Agri: ಸಂಕಷ್ಟದಲ್ಲಿ “ಕೃಷಿ ಯಂತ್ರಧಾರೆ” ಯೋಜನೆ


Team Udayavani, Nov 17, 2023, 1:19 AM IST

agri tracter

ಕೋಟ: ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಕಡಿಮೆ ಬಾಡಿಗೆಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಒದ ಗಿಸಿ ಖಾಸಗಿ ಕೃಷಿ ಯಂತ್ರಗಳ ಬಾಡಿಗೆ ನಿಯಂತ್ರಿಸಲು 2014-15 ರಲ್ಲಿ ರಾಜ್ಯ ಸರಕಾರ ಜಾರಿಗೆ ತಂದ ಕೃಷಿ ಯಂತ್ರ ಧಾರೆ ಯೋಜನೆ ಸಂಕಷ್ಟಕ್ಕೆ ಸಿಲುಕಿದೆ.

ಹಲವು ಯಂತ್ರ ಕೇಂದ್ರಗಳ ಗುತ್ತಿಗೆ ಅವಧಿ ಮುಗಿದು ವರ್ಷ ಕಳೆದರೂ ನವೀಕರಣವಾಗಿಲ್ಲ. ಜತೆಗೆ ಹೊಸ ಕಂಪೆನಿಗಳು ಗುತ್ತಿಗೆಗೆ ಆಸಕ್ತಿ ತೋರುತ್ತಿಲ್ಲ. ಕೃಷಿ ಇಲಾಖೆಯಡಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಯಂತ್ರಧಾರೆ ಕೇಂದ್ರಗಳನ್ನು ನಡೆಸು ತ್ತಿದ್ದು, ಉಡುಪಿ ಜಿಲ್ಲೆಯಲ್ಲಿ 7 ರ ಪೈಕಿ 4 ಕೇಂದ್ರಗಳ ಗುತ್ತಿಗೆ ಅವಧಿ ಮುಗಿ ದಿದೆ. ದಕ್ಷಿಣ ಕನ್ನಡದ 15 ರಲ್ಲಿ 6 ರ ಗುತ್ತಿಗೆ ಮುಗಿದಿದೆ. ಉಳಿದವೂ ಜನವರಿಯಲ್ಲಿ ಮುಗಿಸಲಿವೆ. ಅದೇ ರೀತಿ ರಾಜ್ಯದ 490 ಹೋಬಳಿಗಳಲ್ಲಿನ 696 ಕೇಂದ್ರದಲ್ಲಿ ಬಹುಪಾಲು ಸ್ಥಗಿ ತಗೊಂಡಿವೆ. ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ನಿರ್ವಹಿಸುತ್ತಿರುವ 25 ಜಿಲ್ಲೆಗಳ 164 ಕೇಂದ್ರಗಳು ಮಾತ್ರ ಚಾಲನೆಯಲ್ಲಿವೆ. ಜನವರಿವರೆಗೆ ಇವುಗಳ ಅವಧಿ.

ಗುತ್ತಿಗೆಗೆ ನಿರುತ್ಸಾಹ ?
ಸರಕಾರದ ಶೇ. 70 ಹಾಗೂ ಗುತ್ತಿಗೆ ವಹಿಸಿಕೊಳ್ಳುವ ಕಂಪೆನಿ ಶೇ. 30 ಅನುದಾನದಲ್ಲಿ ಯಂತ್ರಗಳನ್ನು ಖರೀದಿಸಿ ಕೇಂದ್ರಗಳನ್ನು ಆರಂಭಿಸ ಲಾಗಿತ್ತು. ಭತ್ತ ಕಟಾವು ಯಂತ್ರ, ಟ್ರಾಕ್ಟರ್‌, ಪವರ್‌ ಟಿಲ್ಲರ್‌, ರೋಟರಿ ಟಿಲ್ಲರ್‌, ರೋಟಾವೇಟರ್‌, ಡಿಸ್ಕ್ ನೇಗಿಲು ಸೇರಿದಂತೆ 44 ಬಗೆಯ ಯಂತ್ರೋಪಕರಣಗಳು ಲಭ್ಯವಿ ದ್ದವು. ಸರಕಾರ ಗೊತ್ತುಪಡಿಸಿದ ಬಾಡಿಗೆಗೆ ಈ ಕೇಂದ್ರಗಳು ರೈತರಿಗೆ ಸೇವೆ ನೀಡಬೇಕಿತ್ತು. ಆರಂಭದಲ್ಲಿ ಇದರ ನಿರ್ವಹಣೆಗೆ ಖಾಸಗಿ ಸಂಸ್ಥೆಗಳು ಉತ್ಸಾಹ ತೋರಿದ್ದವು.

ಆದರೆ ಕಡಿಮೆ ಬಾಡಿಗೆ, ಡೀಸೆಲ್‌ ದುಬಾರಿ, ಚಾಲಕರು, ಸಿಬಂದಿ ಕೊರತೆ, ನಿರ್ವಹಣೆಗೆ ಸರಕಾರ ಆಸಕ್ತಿ ವಹಿಸುತ್ತಿಲ್ಲ. ಹೀಗಾಗಿ ಅವಧಿ ಮುಗಿದಿದ್ದರೂ ಇದುವರೆಗೆ ಗುತ್ತಿಗೆ ನವೀಕರಣ ಅಥವಾ ಬದಲಿ ಸಂಸ್ಥೆಗೆ ಹೊಣೆ ವಹಿಸುವ ಕೆಲಸವಾಗಿಲ್ಲ. ಹಲವೆಡೆ ಯಂತ್ರಗಳು ತುಕ್ಕು ಹಿಡಿಯುತ್ತಿವೆ. ಸರಕಾರ ಶೇ. 70 ಅನುದಾನ ನೀಡಿದ್ದು, ಕಂಪೆನಿ ಯಂತ್ರಗಳನ್ನು ಇಲಾಖೆಗೆ ವಾಪಸ್‌ ನೀಡಬೇಕಿದ್ದು ಈ ಪ್ರಕ್ರಿಯೆಯೂ ಸರಿಯಾಗಿ ನಡೆಯುತ್ತಿಲ್ಲ. ಉಡುಪಿ, ದ.ಕ.ದಲ್ಲಿ ಹಿಂದಿನ ಗುತ್ತಿಗೆ ಸಂಸ್ಥೆಗಳೇ ಹೊಸ ವ್ಯವಸ್ಥೆ ಬರುವ ತನಕ ಮುಂದುವರಿಯಲು ಮೌಖೀಕವಾಗಿ ಸೂಚಿಸಲಾಗಿದೆ. ಆದರೆ ಒಪ್ಪಂದವಿ ಲ್ಲದ ಕಾರಣ ಸಮರ್ಪಕ ರೀತಿಯಲ್ಲಿ ಸಾಗದಿರುವುದು ರೈತರಿಗೆ ಸಮಸ್ಯೆ ಸೃಷ್ಟಿಸಿದೆ.

ಯಂತ್ರಧಾರೆಯ ಅಗತ್ಯ

ಕೇಂದ್ರಗಳಲ್ಲಿ ಲಭ್ಯವಿರುವ ಯಂತ್ರ ಗಳಿಗೆ ಕಡಿಮೆ ಬಾಡಿಗೆ ಇರುವು ದರಿಂದ ಖಾಸಗಿ ಯಂತ್ರಗಳ ದರ ಸಮರ, ರೈತರ ಶೋಷಣೆ ತಡೆಯಲು ಅವಕಾಶವಿದೆ. ಉದಾಹರಣೆಗೆ ಕರಾವಳಿವಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಖಾಸಗಿಯಲ್ಲಿ 2,200 – 2,300 ರೂ. ತನಕ ಬಾಡಿಗೆ ಇದ್ದರೆ ಯಂತ್ರಧಾರೆಯಲ್ಲಿ 1,800ರಿಂದ 2,000 ರೂ. ನೊಳಗೆ ಬಾಡಿಗೆ ಇದೆ.

ಕೃಷಿ ಯಂತ್ರಧಾರೆ ಕೇಂದ್ರಗಳಿಂದ ಸಾಕಷ್ಟು ಅನುಕೂಲವಿದೆ. ಇದರ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಎನ್‌. ಚೆಲುವರಾಯಸ್ವಾಮಿ, ರಾಜ್ಯ ಕೃಷಿ ಸಚಿವ

 ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.