ಪಾಸ್‌ ಇದ್ದರಷ್ಟೇ ಬಂದರಿನೊಳಗೆ ಪ್ರವೇಶ

ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಲ್ಲ ಮೀನುಗಾರಿಕೆ

Team Udayavani, May 19, 2020, 5:40 AM IST

ಪಾಸ್‌ ಇದ್ದರಷ್ಟೇ ಬಂದರಿನೊಳಗೆ ಪ್ರವೇಶ

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಯಾಂತ್ರಿಕ ಮೀನುಗಾರಿಕೆ ವಾರದ ಹಿಂದೆ ಆರಂಭಗೊಂಡಿದ್ದರೂ ಇದುವರೆಗೆ ಶೇ. 10ರಷ್ಟು ಬೋಟುಗಳು ಮಾತ್ರ ಮೀನುಗಾರಿಕೆಗೆ ತೆರಳಿವೆ.

ಬೋಟ್‌ ತೆರಳಲು ಇಲಾಖೆಯ ಪಾಸ್‌ ವ್ಯವಸ್ಥೆ ಮತ್ತು ಕಾರ್ಮಿಕರ ಕೊರತೆಯಿಂದಾಗಿ ಯಾಂತ್ರೀಕೃತ ದೋಣಿಗಳು ನಿರೀಕ್ಷಿತ ಪ್ರಮಾಣದಲ್ಲಿ ಕಡಲಿಗೆ ಇಳಿದಿಲ್ಲ. ಇನ್ನು ಕೆಲವರು ಬೋಟುಗಳನ್ನು ತೆರವುಗೊಳಿಸಲು ಸಾಧ್ಯವಾಗದ ಹಿನ್ನೆಲೆ ಮತ್ತು ಮೇ 31ಕ್ಕೆ ಮೀನುಗಾರಿಕೆ ಋತು ಅಂತ್ಯಗೊಳ್ಳುವ ಕಾರಣದಿಂದಲೂ ಮೀನುಗಾರಿಕೆಗೆ ತೆರಳಲು ಮನಸ್ಸು ಮಾಡಿಲ್ಲ ಎನ್ನಲಾಗಿದೆ.

ಮಲ್ಪೆ ಬಂದರಿನಲ್ಲಿರುವ 2000 ದೋಣಿಗಳಲ್ಲಿ ಕೇವಲ 250ರಿಂದ 300ರಷ್ಟು ಬೋಟುಗಳು ತೆರಳಿದ್ದು ಲಾಕ್‌ಡೌನ್‌ ನಿಯಮಾನುಸಾರ ಮೀನುಗಾರಿಕೆ ಚಟುವಟಿಕೆಗಳು ನಡೆಯುತ್ತಿದೆ. ಮೀನು ಗಾರ ಸಂಘದ ಜತೆಯಲ್ಲಿ ಕರಾವಳಿ ಪೊಲೀಸರು, ಮೀನುಗಾರಿಕೆ ಇಲಾಖಾ ಅಧಿಕಾರಿಗಳು ಜನಸಂದಣಿ ಆಗದಂತೆ ನೋಡಿಕೊಳ್ಳುತ್ತಿದ್ದಾರೆ.

ಮಂಜುಗಡ್ಡೆ ಕೊರತೆ
ಬಂದರಿನಲ್ಲಿ ಯಾಂತ್ರಿಕ ದೋಣಿಗಳಿಗೆ ಬೇಕಾಗುವಷ್ಟು ಮಂಜುಗಡ್ಡೆ ಸಿಗುತ್ತಿಲ್ಲ.ಕೆಲವು ಮಂಜುಗಡ್ಡೆ ಸ್ಥಾವರಗಳು ಮಾತ್ರ ಕಾರ್ಯನಿರ್ವಹಿಸುತ್ತಿರುವುದರಿಂದ ಕೊರತೆ ಉಂಟಾಗಿದೆ. ಲಾಕ್‌ಡೌನ್‌ ನಂತರ ದೋಣಿಗಳು ಮೀನುಗಾರಿಕೆಗೆ ತೆರಳದಿದ್ದರಿಂದ ಮತ್ತು ಕಾರ್ಮಿಕರ ಕೊರತೆಯಿಂದ ಬಹುತೇಕ ಸ್ಥಾವರಗಳು ಸ್ಥಗಿತಗೊಂಡಿವೆ.
ಬೆಳಗ್ಗೆ 5ರಿಂದ ಸಂಜೆ 5ರವರೆಗೆ ಇಲ್ಲಿ ಮೀನುಗಾರಿಕೆ ಚಟುವಟಿಕೆಗೆ ಅವಕಾಶ ನೀಡಲಾಗಿದ್ದು ಬೋಟು ಮಾಲಕರಿಗೆ, ಉಡುಪಿ ಜಿಲ್ಲೆಯೊಳಗಿನ ನಿಗದಿತ ಮಹಿಳಾ ಹಸಿಮೀನು ಮಾರಾಟಗಾರರಿಗೆ, ಒಣಮೀನು ಮಾರಾಟ ಮಹಿಳೆಯರಿಗೆ, ವ್ಯಾಪಾರಸ್ಥರಿಗೆ, ಫಿಶ್‌ಮೀಲ್‌, ಫೀÅಜಿಂಗ್‌ ಪ್ಲಾಂಟ್‌, ಮೀನು ಇಳಿಸುವವರು ಸೇರಿದಂತೆ ಕೆಲವೇ ವರ್ಗಕ್ಕೆ ಮಾತ್ರ ಪಾಸ್‌ಗಳನ್ನು ನೀಡಲಾಗಿದೆ.

ಎಲ್ಲರಿಗೂ ಪಾಸ್‌ ಅಸಾಧ್ಯ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮೀನುಗಾರ ಸಂಘ ಪಾಸ್‌ ವ್ಯವಸ್ಥೆ ಮಾಡಿದೆ. ಎಲ್ಲರಿಗೂ ಪಾಸ್‌ ಕೊಡಲು ಸಾಧ್ಯವಾಗುತ್ತಿಲ್ಲ. ಈ ನಡುವೆ ಪಾಸ್‌ ದುರುಪಯೋಗ, ನಿಯಮವನ್ನು ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ತತ್‌ಕ್ಷಣ ಮೀನುಗಾರಿಕೆ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಳ್ಳಲಾಗುವುದು.
– ಕೃಷ್ಣ ಎಸ್‌.ಸುವರ್ಣ, ಅಧ್ಯಕ್ಷರು, ಮಲ್ಪೆ ಮೀನುಗಾರ ಸಂಘ

ಜೂನ್‌15ರವರೆಗೆ ಅವಕಾಶಕ್ಕಾಗಿ ಬೇಡಿಕೆ
ಈ ಋತುವಿನಲ್ಲಿ 5 ತಿಂಗಳು ಮಾತ್ರ ಮೀನುಗಾರಿಕೆ ನಡೆದಿತ್ತು. ಜೂನ್‌ 30ರ ವರೆಗೆ ಹೆಚ್ಚುವರಿ ಅವಧಿ ಮೀನುಗಾರಿಕೆ ಅವಕಾಶ ನೀಡಬೇಕೆಂದು ಈಗಾಗಲೇ ಸರಕಾರಕ್ಕೆ ಒತ್ತಡವನ್ನು ತಂದಿದೇªವೆ. ಕನಿಷ್ಠ ಜೂ. 15ರವರೆಗಾದರೂ ಸರಕಾರ ನಮಗೆ ಅವಕಾಶ ನೀಡಬೇಕು.
-ಸುಭಾಸ್‌ ಮೆಂಡನ್‌,
ಮೀನುಗಾರ ಸಂಘದ ಕಾರ್ಯದರ್ಶಿ

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.