Agri:ಬೆಂಬಲ ಬೆಲೆ ವ್ಯವಸ್ಥೆಗೆ ಕಾಯಕಲ್ಪ-`ಉದಯವಾಣಿ’ ಸಂವಾದದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ

- ರೈತರಿಗೆ ವರ್ಷ ಪೂರ್ತಿ ಸ್ಥಿರ ಬೆಲೆ ಕಲ್ಪಿಸುವ ಸಂಕಲ್ಪ

Team Udayavani, Aug 11, 2023, 10:49 PM IST

CHELUVANAYANA MINISTER

ಬೆಂಗಳೂರು: ರೈತರಿಗೆ ವರ್ಷಪೂರ್ತಿ ಸ್ಥಿರ ಬೆಲೆ ಲಭಿಸುವ ರೀತಿ ಬೆಂಬಲ ಬೆಲೆ ವ್ಯವಸ್ಥೆಯನ್ನು ಬದಲಾಯಿಸುವ ಕ್ರಾಂತಿಕಾರಕ ನಿರ್ಧಾರ ಇಲಾಖೆಯ ಮುಂದೆ ಇದೆ. ಕೃಷಿ ಇಲಾಖೆಗೆ ಸಮಗ್ರ ಕಾಯಕಲ್ಪ ನೀಡುವ ಮೊದಲ ಹೆಜ್ಜೆಯಾಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 1,000 ಸ್ಥಾನಗಳಿಗೆ ವೃಂದ ನೇಮಕ ಮಾಡಿಕೊಳ್ಳಲು ಈ ವರ್ಷವೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ.

“ಉದಯವಾಣಿ” ಕಚೇರಿಯಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿ ಕೃಷಿ ಇಲಾಖೆಯಲ್ಲಿ ನಡೆಸಲು ಉದ್ದೇಶಿಸಿರುವ ಮುನ್ನೋಟಗಳ ಬಗ್ಗೆ ಬೆಳಕು ಚೆಲ್ಲಿದರು. ಕೃಷಿ ವಿಮಾ ಪದ್ಧತಿ, ಪರ್ಯಾಯ ಕೃಷಿ ವಿಧಾನ, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕೃಷಿ ಪದ್ಧತಿಯಲ್ಲಿ ಆಗಬೇಕಾದ ಬದಲಾವಣೆ, ಕೃಷಿ ವಿಶ್ವವಿದ್ಯಾಲಯಗಳ ಸದ್ಬಳಕೆ ಸೇರಿದಂತೆ ಹಲವು ಸಂಗತಿಗಳ ಬಗ್ಗೆ ಈ ಸಂದರ್ಭದಲ್ಲಿ ಅವರು ಮಾಹಿತಿ ನೀಡಿದರು.
ಸಂವಾದದ ಪ್ರಮುಖ ಅಂಶಗಳು

ಸ್ಥಿರ ಬೆಲೆ:
ಬೆಂಬಲ ಬೆಲೆ ವ್ಯವಸ್ಥೆಯಲ್ಲಿ ರಚನಾತ್ಮಕ ಬದಲಾವಣೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂ ಚರ್ಚಿಸಿರುವೆ. ಎಷ್ಟೋ ಸಂದರ್ಭದಲ್ಲಿ ಬೆಂಬಲ ಬೆಲೆಯ ಲಾಭ ಮಧ್ಯವರ್ತಿಗಳ ಪಾಲಾಗುತ್ತಿದೆ ಎಂಬ ಆರೋಪಗಳು ನಮ್ಮೆದುರು ಬರುತ್ತಲೇ ಇರುತ್ತದೆ. ಹೀಗಾಗಿ ಈ ಯೋಜನೆಯ ನೇರ ರೈತರಿಗೆ ಲಭಿಸುವಂತೆ ಮಾಡಲು “ಸ್ಥಿರ ಬೆಲೆ’ ಪದ್ಧತಿ ಜಾರಿಗೊಳಿಸಬೇಕಿದೆ. ಅಂದರೆ ರೈತರಿಗೆ ತಾನು ಬೆಳೆದ ಪ್ರತಿ ಬೆಳೆಗೂ ವರ್ಷಪೂರ್ತಿ ಸ್ಥಿರವಾದ ದರ ಸಿಗಬೇಕು. ದರ ಹೆಚ್ಚಾದಾಗ ಲಾಭವಾಗಬೇಕು, ಕಡಿಮೆಯಾದಾಗ ನಷ್ಟವಾಗಬಾರದು. ಈ ನಿಟ್ಟಿನಲ್ಲಿ ವ್ಯವಸ್ಥೆ ರೂಪಿಸುವುದಕ್ಕೆ ಚಿಂತನೆ ನಡೆಸಿದ್ದೇವೆ.

ಈ ಹಿಂದೆ ಕೃಷಿ ಬೆಲೆ ಆಯೋಗವೂ ಇದೇ ಮಾದರಿಯ ವರದಿ ನೀಡಿದೆ. ನಾವು ಸದ್ಯದಲ್ಲೇ ಕೃಷಿ ಬೆಲೆ ಆಯೋಗವನ್ನು ಪುನರ್‌ ರಚನೆ ಮಾಡಿ ಹೊಸ ಅಧ್ಯಕ್ಷರ ನೇಮಕ ಮಾಡುತ್ತೇವೆ. ಆ ಸಂದರ್ಭದಲ್ಲಿ ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ.

ಈ ವರ್ಷ ಸಾವಿರ ಹುದ್ದೆಗಳ ನೇಮಕ
ಕೃಷಿ ಇಲಾಖೆಯಲ್ಲಿ ಶೇ.57ರಷ್ಟು ಹುದ್ದೆಗಳು ಖಾಲಿ ಇವೆ. ರೈತರಿಗೆ ಮಾಹಿತಿ ಹಾಗೂ ಸೌಲಭ್ಯ ಒದಗಿಸಬೇಕಾದ ತಳ ಹಂತದಲ್ಲೇ ಸಿಬ್ಬಂದಿ ಕೊರತೆ ಹೆಚ್ಚಿದೆ. ಇಲಾಖೆಗೆ ಸಮಗ್ರ ಕಾಯಕಲ್ಪ ಒದಗಿಸಬೇಕಿದ್ದರೆ ನೇಮಕ ಪ್ರಕ್ರಿಯೆ ನಡೆಯಲೇಬೇಕು. ಆದರೆ ಸುಮಾರು 4000 ವಿವಿಧ ವೃಂದದ ಹುದ್ದೆಗಳು ಖಾಲಿ ಇವೆ. ಈಗಿನ ಪರಿಸ್ಥಿತಿಯಲ್ಲಿ ತಕ್ಷಣಕ್ಕೆ ಎಲ್ಲವನ್ನೂ ಭರ್ತಿ ಮಾಡಿಕೊಳ್ಳುವುದು ಅಸಾಧ್ಯ. ಆದರೆ ಈ ವರ್ಷ 1000 ಹುದ್ದೆ ನೇಮಕ ಮಾಡಿಕೊಳ್ಳುವುದಕ್ಕೆ ನಿರ್ಧರಿಸಿದ್ದೇವೆ. ಸದ್ಯದಲ್ಲೇ ಈ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.