Karnataka: ಬರಪೀಡಿತ ಪಟ್ಟಿಗೆ ಇನ್ನೂ 15 ತಾಲೂಕುಗಳ ಸೇರ್ಪಡೆ
Team Udayavani, Oct 6, 2023, 1:17 AM IST
ಬೆಂಗಳೂರು: ಕೇಂದ್ರ ಮಾರ್ಗಸೂಚಿಯ ಅನ್ವಯ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದರೂ ಇನ್ನೂ 32 ತಾಲೂಕು ಗಳಲ್ಲಿ ಅದೇ ಪರಿಸ್ಥಿತಿ ಇದೆ. ಹಲವೆಡೆ “ಹಸುರು ಬರ’ ಕಾಣಿಸಿಕೊಂಡಿದ್ದು, ಬೆಳೆ ಹಸುರಾಗಿ ಕಂಡರೂ ಇಳುವರಿ ಇಲ್ಲದಂತಾಗಿದೆ. ಇಂತಹ 15 ತಾಲೂಕು ಗಳನ್ನು ಹೆಚ್ಚುವರಿಯಾಗಿ ಎರಡನೇ ಪಟ್ಟಿಯಲ್ಲಿ ಬರಪೀಡಿತ ಪಟ್ಟಿಗೆ ಸೇರಿಸಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ.
ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಗುರುವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಹಾಗೂ ಅಧಿ ಕಾರಿಗಳ ತಂಡವು ಸುಮಾರು ಎರಡು ತಾಸುಗಳ ಕಾಲ ಸಭೆ ನಡೆಸಿ, ಪೂರಕ ದಾಖಲೆಗಳನ್ನು ಒದಗಿಸಿದೆ.
ಇದಾದ ಅನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡದೊಂದಿಗೆ ಮತ್ತೂಂದು ಸುತ್ತಿನ ಚರ್ಚೆ ನಡೆಸಿದ್ದು, ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಮತ್ತು 35 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ಘೋಷಿಸಲಾಗಿದೆ. ಸೆ. 22ರಂದೇ ಸಚಿವ ಸಂಪುಟ ನಿರ್ಣಯ ಕೈಗೊಂಡು ಅದೇ ದಿನ ಕೇಂದ್ರ ಸರಕಾರಕ್ಕೆ ಪಟ್ಟಿ ಕಳುಹಿಸಿಕೊಡಲಾಗಿದೆ. ಶೇ. 90ರಷ್ಟು ಬಿತ್ತನೆ ಆಗಿದ್ದು, 42 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸುರು ಕಾಣಿಸಿದರೂ ಇಳುವರಿ ಮಾತ್ರ ಇಲ್ಲವಾಗಿದೆ. “ಹಸುರು ಬರ’ ತಲೆದೋರಿದೆ. ಹೀಗಾಗಿ ಕೇವಲ ಹಸುರನ್ನಷ್ಟೇ ನೋಡಿ ಬರ ನಿರ್ಧರಿಸುವ ಬದಲು ರೈತರೊಂದಿಗೆ ಸಂವಾದ ನಡೆಸಬೇಕು, ಇಳುವರಿಯ ವಾಸ್ತವ ಸ್ಥಿತಿಗತಿಯ ಅಂದಾಜಿನ ಮೇಲೆ ಬರ ಪರಿಸ್ಥಿತಿಯ ನಿರ್ಧಾರಕ್ಕೆ ಬರಬೇಕು ಎಂದು ಕೇಂದ್ರ ತಂಡಕ್ಕೆ ಮನದಟ್ಟು ಮಾಡಲಾಗಿದೆ.
ಪ್ರಸಕ್ತ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಶೇ. 28ರಷ್ಟು ಮಳೆ ಕೊರತೆ ಆಗಿದೆ. ಬರಗಾಲ ದಿಂದಾಗಿ ಇದುವರೆಗೆ ಸುಮಾರು 20ರಿಂದ 25 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದ್ದು, ಎನ್ಡಿಆರ್ಎಫ್ ಮಾರ್ಗಸೂಚಿಯ ಪ್ರಕಾರ 4,860 ಕೋಟಿ ರೂ. ಪರಿಹಾರ ಕೇಳಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿವರಿಸಿದರು.
ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಕುಡಿಯುವ ನೀರಿನ ಕೊರತೆ, ವಿದ್ಯುತ್ ಕೊರತೆಯ ಆತಂಕವೂ ಸೃಷ್ಟಿಯಾಗಿದೆ. ರಾಜ್ಯ ದಲ್ಲಿ ಹಸುರು ಬರ ತಲೆದೋರಿದೆ. ಎಲ್ಲವನ್ನೂ ಕೇಂದ್ರ ತಂಡಕ್ಕೆ ಮನವರಿಕೆ ಮಾಡಿಕೊಡ ಲಾಗಿದೆ. ಬೆಳೆ ನಷ್ಟ ಪರಿಹಾರ ಹೆಚ್ಚಳದ ಬಗ್ಗೆಯೂ ಗಮನ ಸೆಳೆಯಲಾಗಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.