Adyar ಸಹ್ಯಾದ್ರಿ ಕಾಲೇಜಿನಲ್ಲಿ ಗುರುವಂದನೆ, ನಿವೃತ್ತ ಶಿಕ್ಷಕರಿಗೆ ಸಮ್ಮಾನ


Team Udayavani, Sep 6, 2024, 12:19 AM IST

Adyar ಸಹ್ಯಾದ್ರಿ ಕಾಲೇಜಿನಲ್ಲಿ ಗುರುವಂದನೆ, ನಿವೃತ್ತ ಶಿಕ್ಷಕರಿಗೆ ಸಮ್ಮಾನ

ಮಂಗಳೂರು: ಶಿಕ್ಷಕ ವೃತ್ತಿ ಎಂದರೆ ಸನ್ಯಾಸ ಸ್ವೀಕರಿಸಿದಂತೆ. ಶಿಕ್ಷಕರು ಏನು ಮಾಡುತ್ತಾರೆ ಎಂಬು ದನ್ನು ಸಮಾಜ ನೋಡುತ್ತದೆ. ಶಿಕ್ಷಕರು ಸಮಾಜದಲ್ಲಿ ಗೌರವ ಹಾಗೂ ನಂಬಿಕೆಯ ಸ್ಥಾನಕ್ಕೆ ಅರ್ಹರು. ಶಿಕ್ಷಕರ ಸಹಕಾರದಿಂದ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಭಂಡಾರಿ ಫೌಂಡೇಶನ್‌ ಮಂಗಳೂರು ಮತ್ತು ಸಹ್ಯಾದ್ರಿ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರಗಿದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುರುಗಳಿಗೆ ವಂದಿಸಲು ಸಿಕ್ಕಿರುವ ಅವಕಾಶ ಜೀವನದಲ್ಲಿ ಮರೆಯ ಲಾಗದ ದಿನ. ಬೆಂಜನಪದವು ಹಳ್ಳಿಗಾಡಿನ ಶಾಲೆಯಾಗಿದ್ದು, ಅಲ್ಲಿ ಓದಿದ ಅನೇಕರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಬೆಂಜನಪದವು ಶಾಲೆ ದತ್ತು ಪಡೆಯಲು ಮಂಜುನಾಥ ಭಂಡಾರಿ ಮುಂದಾಗಿದ್ದು, ನನ್ನ ಸಂಪೂರ್ಣ ಸಹಕಾರವಿದೆ ಎಂದರು.

ಭಂಡಾರಿ ಫೌಂಡೇಷನ್‌ ಸ್ಥಾಪಕ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ| ಮಂಜುನಾಥ ಭಂಡಾರಿ ಪ್ರಾಸ್ತಾವಿಕ ವಾಗಿ ಮಾತನಾಡಿ, ಶಿಕ್ಷಣದಿಂದ ವಂಚಿತರಾದ ನನ್ನನ್ನು ಶಿಕ್ಷಣದತ್ತ ಆಕರ್ಷಿಸಿದ ಮಾತೃ ಸ್ವರೂಪಿ ಸಹೋದರಿ ಹಾಗೂ ಲೂಸಿ ಟೀಚರ್‌ ಅವರ ಸಹಕಾರ ಎಂದಿಗೂ ಮರೆಯಲಾರೆ. ಅವರು ಹೊಸ ದಿಸೆಯನ್ನು ತೋರಿದ್ದು, ಅವರ ಮಾರ್ಗದರ್ಶನದಿಂದ ಜೀವನ ಬದಲಾಗಿ ಗುರಿ ಮುಟ್ಟಲು ಸಾಧ್ಯವಾ ಯಿತು. ಪ್ರತಿಯೊಬ್ಬ ವಿದ್ಯಾರ್ಥಿಯ ಸಾಧನೆಗೆ ಇಂತಹ ಗುರುಗಳಿದ್ದರೆ ಯಾವುದೇ ಕಠಿನ ಪರಿಸ್ಥಿತಿ ಎದುರಿಸಲು ಸಾಧ್ಯ. ಆದರೆ ಗುರುಗಳ ಕೃಪೆ ಇದ್ದರೆ ಸಾಧನೆ ಸಾಧ್ಯ ಎಂದರು.

ಶಾಸಕ ಉಮಾನಾಥ ಕೋಟ್ಯಾನ್‌, ಪ್ರಾಂಶುಪಾಲ ಡಾ| ಎಸ್‌.ಎಸ್‌. ಇಂಜನಗಿರಿ, ಟ್ರಸ್ಟಿ ದೇವದಾಸ್‌ ಹೆಗ್ಡೆ ಉಪಸ್ಥಿತರಿದ್ದರು. ಡಾ| ಮಂಜುನಾಥ ಭಂಡಾರಿ ಅವರ ಜೀವನಕ್ಕೆ ದಾರಿ ತೋರಿದ ನಿವೃತ್ತ ಶಿಕ್ಷಕರಾದ ಭಗವಾನ್‌ದಾಸ್‌, ಅನಂತರಾಮ್‌ ಹೆರಳೆ, ಲೂಸಿ ಕಾನ್ಸೆಪ್ಟ ಕುವೆಲ್ಲೋ, ಸದಾನಂದ ಪಿ.ಎಚ್‌., ಮಹಾಬಲ ಆಳ್ವ ಹಾಗೂ ಅಕ್ಕ ಸುಮಾ ಎಂ. ಆಳ್ವ ಅವರನ್ನು ಸಮ್ಮಾನಿಸಲಾಯಿತು.

ಕಾಲೇಜಿನ ಟ್ರಸ್ಟಿ ಜಗನ್ನಾಥ ಚೌಟ ಸ್ವಾಗತಿಸಿದರು. ಅಕ್ಷಯ ಶೆಟ್ಟಿ, ಸ್ಮಿತಾ ಶೆಣೈ ನಿರೂಪಿಸಿದರು.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.