ಸ್ಥಳೀಯರ ಸಹಾಯದಿಂದ ಅವರನ್ನು ಮೇಲಕ್ಕೆ ತಂದಿದ್ದು, ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಅದಾಗಲೇ ಶೇಷಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪುತ್ರ ಸುಧೀರ್ ಖಾರ್ವಿ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.