![Modi-Lokasabha](https://www.udayavani.com/wp-content/uploads/2024/07/Modi-Lokasabha-415x249.jpg)
Kundapura ಆನಗಳ್ಳಿ: ಹೊಳೆಗೆ ಬಿದ್ದು ವ್ಯಕ್ತಿ ಸಾವು
Team Udayavani, Jun 24, 2024, 12:37 AM IST
![ಆನಗಳ್ಳಿ: ಹೊಳೆಗೆ ಬಿದ್ದು ವ್ಯಕ್ತಿ ಸಾವು](https://www.udayavani.com/wp-content/uploads/2024/06/byndoor-7-620x365.jpg)
ಕುಂದಾಪುರ: ಬೆಂಗಳೂರಿನಿಂದ ಊರಿಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟು ಬಂದಿದ್ದ ಬಡಾಕೇರಿ ಗ್ರಾಮದ ಸಾತುಬೆಟ್ಟು ನಿವಾಸಿ ರಾಜು ಬಿ. (48) ಅವರ ಮೃತದೇಹ ಜೂ.21 ರಂದು ಆನಗಳ್ಳಿ ಸಮೀಪದ ಹೊಳೆಯಲ್ಲಿ ಪತ್ತೆಯಾಗಿದೆ.
ರಾಜು ಅವರು ಬೆಂಗಳೂರಿನಲ್ಲಿ ಕ್ಯಾಟರಿಂಗ್ ಕೆಲಸ ಮಾಡಿಕೊಂಡಿದ್ದು, ಜೂ. 20ರಂದು ಊರಿಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟಿದ್ದರು. ಜೂ. 21ರಂದು ಮಧ್ಯಾಹ್ನ ಆನಗಳ್ಳಿ ಹೊಳೆಯಲ್ಲಿ ಗಂಡಸಿನ ಮೃತದೇಹ ಸಿಕ್ಕಿರುವ ವಿಚಾರ ತಿಳಿದು ಸಹೋದರ ಅಶೋಕ (38) ಅವರು ಸ್ಥಳಕ್ಕೆ ಹೋಗಿ ನೋಡಿದಾಗ ಅದು ರಾಜು ಅವರದೇ ಮೃತದೇಹವೆಂದು ಗುರುತು ಪತ್ತೆ ಹಚ್ಚಿದ್ದಾರೆ.
ರಾಜು ಅವರು ಯಾವುದೋ ಕಾರಣಕ್ಕೆ ಆನಗಳ್ಳಿಯ ನದಿಯ ಸಮೀಪಕ್ಕೆ ಹೋದವರು ಆಕಸ್ಮಿಕವಾಗಿಹೊಳೆ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದು ಎಂದು ತಿಳಿದು ಬಂದಿದೆ. ಸಹೋದರ ಅಶೋಕ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಢಿಕ್ಕಿ ; ಸಹ ಸವಾರನಿಗೆ ಗಾಯ
ಗಂಗೊಳ್ಳಿ: ಗುಜ್ಜಾಡಿಯ ನಾಗೇಂದ್ರ ಅವರ ಬೈಕ್ಗೆ ವಾಸ್ಟನ್ ಡಯಾಸ್ ಅವರ ಬೈಕ್ ಢಿಕ್ಕಿಯಾದ ಪರಿಣಾಮ ಸಹ ಸವಾರ ಶ್ರೀನಿವಾಸ ಗಾಯಗೊಂಡ ಘಟನೆ ಜೂ. 22ರಂದು ಸಂಭವಿಸಿದೆ. ನಾಗೇಂದ್ರ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Modi-Lokasabha](https://www.udayavani.com/wp-content/uploads/2024/07/Modi-Lokasabha-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Modi-Lokasabha](https://www.udayavani.com/wp-content/uploads/2024/07/Modi-Lokasabha-150x90.jpg)
Lokasabha: ಕಾಂಗ್ರೆಸ್ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ
![T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ](https://www.udayavani.com/wp-content/uploads/2024/07/surya-150x83.jpg)
T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-150x83.jpg)
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
![2-hunsur](https://www.udayavani.com/wp-content/uploads/2024/07/2-hunsur-150x90.jpg)
Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.