Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ


Team Udayavani, Apr 17, 2024, 12:23 AM IST

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

ಪುತ್ತೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿ ಮನೆ-ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ್ದ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆ ಎ. 16ರಂದು ನಡೆದಿದೆ.

ಚುನಾವಣಾಧಿಕಾರಿ ಸೂಚನೆಯಂತೆ ಅಂಗನವಾಡಿ ಕಾರ್ಯಕರ್ತೆ ಯರು ಮನೆ ಮನೆಗೆ ತೆರಳುವ ಕಾರ್ಯ ಎ. 16ರಿಂದ ನಡೆಯುತ್ತಿದೆ. ರೋಟರಿಪುರ ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಅವರು ಚೀಟಿ ವಿತರಣೆಗೆಂದು ಮತದಾರರ ಮನೆಯೊಂದಕ್ಕೆ ಹೋಗುತ್ತಿದ್ದ ವೇಳೆ ಫಾತಿಮಾ ಎಸ್‌. ಏಕಾಏಕಿಯಾಗಿ ಬಂದು ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ. ಗಾಯಗೊಂಡ ಅಂಗನವಾಡಿ ಕಾರ್ಯಕರ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಪ್ರಕರಣವನ್ನು ಅಂಗನವಾಡಿ ಕಾರ್ಯಕತೆರ್ಯರ ಮತ್ತು ಸಹಾಯಕಿಯರ ಸಂಘ ಖಂಡಿಸಿದೆ. ಸಂಘದ ಅಧ್ಯಕ್ಷೆ ಕಮಲಾ ಮತ್ತು ಪದಾಧಿಕಾರಿಗಳು ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಘಟನೆಯಿಂದಾಗಿ ಬಿಎಲ್‌ಒಗಳು ಭೀತರಾಗಿದ್ದಾರೆ. ನಮಗೆ ಯಾವುದೇ ರಕ್ಷಣೆ ಇಲ್ಲ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಹೆಚ್ಚಿನ ಬಿಎಲ್‌ಒಗಳು ಅಸ್ವಸ್ಥರಾಗಿದ್ದಾರೆ. ಆದುದರಿಂದ ಮತದಾರರ ಚೀಟಿಯನ್ನು ಒಂದು ಕಡೆ ನಿಗದಿತ ಜಾಗದಲ್ಲಿ ವಿತರಿಸುವಂತೆ ನಾವು ಸಹಾಯಕ ಚುನಾವಣಾಧಿಕಾರಿ ಮತ್ತು ತಹಶೀಲ್ದಾರ್‌ ಅವರಿಗೆ ಮನವಿ ಮಾಡಲಿದ್ದೇವೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ತಿಳಿಸಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.