Excise Department: ಸಿಎಲ್‌-7 ಸನ್ನದು ಪಡೆಯಲು ಸೂಕ್ತ ನಿಯಮ- ಆರ್‌.ಬಿ. ತಿಮ್ಮಾಪುರ


Team Udayavani, Dec 5, 2023, 11:21 PM IST

R B Timmapur

ಬೆಳಗಾವಿ: ಅಬಕಾರಿ ಇಲಾಖೆಯ ಸಿಎಲ್‌-7 (ಬೋರ್ಡಿಂಗ್‌ ಅಂಡ್‌ ಲಾಡ್ಜಿಂಗ್‌) ಸನ್ನದು ಪಡೆಯುವಾಗ ಕಟ್ಟಡದ ವಿನ್ಯಾಸ, ಎಷ್ಟು ಕೊಠಡಿಗಳಿರಬೇಕು? ಎಷ್ಟು ಅಳತೆಯಲ್ಲಿರಬೇಕು? ವಾಹನ ನಿಲುಗಡೆ ಪ್ರದೇಶ ಇರಬೇಕು ಎಂಬಿತ್ಯಾದಿ ನಿಯಮಗಳಿಲ್ಲ. ಹೀಗಾಗಿ ಈ ಬಗ್ಗೆ ಸೂಕ್ತ ನಿಯಮ ರೂಪಿಸುವುದಾಗಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.

ಬಂಗಾರಪೇಟೆ ಕಾಂಗ್ರೆಸ್‌ ಶಾಸಕ ಎಸ್‌.ಎನ್‌. ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, 2020-21 ರಲ್ಲಿ 10 ಸಿಎಲ್‌-7 ಸನ್ನದು ಮಂಜೂರು ಮಾಡಿದ್ದು, 2021-22ರಲ್ಲಿ 18 ಹಾಗೂ 2022-23ರಲ್ಲಿ 24 ಸನ್ನದುಗಳನ್ನು ಮಂಜೂರು ಮಾಡಲಾಗಿದೆ. ಅಲ್ಲದೆ, ಪ್ರಸಕ್ತ ವರ್ಷ ಅಕ್ಟೋಬರ್‌ವರೆಗೆ 4 ಸಿಎಲ್‌-7 ಸನ್ನದುಗಳನ್ನು ಮಂಜೂರು ಮಾಡಿದೆ ಎಂದರು.

ಅಧಿಕಾರಿ ಮದ್ಯದಂಗಡಿ ಪಾಲುದಾರ
ನಾರಾಯಣಸ್ವಾಮಿ ಮಾತನಾಡಿ, ಕೋಲಾರದಲ್ಲಿ ರಂಗಪ್ಪ ಎಂಬ ಸೂಪರಿಂಟೆಂಡೆಂಟ್‌ ನಿಯಮ ಮೀರಿ ಪರವಾನಿಗೆಗಳನ್ನು ನೀಡಿದ್ದಾರೆ. ಸಾಲದ್ದಕ್ಕೆ ಎಲ್ಲ ಮದ್ಯದಂಗಡಿಗಳಲ್ಲೂ ಸಹಭಾಗಿತ್ವ ಹೊಂದಿದ್ದಾರೆ. ವಾಹನ ನಿಲುಗಡೆಗೆ ಜಾಗ ಇಲ್ಲದ ಹೆದ್ದಾರಿ ಬದಿಯಲ್ಲೂ ಸಿಎಲ್‌-7ಗೆ ಅನುಮತಿ ನೀಡಲಾಗಿದೆ. ಸಾಕಷ್ಟು ಅಪಘಾತ ಪ್ರಕರಣಗಳು ಸಂಭವಿಸಿವೆ. 18 ವರ್ಷದಿಂದ ಕೋಲಾರದಲ್ಲೇ ಇರುವ ರಂಗಪ್ಪನನ್ನು ವರ್ಗಾವಣೆ ಮಾಡಿ, ಆತನ ವಿರುದ್ಧ ಕ್ರಮ ಜರಗಿಸಿ ಎಂದು ಆಗ್ರಹಿಸಿದರು. ವಿಷಯದ ಕುರಿತು ವಿಪಕ್ಷ ನಾಯಕ ಆರ್‌. ಅಶೋಕ್‌ ಸಹಿತ ಆಡಳಿತ, ವಿಪಕ್ಷ ಸದಸ್ಯರು ದನಿಗೂಡಿಸಿದರು.

ಮೀಸಲಾತಿಗೆ ಆಗ್ರಹ
ಅಬಕಾರಿ ಇಲಾಖೆಯು ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿ ನೀಡುವ ಸಂದರ್ಭ ಎಸ್ಸಿ, ಎಸ್ಟಿಗೆ ಮೀಸಲಾತಿ ನೀಡುವಂತೆ ಮಳವಳ್ಳಿಯ ನರೇಂದ್ರಸ್ವಾಮಿ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಈಗ ಮಂಜೂರಾತಿ ನೀಡಿರುವ 3975 ಸಿಎಲ್‌-2ಗಳಲ್ಲಿ 49 ಎಸ್‌ಸಿ ಹಾಗೂ 34 ಎಸ್‌ಟಿ, 2444 ಸಿಎಲ್‌-7 ರಲ್ಲಿ 96 ಎಸ್‌ಸಿ, 68 ಎಸ್‌ಟಿ ಸಮುದಾಯಗಳಿಗೆ ಪರವಾನಗಿ ನೀಡಲಾಗಿದೆ ಎಂದರು. ಬಿಜೆಪಿಯ ಸುನಿಲ್‌ಕುಮಾರ್‌ ಮಧ್ಯಪ್ರವೇಶಿಸಿ ಮೀಸಲಾತಿ ಹೆಸರಿನಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ಕೊಡುತ್ತೀರಾ? ಎಂದು ಪ್ರಶ್ನಿಸಿದರು.

 

ಟಾಪ್ ನ್ಯೂಸ್

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.