ಅಂಬಿಕಾಪತಿ ಸಾವಿಗೆ ಶಾಸಕರ ಕಿರುಕುಳ ಕಾರಣ: ಕೆಂಪಣ್ಣ
Team Udayavani, Nov 28, 2023, 11:57 PM IST
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರದ್ದು ಸಹಜ ಸಾವಲ್ಲ. ಮಾಜಿ ಸಚಿವರೂ ಹಾಗೂ ಹಾಲಿ ಶಾಸಕರ ಟಾರ್ಚರ್ನಿಂದ ನೊಂದು ಹೃದಯಘಾತಕ್ಕೊಳಗಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ದೂರಿದ್ದು, ಪ್ರಕರಣ ಹೊಸ ತಿರುವು ಪಡೆದಿದೆ.
ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿದ ಅವರು, ಅಂಬಿಕಾಪತಿ ನನ್ನ ಒಡನಾಡಿಯಾಗಿದ್ದರು. ನನ್ನೊಂದಿಗೆ ಎಲ್ಲ ವಿಷಯಗಳನ್ನೂ ಹೇಳಿಕೊಳ್ಳುತ್ತಿದ್ದರು. ಎಂದಿಗೂ ಕೆಟ್ಟ ಹೆಸರು ಪಡೆದಿರದ ನಾನು, ಕೊನೆಗಾಲದಲ್ಲಿ ಕೆಟ್ಟ ಹೆಸರು ಪಡೆದೆನಲ್ಲ ಎಂದು ನೊಂದುಕೊಳ್ಳುತ್ತಿದ್ದರು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಆದರೂ ನನ್ನನ್ನು ಅಪರಾಧಿ ಮಾಡಿದರಲ್ಲ ಎಂಬ ಕೊರಗು ಅವರಲ್ಲಿತ್ತು. ಆತ್ಮೀಯರಾಗಿದ್ದ ಹಿನ್ನೆಲೆಯಲ್ಲಿ ಹಲವು ವಿಚಾರಗಳನ್ನು ನನ್ನಲ್ಲಿ ಹೇಳಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.
ಮಾಜಿ ಸಚಿವರು ಹಾಗೂ ಹಾಲಿ ಶಾಸಕರೂ ಆಗಿರುವ ಒಬ್ಬರು ಅಂಬಿಕಾಪತಿಗೆ ತೀವ್ರವಾಗಿ ಕಿರುಕುಳ ಕೊಟ್ಟಿದ್ದಾರೆ. ಆದ್ದರಿಂದಲೇ ಅವರು ನೊಂದು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಅಂಬಿಕಾಪತಿ ಅವರ ಮೇಲೆ ಷಡ್ಯಂತ್ರ ರೂಪಿಸಲಾಗಿತ್ತು ಎಂದು ಡಿ. ಕೆಂಪಣ್ಣ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.