ಮಾನಸಿಕ ಆರೋಗ್ಯದ ಸಮತೋಲನದಿಂದ ಸಾಧನೆ ಸಾಧ್ಯ: ಡಾ| ಡಿ. ವೀರೇಂದ್ರ ಹೆಗ್ಗಡೆ

ಅರ್ಕುಳದಲ್ಲಿ ಡಾ| ತುಂಗಾಸ್‌ ಮನಸ್ವಿನಿ ಆಸ್ಪತ್ರೆ ಉದ್ಘಾಟನೆ

Team Udayavani, Jun 9, 2024, 11:25 PM IST

ಮಾನಸಿಕ ಆರೋಗ್ಯದ ಸಮತೋಲನದಿಂದ ಸಾಧನೆ ಸಾಧ್ಯ: ಡಾ| ಡಿ. ವೀರೇಂದ್ರ ಹೆಗ್ಗಡೆ

ಬಂಟ್ವಾಳ: ಆಧ್ಯಾತ್ಮಿಕ ಜ್ಞಾನ ಮನುಷ್ಯನ ವ್ಯಕ್ತಿತ್ವವನ್ನು ಶುದ್ಧ ಮಾಡಲಿದ್ದು, ಮಾನಸಿಕ ಆರೋಗ್ಯದ ಅಸಮತೋಲನವನ್ನು ಸರಿಪಡಿಸಿದಾಗ ಸಾಧನೆ ಮಾಡಲು ಅನುಕೂಲವಾಗುತ್ತದೆ. ಧರ್ಮಸ್ಥಳ ಕ್ಷೇತ್ರದ ವತಿಯಿಂದ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ವೇದಿಕೆ ಸ್ಥಾಪನೆ, ಮದ್ಯವರ್ಜನ ಶಿಬಿರಗಳನ್ನು ಆರಂಭಿಸಿದಾಗ ಡಾ| ರವೀಶ ತುಂಗ ಸಾಕಷ್ಟು ಪ್ರೇರಣೆ ನೀಡಿದ್ದರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ರವಿವಾರ ಫರಂಗಿಪೇಟೆಯ ಅರ್ಕುಳದಲ್ಲಿ ಮಾನಸಿಕ ರೋಗ ಚಿಕಿತ್ಸಾ ತಜ್ಞ ಡಾ| ರವೀಶ ತುಂಗ ಐರೋಡಿ ನೇತೃತ್ವದ ಡಾ| ತುಂಗಾಸ್‌ ಮನಸ್ವಿನಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಮಾತನಾಡಿ, ವ್ಯಕ್ತಿಯು ದೈಹಿಕವಾಗಿ ಸದೃಢನಾಗುವ ಜತೆಗೆ
ಮಾನಸಿಕವಾಗಿಯೂ ಸದೃಢನಾಗಬೇಕು. ನಾನು ಆರೋಗ್ಯ ಸಚಿವನಾಗಿದ್ದಾಗ ಮಾನಸಿಕ ಆರೋಗ್ಯ ಸೇವೆಗೆ ವಿಶೇಷ ಗಮನ ನೀಡಿದ್ದೆ ಎಂದರು.

ಮುಖ್ಯಅತಿಥಿಗಳಾಗಿ ತಮಿಳು ನಾಡಿನ ಮಾಜಿ ಆರೋಗ್ಯ ಸಚಿವ ಡಾ| ಎಚ್‌.ವಿ. ಹಂದೆ, ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಶಾಸಕರಾದ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಡಿ. ವೇದವ್ಯಾಸ ಕಾಮತ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ. ರಮಾನಾಥ ರೈ, ಪಲ್ಸ್‌ ಪೋಲಿಯೊ ಅಂತಾರಾಷ್ಟ್ರೀಯ ನಿರ್ದೇಶಕ ಡಾ| ಪಿ. ನಾರಾಯಣ, ಮಾನಸಿಕ ಆರೋಗ್ಯದ ಉಪನಿರ್ದೇಶಕಿ ಡಾ| ರಜನಿ ಪಾರ್ಥಸಾರಥಿ, ಮಂಗಳೂರು ವಿನಯ ಆಸ್ಪತ್ರೆಯ ನಿರ್ದೇಶಕ ಡಾ| ಹನ್ಸರಾಜ್‌ ಆಳ್ವ, ಮಂಗಳೂರು ವೈಟ್‌ಡೌಸ್‌ನ ನಿರ್ದೇಶಕ ಫಾ| ಆಲ್ವಿನ್‌ ಡಿಕುನ್ಹಾ, ದ.ಕ. ಡಿಎಚ್‌ಒ ಡಾ| ಎಚ್‌.ಆರ್‌.ತಿಮ್ಮಯ್ಯ, ಟಿಎಚ್‌ಒ ಡಾ| ಸುಜಯ ಭಂಡಾರಿ, ಮಾನಸಿಕ ಆರೋಗ್ಯದ ಸಂಯೋಜಕ ಡಾ| ಸುದರ್ಶನ್‌, ಪ್ರಮುಖರಾದ ಕೆ. ಕೃಷ್ಣಕುಮಾರ್‌ ಪೂಂಜ, ಉಮ್ಮರ್‌ ಫಾರೂಕ್‌, ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ರವೀಂದ್ರ ಕಂಬಳಿ, ಸುರೇಂದ್ರ ಕಂಬಳಿ, ರಶೀದಾ ಬಾನು, ಅಬ್ದುಲ್‌ ಜಲೀಲ್‌, ಶಿವಪ್ಪ ಸುವರ್ಣ, ರಮ್ಲಾನ್‌ ಮಾರಿಪಳ್ಳ, ವೃಂದಾ ಪೂಜಾರಿ ಭಾಗವಹಿಸಿದ್ದರು.

ಅಂತಾರಾಷ್ಟ್ರೀಯ ಒಪ್ಪಂದ
ಆಸ್ಪತ್ರೆಯ ಅಧ್ಯಕ್ಷ ಡಾ| ರವೀಶ ತುಂಗ ಹಾಗೂ ಹೊಸದಿಲ್ಲಿಯ ಲ್ಯಾಟಿನ್‌ ಅಮೆರಿಕನ್‌ ಕ್ಯಾರಿಬಿನ್‌ ಟ್ರೇಡ್‌ ಕೌನ್ಸಿಲ್‌ನ ಟ್ರೇಡ್‌ ಕಮಿಷನರ್‌ ಡಾ| ಸೆನೊರಿಟಾ ಐಸಾಕ್‌ ಅವರು ಅಂತಾರಾಷ್ಟ್ರೀಯ ಒಪ್ಪಂದಕ್ಕೆ ಸಹಿ ಹಾಕಿದರು. ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಹಾಗೂ ಆಸ್ಪತ್ರೆಯ ನಿರ್ಮಾಣಕ್ಕೆ ದುಡಿದವರನ್ನು ಸಮ್ಮಾನಿಸಲಾಯಿತು.

ಆಸ್ಪತ್ರೆಯ ಉಪಾಧ್ಯಕ್ಷೆ ಡಾ| ಸುಚಿತ್ರಾ ತುಂಗ, ಕೋಶಾಧಿಕಾರಿ ಎ. ವಿಶ್ವನಾಥ ತುಂಗ, ಕಾರ್ಯದರ್ಶಿ ನಾಗರಾಜ ತುಂಗ, ಟ್ರಸ್ಟಿ ಪ್ರೇರಣಾ ತುಂಗ, ವೈದ್ಯಕೀಯ ಅಧೀಕ್ಷಕ ಡಾ| ಅನಿರುದ್ಧ ಶೆಟ್ಟಿ ಉಪಸ್ಥಿತರಿದ್ದರು. ಆಸ್ಪತ್ರೆಯ ಅಧ್ಯಕ್ಷ ಡಾ| ರವೀಶ್‌ ತುಂಗ ಸ್ವಾಗತಿಸಿದರು. ಸುಮಂಗಲಾ ತುಂಗಾ ವಂದಿಸಿದರು. ಪ್ರಸನ್ನ ಹಾಗೂ ಲವಿಟಾ ಅವರು ಕಾರ್ಯಕ್ರಮ ನಿರ್ವಹಿಸಿದರು.

ಒಳ್ಳೆಯ ಸಂಸ್ಕಾರದಿಂದ ಸಮೃದ್ಧಿ
ಕರಿಂಜೆ ಶ್ರೀ ಜಗದ್ಗುರು ರಾಘವೇಂದ್ರ ಪೀಠದ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ವ್ಯಕ್ತಿಗೆ ಒಳ್ಳೆಯ ಸಂಸ್ಕಾರ ಸಿಕ್ಕಾಗ ಸಮೃದ್ಧಿಯ ಜತೆಗೆ ಉತ್ತಮ ಆರೋಗ್ಯ ಸಿಗಲಿದ್ದು, ಪ್ರಕೃತಿಗೆ ಪೂರಕವಾಗಿ ನಿರ್ಮಾಣಗೊಂಡ ಮನಸ್ವಿನಿ ಆಸ್ಪತ್ರೆಯು ಅಮೃತ ಕಲಶದಂತೆ ಶೋಭಿಸುತ್ತಿದೆ ಎಂದರು.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.